ಭದ್ರಾವತಿ, ನ. ೧೭ : ಕರ್ನಾಟಕ ಯೋಗ ಸಂಸ್ಥೆ ವತಿಯಿಂದ ೪೧ನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ಷಿಫ್ ಹಾಗು ೨೮ನೇ ಕರ್ನಾಟಕ ರಾಜ್ಯ ವಿಜಯೇತರರ ಯೋಗಾಸನ ಸ್ಪರ್ಧೆ ನ. ೧೯ ಮತ್ತು ೨೦ ಎರಡು ದಿನಗಳ ಕಾಲ ಆಯೋಜಿಸಲಾಗಿದೆ.
ವಿಐಎಸ್ಎಲ್ ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಮುಂಭಾಗದಲ್ಲಿರುವ ಶ್ರೀರಾಮ ಸಮುದಾಯ ಭವನದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ವಿವೇಕಾನಂದ ಯೋಗ ಸಂಸ್ಥೆ ಸಹಯೋಗದೊಂದಿಗೆ ನಡೆಯಲಿರುವ ಸ್ಪರ್ಧೆಯಲ್ಲಿ ರಾಜ್ಯದ ವಿವಿಧೆಡೆಗಳಿಂದ ಯೋಗಪಟುಗಳು ಭಾಗವಹಿಸಲಿದ್ದು, ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment