Thursday, December 15, 2022

ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆ ವಿಐಎಸ್‌ಎಲ್‌ನಿಂದ ಎಲ್ಲಾ ರೀತಿಯ ಸಹಕಾರ : ಬಿ.ಎಲ್ ಚಂದ್ವಾನಿ

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಲೆಗಳಿಗೆ ಅಗತ್ಯವಿರುವ ಒಟ್ಟು ಸುಮಾರು ೨ ಲಕ್ಷ ರು ಮೌಲ್ಯದ ಬೆಂಚು, ಡೆಸ್ಕ್, ಟೇಬಲ್‌ಗಳು, ಕುರ್ಚಿಗಳು ಮತ್ತು ಅಕ್ಷರದಾಸೋಹ ಯೋಜನೆಗೆ ಅಗತ್ಯವಿರುವ ಪಾತ್ರೆಗಳು ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾದ ಪರಿಕರಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪರವರಿಗೆ ಹಸ್ತಾಂತರಿಸಲಾಯಿತು.  
    ಭದ್ರಾವತಿ, ಡಿ. ೧೫ : ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಸುಧಾರಿಸಲು ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಭಾರತೀಯ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿರಂತರವಾಗಿ ಶ್ರಮಿಸುತ್ತದೆ ಎಂದು ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಹೇಳಿದರು.
    ಕಾರ್ಖಾನೆಯ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಲೆಗಳಿಗೆ ಅಗತ್ಯವಿರುವ ಒಟ್ಟು ಸುಮಾರು ೨ ಲಕ್ಷ ರು ಮೌಲ್ಯದ ಬೆಂಚು, ಡೆಸ್ಕ್, ಟೇಬಲ್‌ಗಳು, ಕುರ್ಚಿಗಳು ಮತ್ತು ಅಕ್ಷರದಾಸೋಹ ಯೋಜನೆಗೆ ಅಗತ್ಯವಿರುವ ಪಾತ್ರೆಗಳು ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾದ ಪರಿಕರಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪರವರಿಗೆ ಹಸ್ತಾಂತರಿಸಲಾಯಿತು.  
    ಶಾಲೆಗಳ ಬೆಳವಣಿಗೆಗೆ ಕೈಜೋಡಿಸಿರುವ ಸೈಲ್-ವಿಐಎಸ್‌ಎಲ್ ಆಡಳಿತಕ್ಕೆ ಎ.ಕೆ ನಾಗೇಂದ್ರಪ್ಪ ಕೃತಜ್ಞತೆ ಸಲ್ಲಿಸಿದರು.  ಧನ್ಯವಾದಗಳನ್ನು  ವಿದ್ಯಾರ್ಥಿಗಳ ಮೂಲಸೌಕರ್ಯ ಸೌಲಭ್ಯಗಳ ಸುಧಾರಣೆಗೆ ಸಾಮಗ್ರಿಗಳನ್ನು ಸೂಕ್ತವಾಗಿ ಬಳಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
    ಕಾರ್ಖಾನೆಯ ಕಾರ್ಮಿಕರ ಸಂಘದ ಅಧ್ಯಕ್ಷ  ಜೆ. ಜಗದೀಶ, ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಜಯ್.ಡಿ ಸೋಂಕುವಾರ್, ಹಿರಿಯ ಅಧಿಕಾರಿಗಳಾದ ಮಹಾ ಪ್ರಬಂಧಕರು (ಹಣಕಾಸು ಮತ್ತು ಲೆಕ್ಕ) ಶೋಭ ಶಿವಶಂಕರನ್,  ಮಹಾಪ್ರಬಂಧಕರು (ಎಮ್.ಎಮ್ ಮತ್ತು ಸಿ.ಸಿ) ಎನ್.ಕೆ. ಶಶಿಧರ್  ಉಪಸ್ಥಿತರಿದ್ದರು. ಸಹಾಯಕ ವ್ಯವಸ್ಥಾಪಕರು (ಸಿಬ್ಬಂದಿ) ಕೆ.ಎಸ್ ಶೋಭ ನಿರೂಪಿಸಿದರು. ಮಹಾ ಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ವಂದಿಸಿದರು.  

No comments:

Post a Comment