Saturday, December 10, 2022

ದೊಡ್ಡಗೊಪ್ಪೇನಹಳ್ಳಿ ನೀರು ಬಳಕೆದಾರರ ಸಂಘದ ಕಛೇರಿಗೆ ಪವಿತ್ರ ರಾಮಯ್ಯ ಭೇಟಿ : ಅರ್ಜಿ ಸ್ವೀಕಾರ

ಭದ್ರಾವತಿ ತಾಲೂಕಿನ ದೊಡ್ಡಗೊಪ್ಪೇನಹಳ್ಳಿ(ಡಿ.ಜಿ ಹಳ್ಳಿ) ನೀರು ಬಳಕೆದಾರರ ಸಹಕಾರ ಸಂಘದ ಕಛೇರಿಗೆ ಶನಿವಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಭೇಟಿ ನೀಡಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು.
    ಭದ್ರಾವತಿ, ಡಿ. ೧೦: ತಾಲೂಕಿನ ದೊಡ್ಡಗೊಪ್ಪೇನಹಳ್ಳಿ(ಡಿ.ಜಿ ಹಳ್ಳಿ) ನೀರು ಬಳಕೆದಾರರ ಸಹಕಾರ ಸಂಘದ ಕಛೇರಿಗೆ ಶನಿವಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ ಭೇಟಿ ನೀಡಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಿದರು.
      ಗೊಂದಿ ಎಡನಾಲೆ ಸಂಬಂಧ ಸಮಸ್ಯೆಗಳ ಕುರಿತು ಚರ್ಚಿಸಿ ರೈತರಿಂದ ಅರ್ಜಿಗಳನ್ನು ಸ್ವೀಕರಿಸಿದರು. ಸಮಸ್ಯೆಗಳಿಗೆ ಪೂರಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರುಗಳು ಹಾಗು ರೈತರು ಉಪಸ್ಥಿತರಿದ್ದರು. ಸಂಘದ ವತಿಯಿಂದ ಕೆ.ಬಿ ಪವಿತ್ರ ರಾಮಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

No comments:

Post a Comment