Saturday, November 12, 2022

ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ವತಿಯಿಂದ ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.
    ಭದ್ರಾವತಿ, ನ. ೧೨: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ವತಿಯಿಂದ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.
    ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಬಲೂನು ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸರ್ಕಾರಿ ನೌಕರರೊಂದಿಗೆ ಕ್ರಿಕೆಟ್ ಆಟ ಆಡುವ ಮೂಲಕ ಸಂಭ್ರಮಿಸಿ ಶುಭ ಕೋರಿದರು.
  ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ.ಮೋಹನ್,  ತಹಸೀಲ್ದಾರ್ ಆರ್. ಪ್ರದೀಪ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಸಂಘದ ಉಪಾಧ್ಯಕ್ಷೆ ಡಿ. ನಾಗರತ್ನ, ರಾಜ್ಯ ಪರಿಷತ್ ಸದಸ್ಯ ಎಸ್.ಪ್ರಕಾಶ್, ಕ್ರೀಡಾ ಕಾರ್ಯದರ್ಶಿ ಕೆ. ಶ್ರೀಕಾಂತ್  ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
    ಕಾರ್ಯದರ್ಶಿ ಡಿ.ಎಸ್ ರಾಜಪ್ಪ ಸ್ವಾಗತಿಸಿದರು. ಖಜಾಂಚಿ ಎಸ್.ಕೆ ಮೋಹನ್ ನಿರೂಪಿಸಿದರು. ಜಾನ್ ನಿರ್ಮಲ್ ವಂದಿಸಿದರು.


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ವತಿಯಿಂದ ಭದ್ರಾವತಿ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕ್ರಿಕೆಟ್ ಆಟ ಆಡುವ ಮೂಲಕ ಸಂಭ್ರಮಿಸಿ ಶುಭ ಕೋರಿದರು.

No comments:

Post a Comment