Thursday, December 1, 2022

ಕೆಎಸ್‌ಆರ್‌ಟಿಸಿ ನಿವೃತ್ತ ಸಂಚಾರಿ ನಿಯಂತ್ರಕ ವೆಂಕಟಾಚಲ ಶೆಟ್ಟರು ನಿಧನ

ವೆಂಕಟಾಚಲ ಶೆಟ್ಟರು
    ಭದ್ರಾವತಿ, ಡಿ. ೧: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಸುಮಾರು ೧೫ಕ್ಕೂ ಹೆಚ್ಚು ವರ್ಷ ಸಂಚಾರಿ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ವೆಂಕಟಾಚಲ ಶೆಟ್ಟರು(೬೪) ನಿಧನ ಹೊಂದಿದ್ದಾರೆ.
    ಪತ್ನಿ, ಪುತ್ರ ಹಾಗು ಪುತ್ರಿ ಇದ್ದರು. ಶಿವಮೊಗ್ಗದಲ್ಲಿ ವಾಸವಿದ್ದ ಶೆಟ್ಟರ್‌ರವರು ಬುಧವಾರ ರಾತ್ರಿ ನಿಧನ ಹೊಂದಿದ್ದು, ಇವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅವರ ಹುಟ್ಟೂರಿನಲ್ಲಿ ಗುರುವಾರ ನಡೆಯಿತು.
    sಶೆಟ್ಟರ್‌ರವರು ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ನಿರ್ವಾಹಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದು, ನಂತರ ಮುಂಬಡ್ತಿ ಹೊಂದಿ ಸಂಚಾರಿ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಇವರ ನಿಧನಕ್ಕೆ ಕೆಎಸ್‌ಆರ್‌ಟಿಸಿ ಭದ್ರಾವತಿ ಘಟಕ ವ್ಯವಸ್ಥಾಪಕರು ಹಾಗು ಸಿಬ್ಬಂದಿ ವರ್ಗದವರು ಮತ್ತು ಮುಖ್ಯಬಸ್‌ನಿಲ್ದಾಣದ ಮಳಿಗೆಗಳ ವರ್ತಕರು ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ.

No comments:

Post a Comment