Sunday, December 18, 2022

ಓಂ ಕ್ರಿಕೆಟರ್ಸ್ ತಂಡಕ್ಕೆ ದ್ವಿತೀಯ ಬಹುಮಾನ

ಭದ್ರಾವತಿ ಓಂ ಕ್ರಿಕೆಟರ್ಸ್ ತಂಡ ಶಿವಮೊಗ್ಗ ಸೂಳೆಬೈಲು ಮಲೆನಾಡು ಟ್ರೋಫಿ-೨೦೨೨ರ ಕ್ರಿಕೆಟ್ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
    ಭದ್ರಾವತಿ, ಡಿ. ೧೮: ನಗರದ ಓಂ ಕ್ರಿಕೆಟರ್ಸ್ ತಂಡ ಶಿವಮೊಗ್ಗ ಸೂಳೆಬೈಲು ಮಲೆನಾಡು ಟ್ರೋಫಿ-೨೦೨೨ರ ಕ್ರಿಕೆಟ್ ಪಂದ್ಯಾವಳಿಯಲ್ಲಿ ದ್ವಿತೀಯ ಬಹುಮಾನ ಪಡೆದುಕೊಂಡಿದೆ.
    ಓಂ ಕ್ರಿಕೆಟರ್ಸ್ ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡುವ ಮೂಲಕ ದ್ವಿತೀಯ ಬಹುಮಾನ ೫೦,೦೦೦ ನಗದು ಹಾಗೂ ಟ್ರೋಫಿ ತಮ್ಮದಾಗಿಸಿಕೊಂಡರು. ಹಲವಾರು ವರ್ಷಗಳಿಂದ ಓಂ ಕ್ರಿಕೆಟರ್ಸ್ ತಂಡ ಅನೇಕ ಪಂದ್ಯಾವಳಿಗಳಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶನ ನೀಡುವ ಮೂಲಕ ನಗರದ ಪ್ರತಿಷ್ಠಿತ ಕ್ರಿಕೆಟ್ ತಂಡಗಳಲ್ಲಿ ಒಂದಾಗಿ ಗುರುತಿಸಿಕೊಂಡು ಗಮನ ಸೆಳೆದಿದೆ. ಕೇಸರಿ ಪಡೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಕ್ರಿಕೆಟ್ ಅಭಿಮಾನಿಗಳು ವಿಜೇತ ತಂಡವನ್ನು ಅಭಿನಂದಿಸಿದ್ದಾರೆ.

No comments:

Post a Comment