ಭದ್ರಾವತಿ, ನ. 14: ಹಿರಿಯ ಪತ್ರಕರ್ತ, ತಾಲೂಕಿನ ಕಾರೆಹಳ್ಳಿ ಗ್ರಾಮದ ನಿವಾಸಿ ನಾಗರಾಜ್(69) ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದರು.
ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಇದ್ದರು. ಮೂಲತಃ ಶಿಕ್ಷಕರಾಗಿದ್ದ ನಾಗರಾಜ್ ರವರು ಸುಮಾರು 15 ವರ್ಷಗಳಿಗೂ ಹೆಚ್ಚಿನ ಕಾಲ ಜಿಲ್ಲೆಯ ಹಲವು ಸ್ಥಳೀಯ ದಿನಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.
ಕೆಲವು ವರ್ಷಗಳಿಂದ ಅನಾರೋಗ್ಯ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದರು. ಇವರ ನಿಧನಕ್ಕೆ ನಗರದ ಪತ್ರಕರ್ತರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment