Thursday, December 15, 2022

ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟಕ್ಕೆ ಯತ್ನ : ಗ್ರಾಮಾಂತರ ಪೊಲೀಸರ ದಾಳಿ

೧.೭೬ ಲಕ್ಷ ರು. ಮೌಲ್ಯದ ೮೦ ಕ್ವಿಂಟಲ್ ಅಕ್ಕಿ ವಶ

ಪಡಿತರ ಅಕ್ಕಿಯನ್ನು ಅನಧಿಕೃತವಾಗಿ ಸಂಗ್ರಹಿಸಿ ಕ್ಯಾಂಟರ್ ವಾಹನಕ್ಕೆ ತುಂಬಿಕೊಂಡು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಸುಮಾರು ೧.೭೬ ಲಕ್ಷ ರು. ಮೌಲ್ಯದ ೮೦ ಕ್ವಿಂಟಲ್ ಪಡಿತರ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
    ಭದ್ರಾವತಿ, ಡಿ. ೧೫ :  ಪಡಿತರ ಅಕ್ಕಿಯನ್ನು ಅನಧಿಕೃತವಾಗಿ ಸಂಗ್ರಹಿಸಿ ಕ್ಯಾಂಟರ್ ವಾಹನಕ್ಕೆ ತುಂಬಿಕೊಂಡು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ  ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಸುಮಾರು ೧.೭೬ ಲಕ್ಷ ರು. ಮೌಲ್ಯದ ೮೦ ಕ್ವಿಂಟಲ್ ಪಡಿತರ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
    ತಾಲೂಕಿನ ಮಜ್ಜಿಗೇನಹಳ್ಳಿ ಗ್ರಾಮದ ಅಡಕೆ ತೋಟವೊಂದರಲ್ಲಿ ಅನಧಿಕೃತವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗಿದ್ದು, ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡ ತಂಡ ದಾಳಿ ನಡೆಸಿದೆ.
    ವೀರಾಪುರಗ್ರಾಮದ ಮಹಮದ್ ಸಮೀರ್(೩೮) ಮತ್ತು ವಾಹನದ ಚಾಲಕ ಪರ್ವೇಜ್ ಪಾಷಾ(೪೨)ರನ್ನು ಬಂಧಿಸಲಾಗಿದೆ. ಕ್ಯಾಂಟರ್‌ನಲ್ಲಿದ್ದ ಒಟ್ಟು ೧೬೦ ಪಡಿತರ ಅಕ್ಕಿ ತುಂಬಿದ ಚೀಲ ಹಾಗು ಕೃತ್ಯಕ್ಕೆ ಬಳಸಿದ ಕ್ಯಾಂಟರ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments:

Post a Comment