Thursday, December 15, 2022

ಎರಡನೇ ಹಂತದ ಕಾಮಗಾರಿ ಮುಕ್ತಾಯ : ಧಾರ್ಮಿಕ ಆಚರಣೆ

ಭದ್ರಾವತಿ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಹಳೇನಗರದ ಪಾರ್ಕ್ ಬಡಾವಣೆಯಲ್ಲಿರುವ ಪತ್ರಿಕಾ ಭವನದ ಎರಡನೇ ಹಂತದ ಕಾಮಗಾರಿ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಧಾರ್ಮಿಕ ಆಚರಣೆಗಳನ್ನು ನೆರವೇರಿಸಲಾಯಿತು. 
    ಭದ್ರಾವತಿ, ಡಿ. ೧೫ : ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಹಳೇನಗರದ ಪಾರ್ಕ್ ಬಡಾವಣೆಯಲ್ಲಿರುವ ಪತ್ರಿಕಾ ಭವನದ ಎರಡನೇ ಹಂತದ ಕಾಮಗಾರಿ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಧಾರ್ಮಿಕ ಆಚರಣೆಗಳನ್ನು ನೆರವೇರಿಸಲಾಯಿತು.
    ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ದಂಪತಿ ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು. ಶ್ರೀನಿವಾಸ ಆರಾಧ್ಯ ಮತ್ತು ಮನು ಆರಾಧ್ಯ ನೇತೃತ್ವದ ತಂಡ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿತು.
    ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಪದಾಧಿಕಾರಿಗಳಾದ ಕೂಡ್ಲಿಗೆರೆ ಮಂಜುನಾಥ್, ಬಸವರಾಜ್, ಪಿಲೋಮಿನಾ, ಅನಂತಕುಮಾರ್, ಹಿರಿಯ ಸದಸ್ಯರಾದ ಎನ್. ಬಾಬು, ಶಿವಶಂಕರ್, ಗಂಗಾನಾಯ್ಕ್ ಗೊಂದಿ, ಬದರಿನಾರಾಯಣ ಶ್ರೇಷ್ಠಿ, ಟಿ.ಎಸ್ ಆನಂದಕುಮಾರ್, ಸುದರ್ಶನ್, ಶೈಲೇಶ್‌ಕೋಠಿ, ರವೀಂದ್ರನಾಥ್(ಬ್ರದರ್), ಸೈಯದ್‌ಖಾನ್, ಕೆ.ಆರ್ ಶಂಕರ್, ರಾಬರ್ಟ್ ಹಾಗು ಪತ್ರಿಕಾಭವನ ವ್ಯವಸ್ಥಾಪಕಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment