Saturday, December 24, 2022

ಶೃಂಗೇರಿ ಮೆಸ್ಕಾಂ ಕಛೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿ ಪಂಜಿನ ಪ್ರತಿಭಟನೆ

ಶೃಂಗೇರಿ ಮೆಸ್ಕಾಂ ಕಛೇರಿಯಲ್ಲಿದ್ದ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅವಮಾನಗೊಳಿಸಿರುವುದನ್ನು ಖಂಡಿಸಿ ಶನಿವಾರ ಛಲವಾದಿ ಮಹಾಸಭಾ ವತಿಯಿಂದ ಭದ್ರಾವತಿಯಲ್ಲಿ ಪಂಜಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
    ಭದ್ರಾವತಿ, ಡಿ. ೨೪ : ಶೃಂಗೇರಿ ಮೆಸ್ಕಾಂ ಕಛೇರಿಯಲ್ಲಿದ್ದ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅವಮಾನಗೊಳಿಸಿರುವುದನ್ನು ಖಂಡಿಸಿ ಶನಿವಾರ ಛಲವಾದಿ ಮಹಾಸಭಾ ವತಿಯಿಂದ ಪಂಜಿನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು.
       ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಪಂಜಿನ ಪ್ರತಿಭಟನೆ ನಡೆಸಿ ಮಾತನಾಡಿದ ಪ್ರಮುಖರು, ಮೆಸ್ಕಾಂ ಕಛೇರಿಯಲ್ಲಿ ಮಹಾನ್ ವ್ಯಕ್ತಿಗಳ ಭಾವಚಿತ್ರ ಅಳವಡಿಸಲಾಗಿದ್ದು, ಈ ಪೈಕಿ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಅವಮಾನಗೊಳಿಸಿರುವ ಕುರುಹು ಕಂಡು ಬಂದಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
    ಮಹಾಸಭಾ ಪ್ರಮುಖರಾದ ಸುರೇಶ್, ಜಯರಾಜ್, ಲೋಕೇಶ್, ಮಹೇಶ್, ಗೋಪಾಲ್, ಜಗದೀಶ್, ನಾಗಣ್ಣ, ಪುಟ್ಟರಾಜ್, ಅನಿಲ್, ನಾಗರಾಜ್‌ಆಮ್ ಆದ್ಮಿ ಪಕ್ಷದ ಮುಖಂಡ ಎಚ್. ರವಿಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಕಿರಣ್ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

No comments:

Post a Comment