ಭದ್ರಾವತಿ, ನ. ೨೫ : ನಗರದ ಚುಂಚಾದ್ರಿ ಮಹಿಳಾ ವೇದಿಕೆ ಹಾಗು ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಆಚರಣಾ ಸಮಿತಿ ವತಿಯಿಂದ ರಾಜ್ಯ ಕಂಡ ಧೀಮಂತ ರಾಜಕಾರಣಿ ದಿವಂಗತ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಂದರ್ಭದಲ್ಲಿ ಅವರ ಸಾಧನೆಯ ಸ್ಮರಣೆ ಕಾರ್ಯಕ್ರಮ ನ.೨೬ರಂದು ಬೆಳಿಗ್ಗೆ ೧೦.೩೦ಕ್ಕೆ ಅಪ್ಪರ್ ಹುತ್ತಾ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಧಾನಸಭೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉದ್ಘಾಟಿಸಲಿದ್ದು, ಚುಂಚಾದ್ರಿ ಮಹಿಳಾ ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಶಾಂತವೇರಿ ಗೋಪಾಲಗೌಡರ ಪುತ್ರಿ ಇಳಾಗೀತಾ ಮತ್ತು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಟಿ ರವಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಚುಂಚಾದ್ರಿ ಮಹಿಳಾ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಲಿದ್ದಾರೆ.
No comments:
Post a Comment