ಭದ್ರಾವತಿ, ಡಿ. ೧೩ : ಹಾಡುಹಗಲಿನಲ್ಲಿಯೇ ದರೋಡೆಗೆ ಯತ್ನಿಸುತ್ತಿದ್ದ ಮೂವರನ್ನು ಬಂಧಿಸುವಲ್ಲಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ನಡೆದಿದೆ.
ಮೊಮಿನ್ ಮೊಹಲ್ಲಾ ನಿವಾಸಿಗಳಾದ ಸಮೀರ್ ಖಾನ್, ಸಯ್ಯದ್ ಆಲ್ವಿ, ಮಹಮದ್ ಗೌಸ್ ಯಾನೆ ಜಂಗ್ಲಿ ಸುಹೇಲ್ ಯಾನೆ ಕುಟ್ಟಿ ಮತ್ತು ಮಹಮದ್ ಸಾಬೀದ್ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸಿ.ಎನ್ ರಸ್ತೆ ಸೀಗೆಬಾಗಿ ಆಲೆಮನೆಯೊಂದರ ಬಳಿ ಐವರು ಸುಮಾರು ಬೆಳಿಗ್ಗೆ ೧೧.೩೦ರ ಸಮಯದಲ್ಲಿ ಪೊದೆಯಲ್ಲಿ ಅಡಗಿಕೊಂಡು ದರೋಡೆಗೆ ಯತ್ನಿಸುತ್ತಿದ್ದು, ಖಚಿತ ಮಾಹಿತಿ ಮೇರೆಗೆ ಹಳೇನಗರದ ಪೊಲೀಸ್ ಠಾಣಾಧಿಕಾರಿ ಕವಿತರವರ ನೇತೃತ್ವದ ತಂಡ ದಾಳಿ ನಡೆಸಿ ಮೂವರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಒಬ್ಬಂಟಿಯಾಗಿ ಸಂಚರಿಸುವವರನ್ನು ಅಡ್ಡಗಟ್ಟಿ ಮಾರಾಕಾಸ್ತ್ರಗಳಿಂದ ಬೆದರಿಸಿ ದರೋಡೆಗೆ ಯತ್ನಿಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ ಚಾಕು, ಕಬ್ಬಿಣದ ರಾಡು ಮತ್ತು ಖಾರದಪುಡಿ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಸುಮೋಟೋ ಪ್ರಕರಣ ದಾಖಲಾಗಿದೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆಯಲಾಗಿದೆ.
No comments:
Post a Comment