Sunday, November 20, 2022

ಸರ್ಕಾರಿ ಶಾಲೆಗೆ ಕ್ರೀಡಾಂಗಣ ಕಲ್ಪಿಸಲು ಸ್ಥಳ ಪರಿಶೀಲನೆ

ಭದ್ರಾವತಿ ತಾಲೂಕಿನ ಕಲ್ಪನ ಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಕ್ರೀಡಾಂಗಣ ಕಲ್ಪಿಸಿಕೊಡುವ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು.
    ಭದ್ರಾವತಿ, ನ. ೨೦ :  ತಾಲೂಕಿನ ಕಲ್ಪನ ಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಕ್ರೀಡಾಂಗಣ ಕಲ್ಪಿಸಿಕೊಡುವ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿತು.
       ಜಾಗೋ ಬಂಜಾರ ಯುವಕರ ಸಂಘದ ಅಧ್ಯಕ್ಷ ಪ್ರವೀಣ್ ನಾಯ್ಕ ನೇತೃತ್ವದಲ್ಲಿ ತಾಲೂಕು ಆಡಳಿತ ಹಾಗು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿ ಸೂಕ್ತ ಕ್ರೀಡಾಂಗಣವಿಲ್ಲದ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರೀಡಾಂಗಣಕ್ಕೆ ಸ್ಥಳ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದೆ.
      ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಜಾಗೋ ಬಂಜಾರ ಯುವಕರ ಸಂಘದ ಉಪಾಧ್ಯಕ್ಷ ಗುಂಡು, ಪ್ರಧಾನ ಕಾರ್ಯದರ್ಶಿ ಪವನ್ ಕುಮಾರ್ ಹಾಗೂ ಕುಮಾರ್, ರಾಕೇಶ್, ರಾಹುಲ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

No comments:

Post a Comment