Thursday, December 1, 2022

ಗೆಲುವಿನ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ : ಬಸವರಾಜ ಬೊಮ್ಮಾಯಿ

ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಅಂತರ್ ಶಾಲಾಕಾಲೇಜುಗಳ ರಜತ ಚುಂಚಾದ್ರಿ ಕ್ರೀಡೋತ್ಸವ, ೨೫ನೇ ರಾಜ್ಯಮಟ್ಟದ ಕ್ರೀಡಾಕೂಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
    ಭದ್ರಾವತಿ, ಡಿ. ೧: ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಸೋತಾಗ ಬೇಸರಗೊಳ್ಳದೆ ಪುನಃ ಗೆಲುವಿಗಾಗಿ ಪ್ರಯತ್ನಿಸಬೇಕು. ಪ್ರತಿಯೊಬ್ಬರಿಗೂ ಹಲವಾರು ಅವಕಾಶಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
    ತಾಲೂಕಿನ ಕಾರೇಹಳ್ಳಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಅಂತರ್ ಶಾಲಾಕಾಲೇಜುಗಳ ರಜತ ಚುಂಚಾದ್ರಿ ಕ್ರೀಡೋತ್ಸವ, ೨೫ನೇ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು. ಪ್ರತಿಯೊಬ್ಬರು ಗೆಲುವಿನ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆ ಸಹ ಒಂದು ಬದುಕು ಎಂಬುದನ್ನು ಭಾವಿಸಿಕೊಳ್ಳಬೇಕು. ಭಗವಂತ ಗೆಲುವಿಗೆ ಹತ್ತಾರು ಅವಕಾಶಗಳನ್ನು ನೀಡಿರುತ್ತಾನೆ. ನಿರಂತರ ಪ್ರಯತ್ನದಿಂದ ಗೆಲುವು ಸಾಧ್ಯ. ಸೋತಾಗ ಬೇಸರಪಡಬಾರದು. ಪ್ರತಿಯೊಬ್ಬರಲ್ಲೂ ಕ್ರೀಡಾಸ್ಪೂರ್ತಿ ನಿರಂತರವಾಗಿರಬೇಕೆಂದರು.
    ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಶ್ರೀ ಕ್ಷೇತ್ರದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಗೃಹ ಸಚಿವ ಅರಗಜ್ಞಾನೇಂದ್ರ, ಆರೋಗ್ಯ ಸಚಿವ ಡಾ. ಡಿ. ಸುಧಾಕರ್, ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನಪರಿಷತ್ ಸದಸ್ಯರಾದ ಎಸ್.ಎಸ್ ಭೋಜೇಗೌಡ, ಡಿ.ಎಸ್ ಅರುಣ್, ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಮುಖರು, ವಿವಿಧ ಶಾಲೆಗಳ ಆಡಳಿತ ಮಂಡಳಿಯವರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment