Friday, December 9, 2022

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆಗೆ ಯತ್ನ : ದಾಳಿ

ಭದ್ರಾವತಿ ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದಾಗ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಹಾಗು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಸುಮಾರು ೭ ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
    ಭದ್ರಾವತಿ, ಡಿ. ೯: ತಾಲೂಕಿನ ಅರಬಿಳಚಿ ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದಾಗ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಹಾಗು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ಸುಮಾರು ೭ ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
    ಗ್ರಾಮದ ಅರಬಿಳಚಿ ಕ್ಯಾಂಪ್‌ನಲ್ಲಿ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಗ್ರಾಮಾಂತರ ವೃತ್ತ ನಿರೀಕ್ಷಕ ಎನ್.ಎಂ ಗುರುರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
  ವಾಹನ ಬಸಲೀಕಟ್ಟೆ ಗ್ರಾಮದಿಂದ ಅರೆಬಿಳಚಿ ಗ್ರಾಮಕ್ಕೆ ತೆರಳಿದ್ದು, ಅರೆಬಿಳಚಿಯ ಮಣಿಶೇಖರ್ ಮನೆಯ ಬಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಚಾಲಕ ವಾಹನ  ಬಿಟ್ಟು ಪರಾರಿಯಾಗಿದ್ದಾನೆ. ವಾಹನದಲ್ಲಿದ್ದ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ ಪೊಲೀಸ್ ಉಪಠಾಣಾಧಿಕಾರಿ(ಎಎಸ್‌ಐ) ಕೃಷ್ಣಮೂರ್ತಿ, ಸುನಿಲ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

No comments:

Post a Comment