ಕೆ. ಬಾಬುರಾವ್
ಭದ್ರಾವತಿ, ಡಿ. ೧೬: ಕರ್ನಾಟಕ ರಾಜ್ಯ ಗೃಹರಕ್ಷಕ ದಳ ಭದ್ರಾವತಿ ಘಟಕದ ನಿವೃತ್ತ ಪ್ಲಟೂನ್ ಕಮಾಂಡರ್ ಕೆ. ಬಾಬುರಾವ್ (೭೧) ರವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ಪತ್ನಿ, ಮೂವರು ಪುತ್ರಿಯರು ಇದ್ದರು. ಕೆ. ಬಾಬುರಾವ್ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಈ ನಡುವೆ ಗೃಹರಕ್ಷಕದಲ್ಲೂ ಸೇವೆ ಸಲ್ಲಿಸುತ್ತಿದ್ದರು. ಇವರ ಅಂತ್ಯಕ್ರಿಯೆ ಸಂಜೆ ಲೋಯರ್ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಗೃಹರಕ್ಷಕ ದಳ ನಿವೃತ್ತ ಅಧಿಕಾರಿಗಳಾದ ಡಾ. ರವೀಂದ್ರನಾಥ್ ಕೋಠಿ, ಎ. ರಾಜಣ್ಣ, ಘಟಕಾಧಿಕಾರಿ ಜಗದೀಶ್, ಎನ್ಸಿಓ ಅಧಿಕಾರಿಗಳು, ಗೃಹರಕ್ಷಕರು ಹಾಗೂ ನಗರಸಭಾ ಸದಸ್ಯೆ ಲತಾಚಂದ್ರಶೇಖರ್ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.
No comments:
Post a Comment