ಭದ್ರಾವತಿಯ ರಂಗಕರ್ಮಿ, ಕಿರುತೆರೆ ಕಲಾವಿದ ಅಪರಂಜಿ ಶಿವರಾಜ್ರವರು ಬುಧವಾರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸುಮಾರು ೯೦ ನಿಮಿಷ ಕಾರ್ಯಾಗಾರ ನಡೆಸಿಕೊಟ್ಟರು.
ಭದ್ರಾವತಿ, ಡಿ. ೨೮ : ರಂಗಕರ್ಮಿ, ಕಿರುತೆರೆ ಕಲಾವಿದ ಅಪರಂಜಿ ಶಿವರಾಜ್ರವರು ಬುಧವಾರ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸುಮಾರು ೯೦ ನಿಮಿಷ ಕಾರ್ಯಾಗಾರ ನಡೆಸಿಕೊಟ್ಟರು.
ವಿದ್ಯಾರ್ಥಿಗಳಿಗೆ ಓದುವಕ್ರಮ, ನೆನಪಿನ ಶಕ್ತಿ, ಏಕಾಗ್ರತೆ, ಪರೀಕ್ಷಾ ಭಯ ಮತ್ತು ಶಿಸ್ತು ವಿಷಯಗಳಿಗೆ ಸಂಬಂಧಿಸಿದಂತೆ ಅಪರಂಜಿ ಶಿವರಾಜ್ರವರು ೨೦೧೭ ರಿಂದಲೂ ಆಪ್ತ ಸಲಹೆಗಾರರಾಗಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಸಿಕೊಂಡು ಬರುತ್ತಿದ್ದಾರೆ.
ಕಳೆದ ೬ ವರ್ಷಗಳಿಂದಲೂ ಮುಖ್ಯವಾಗಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಸುಧಾರಣೆ ಕಂಡುಕೊಳ್ಳುವ ಮೂಲಕ ಉತ್ತಮ ಫಲಿತಾಂಶ ಪಡೆದುಕೊಳ್ಳಲು ಕಾರ್ಯಾಗಾರ ಸಹಕಾರಿಯಾಗಿದೆ ಎನ್ನುತ್ತಾರೆ ಅಪರಂಜಿ ಶಿವರಾಜ್.
ಕ್ಷೇತ್ರ ಶಿಕ್ಷಣಾಧಿಕಾರಿಗಳು ಇವರ ಕಾರ್ಯಾಗಾರಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದು, ಕಾರ್ಯಾಗಾರ ನಡೆಸಲು ಇಲಾಖೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ.
No comments:
Post a Comment