Thursday, December 29, 2022

ನೂತನ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಿ

ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್) ಗುರುವಾರ ಭದ್ರಾವತಿಯಲ್ಲಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
    ಭದ್ರಾವತಿ, ಡಿ. ೨೯: ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ನಾಮಕರಣಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ(ಕೆಆರ್‌ಎಸ್) ಗುರುವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
    ಪಕ್ಷದ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ೧೧೯ನೇ ಜನ್ಮದಿನ ಆಚರಿಸಲಾಗುತ್ತಿದ್ದು, ಕನ್ನಡನಾಡು ಅದರಲ್ಲೂ ಶಿವಮೊಗ್ಗ ಜಿಲ್ಲೆಗೆ ಕುವೆಂಪು ಅವರ ಕೊಡುಗೆ ಅನನ್ಯವಾಗಿದೆ. ಸಮಸ್ತ ಜನತೆ ಪರವಾಗಿ ಹುಟ್ಟುಹಬ್ಬದ ಶುಭಾಶಯಗಳೊಂದಿಗೆ ಅವರ ಹೆಸರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ಹೆಸರನ್ನು ನಾಮಕರಣಗೊಳಿಸುವಂತೆ ಕೋರಿದೆ.
    ತಹಸೀಲ್ದಾರ್ ಗ್ರೇಡ್-೨ ರಂಗಮ್ಮ  ಮೂಲಕ  ಮನವಿ ಸಲ್ಲಿಸಲಾಯಿತು.  ಪಕ್ಷದ ಅಧ್ಯಕ್ಷ ನಾಗರಾಜ್‌ರಾವ್ ಶಿಂಧೆ, ಯುವ ಘಟಕದ ಅಧ್ಯಕ್ಷ ಅರಳಿಹಳ್ಳಿ ತ್ಯಾಗರಾಜ್, ಕಾರ್ಯದರ್ಶಿ ಶಬರೀಶ್, ಮುಖಂಡರಾದ ತೀರ್ಥಕುಮಾರ್, ರಾಜೇಂದ್ರ, ವೆಂಕಟೇಶ್, ಆನಂದ್, ವಿನೋದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment