Monday, December 19, 2022

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ : ಎನ್‌ಎಸ್‌ಯುಐ ಪ್ರತಿಭಟನೆ

ನೂತನ ರಾಷ್ಟೀಯ ಶಿಕ್ಷಣ ನೀತಿ ವಿರೋಧಿಸಿ ಹಾಗು ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಭದ್ರಾವತಿಯಲ್ಲಿ ನ್ಯಾಷನಲ್ ಸ್ಟುಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ(ಎನ್‌ಎಸ್‌ಯುಐ) ತಾಲೂಕು ಶಾಖೆವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯ ಹಾಗು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  
    ಭದ್ರಾವತಿ, ಡಿ. ೧೯: ನೂತನ ರಾಷ್ಟೀಯ ಶಿಕ್ಷಣ ನೀತಿ ವಿರೋಧಿಸಿ ಹಾಗು ವಿದ್ಯಾರ್ಥಿಗಳ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ನ್ಯಾಷನಲ್ ಸ್ಟುಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ(ಎನ್‌ಎಸ್‌ಯುಐ) ತಾಲೂಕು ಶಾಖೆವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ರಾಜ್ಯ ಹಾಗು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  
    ವಿಶ್ವ ವಿದ್ಯಾನಿಲಯ ಹಾಗು ಸಂಯುಕ್ತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಪ್ರತಿಭಟನೆ ಮೂಲಕ ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ಎನ್‌ಎಸ್‌ಯುಐ ತಾಲೂಕು ಅಧ್ಯಕ್ಷ ಮುಸ್ವಿರ್ ಬಾಷ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷ ಗಂಗಾಧರ್, ಕಾರ್ಯದರ್ಶಿ ಶರಣ್, ಸಲಹೆಗಾರ ಮುರುಗೇಶ್, ಇಮ್ರಾನ್, ಸಿಡಿಸಿ ಸದಸ್ಯರಾದ ಚಂದ್ರಣ್ಣ,  ಪ್ರಮೋದ್ ನಗರಸಭೆ ಸದಸ್ಯ ಜಾರ್ಜ್, ಯುವ ಮುಖಂಡ ಅಭಿಲಾಷ್, ನಾಗರಾಜ್, ಅಭಿ, ಶ್ಯಾಮ್, ಹರ್ಷ, ಮನು, ದೀಕ್ಷಿ, ಸಂಗೀತ, ಬಿಂದು, ಸಿಂಧು, ರಂಜಿತಾ ಮತ್ತು ಭಾವನ  ಪಾಲ್ಗೊಂಡಿದ್ದರು.

No comments:

Post a Comment