Wednesday, November 23, 2022

ಬಂಜಾರ ರೈತರ ಸಂಘ ಅಸ್ತಿತ್ವಕ್ಕೆ : ರಾಜ್ಯಾಧ್ಯಕ್ಷರಾಗಿ ಕೃಷ್ಣನಾಯ್ಕ

ನೂತನವಾಗಿ ರಾಜ್ಯ ಬಂಜಾರ ರೈತರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಭದ್ರಾವತಿ ನಗರದಲ್ಲಿ ಆಯೋಜಿಸಲಾಗಿದ್ದ ಪದಗ್ರಹಣ ಸಮಾರಂಭವನ್ನು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಉದ್ಘಾಟಿಸಿದರು.
    ಭದ್ರಾವತಿ, ನ. ೨೩ : ನೂತನವಾಗಿ ರಾಜ್ಯ ಬಂಜಾರ ರೈತರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ನಗರದಲ್ಲಿ ಆಯೋಜಿಸಲಾಗಿದ್ದ ಪದಗ್ರಹಣ ಸಮಾರಂಭವನ್ನು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಉದ್ಘಾಟಿಸಿದರು.
      ಸಮಾರಂಭದಲ್ಲಿ ಮಾತನಾಡಿದ ಪ್ರಮುಖರು, ಹೆಚ್ಚು ಸಂಘಟಿತರಾಗಿ ರೈತರ ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಹೆಚ್ಚು ಗಮನ ಹರಿಸಬೇಕೆಂದರು.
      ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ದಲಿತ ಮುಖಂಡ ಕುಬೇಂದ್ರಪ್ಪ, ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆನಂದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
      ನೂತನ ಪದಾಧಿಕಾರಿಗಳು: ರಾಜ್ಯಾಧ್ಯಕ್ಷರಾಗಿ ಕೃಷ್ಣನಾಯ್ಕ, ಉಪಾಧ್ಯಕ್ಷರಾಗಿ ಸುನಿಲ್‌ಕುಮಾರ್(ದಾವಣಗೆರೆ) ಮತ್ತು ರಮೇಶ್‌ನಾಯ್ಕ(ತುಮಕೂರು), ಪ್ರಧಾನ ಕಾರ್ಯದರ್ಶಿಯಾಗಿ ಶಂಕರನಾಯ್ಕ, ಕಾರ್ಯಾಧ್ಯಕ್ಷರಾಗಿ ರಮೇಶ್‌ನಾಯ್ಕ(ಕೊಪ್ಪಳ), ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ಉಷಾನಾಯ್ಕ, ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಮಂಜಾನಾಯ್ಕ, ಸಲಹೆಗಾರರಾಗಿ ಅಮೋಸ್, ಕಾನೂನು ಸಲಹೆಗಾರರಾಗಿ ಎಚ್.ಆರ್ ಲಮಾಣಿ(ಹಾವೇರಿ), ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಮಂಜಾನಾಯ್ಕ ಮತ್ತು ಬಾಗಲಕೋಟೆ ಜಿಲ್ಲಾಧ್ಯಕ್ಷರಾಗಿ ಶಿವರಾಜ ಸೇರಿದಂತೆ ಇನ್ನಿತರರು ಪದಗ್ರಹಣ ಸ್ವೀಕರಿಸಿದರು.
      ಸಂಘದ ರಾಜ್ಯಾಧ್ಯಕ್ಷ ಕೃಷ್ಣನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಗಣೇಶ್ ಪ್ರಾರ್ಥಿಸಿ, ಮಂಜನಾಯ್ಕ ಸ್ವಾಗತಿಸಿದರು.  

No comments:

Post a Comment