Wednesday, December 14, 2022

ಗುಡ್ಡದ ನೇರಲಕೆರೆ ಗ್ರಾಮದ ಜಮೀನುಗಳಿಗೆ ಕಾಡಾ ಅಧ್ಯಕ್ಷೆ ಭೇಟಿ : ಪರಿಶೀಲನೆ

ಭದ್ರಾವತಿ ತಾಲೂಕಿನ ಕೊಮಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡ್ಡದ ನೇರಲಕೆರೆ ಗ್ರಾಮದ ಜಮೀನುಗಳಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ ಪವಿತ್ರರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಭದ್ರಾವತಿ, ಡಿ. ೧೪ : ತಾಲೂಕಿನ ಕೊಮಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡ್ಡದ ನೇರಲಕೆರೆ ಗ್ರಾಮದ ಜಮೀನುಗಳಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ ಪವಿತ್ರರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ರೈತರ ಮನವಿ ಮೇರೆಗೆ ಗ್ರಾಮಕ್ಕೆ ಭೇಟಿ ನೀಡಿದ ಅಧ್ಯಕ್ಷರು, ಜಮೀನುಗಳ ರಸ್ತೆ, ಕಾಲುವೆ ವೀಕ್ಷಿಸಿದರು. ಗ್ರಾಮದ ಚಾನಲ್ ಟ್ಯೂಬ್ ಸಂಪೂರ್ಣವಾಗಿ ಹಾಳಾಗಿರುವುದು ಕಂಡು ಬಂದಿದ್ದು, ತಕ್ಷಣ ಸ್ಥಳದಲ್ಲಿಯೇ ನೀರಾವರಿ ಇಲಾಖೆ ಅಧಿಕಾರಿಗಳಿಗೆ ದುರಸ್ತಿಗೊಳಿಸುವಂತೆ ಸೂಚಿಸಿದರು. ಗ್ರಾಮದ ಮುಖಂಡರು, ರೈತರು ಉಪಸ್ಥಿತರಿದ್ದರು.

No comments:

Post a Comment