Saturday, November 19, 2022

ನ.೨೦ರಂದು ಭೂಮಿಕಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ವಿಶೇಷ ಕಾರ್ಯಕ್ರಮ

    ಭದ್ರಾವತಿ, ನ. ೧೯: ಕನ್ನಡ ನಾಡು-ನಡೆ-ನುಡಿ ಬಿಂಬಿಸುವ ನಗರದ ಭೂಮಿಕಾ ವೇದಿಕೆ ವತಿಯಿಂದ ನ.೨೦ರ ಭಾನುವಾರ ಸಂಜೆ ೬ ಗಂಟೆಗೆ ೬೭ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ನಿವೃತ್ತ ಉಪನ್ಯಾಸಕ, ಅಂಕಣಕಾರ ಹಾಗು ಗಮಕಿ ರಾಮಸುಬ್ರಾಯ ಶೇಟ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಭೂಮಿಕಾ ವೇದಿಕೆ ಅಧ್ಯಕ್ಷ ಡಾ. ಕೃಷ್ಣ ಎಸ್. ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

No comments:

Post a Comment