Tuesday, December 20, 2022

ನ್ಯಾಯಾಲಯದ ಆದೇಶದ ನೆಪದಲ್ಲಿ ಮನೆಗಳ ನೆಲಸಮ : ದೂರು ದಾಖಲು

ಭದ್ರಾವತಿ ಹೊಸಮನೆ ಅಶ್ವಥ್‌ನಗರದ ಭೂತಪ್ಪ ದೇವಸ್ಥಾನ ಸಮೀಪ ಸುಮಾರು ೪೦-೫೦ ವರ್ಷಗಳಿಂದ  ವಾಸಿಸುತ್ತಿದ್ದ ನಿವಾಸಿಗಳ ಮನೆಗಳನ್ನು ವ್ಯಕ್ತಿಯೊಬ್ಬರು ಏಕಾಏಕಿ ನೆಲಸಮಗೊಳಿಸಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಗಣೇಶ್ ಭೇಟಿ ನೀಡಿ ನಿವಾಸಿಗಳಿಗೆ ಧೈರ್ಯ ತುಂಬುವ ಮೂಲಕ ಮನೆಗಳನ್ನು ನೆಲಸಮಗೊಳಿಸಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
    ಭದ್ರಾವತಿ, ಡಿ. ೨೦: ಹೊಸಮನೆ ಅಶ್ವಥ್‌ನಗರದ ಭೂತಪ್ಪ ದೇವಸ್ಥಾನ ಸಮೀಪ ಸುಮಾರು ೪೦-೫೦ ವರ್ಷಗಳಿಂದ  ವಾಸಿಸುತ್ತಿದ್ದ ನಿವಾಸಿಗಳ ಮನೆಗಳನ್ನು ವ್ಯಕ್ತಿಯೊಬ್ಬರು ಏಕಾಏಕಿ ನೆಲಸಮಗೊಳಿಸಿರುವ ಘಟನೆ ನಡೆದಿದ್ದು, ಈ ಸಂಬಂಧ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಸುಮಾರು ೬ ಕುಟುಂಬಗಳು ಮನೆ ನಿರ್ಮಿಸಿಕೊಂಡು ವಾಸಿಸುತ್ತಿದ್ದು, ಯುವರಾಜ್ ಎಂಬಾತ ಜಾಗ ಖಾಸಗಿ ವ್ಯಕ್ತಿಗಳು ಸೇರಿದ್ದಾಗಿದೆ. ಈ ಸಂಬಂಧ ನ್ಯಾಯಾಲಯದಿಂದ ಆದೇಶವಾಗಿದೆ ಎಂದು ೬ ಮನೆಗಳ ಪೈಕಿ ೩ ಮನೆಗಳನ್ನು ನೆಲಸಮಗೊಳಿಸಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ಕಛೇರಿ, ನಗರಸಭೆ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಈ ಸಂದರ್ಭದಲ್ಲಿ ನ್ಯಾಯಾಲಯ ಯಥಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶಿಸಿರುವುದು ಕಂಡು ಬಂದಿದೆ ಎನ್ನಲಾಗಿದೆ. ಆದರೆ ಏಕಾಏಕಿ ಮನೆಗಳನ್ನು ನೆಲಸಮಗೊಳಿಸುವ ಮೂಲಕ ವಿವಾದಕ್ಕೆ ಕಾರಣವಾಗಿದೆ ಎನ್ನಲಾಗಿದೆ.
    ಈ ಸಂಬಂಧ ಯುವರಾಜ್ ವಿರುದ್ಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣದಾಖಲಾಗಿದೆ ಎನ್ನಲಾಗಿದೆ.  ನಿವಾಸಿಗಳಿಗೆ ಈಗಾಗಲೆ ೯೪ಸಿಸಿ ಅಡಿಯಲ್ಲಿ ತಾಲೂಕು ಆಡಳಿತದಿಂದ ಹಕ್ಕುಪತ್ರಗಳನ್ನು ನೀಡಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಗಣೇಶ್ ಸ್ಥಳಕ್ಕೆ ಭೇಟಿ ನೀಡಿ ನಿವಾಸಿಗಳಿಗೆ ಧೈರ್ಯ ತುಂಬುವ ಮೂಲಕ ಮನೆಗಳನ್ನು ನೆಲಸಮಗೊಳಿಸಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.


ಭದ್ರಾವತಿ ಹೊಸಮನೆ ಅಶ್ವಥ್‌ನಗರದ ಭೂತಪ್ಪ ದೇವಸ್ಥಾನ ಸಮೀಪ ಸುಮಾರು ೪೦-೫೦ ವರ್ಷಗಳಿಂದ  ವಾಸಿಸುತ್ತಿದ್ದ ನಿವಾಸಿಗಳ ಮನೆಗಳನ್ನು ವ್ಯಕ್ತಿಯೊಬ್ಬರು ಏಕಾಏಕಿ ನೆಲಸಮಗೊಳಿಸಿರುವ ಘಟನೆ ನಡೆದಿದೆ.
ಚಿತ್ರ: ಡಿ-ಬಿಡಿವಿಟಿ(ಎ)




No comments:

Post a Comment