Sunday, December 25, 2022

ಸಮಾಜ ಸೇವಕ ಪೊಲೀಸ್ ಉಮೇಶ್ ಹುಟ್ಟುಹಬ್ಬ : ಹಲವು ಸೇವಾ ಕಾರ್ಯಗಳು

ರಾಜ್ಯಕ್ಕೆ ಮಾದರಿ ಕರುನಾಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರುದ್ರೇಶ್ ಕಹಳೆ ಪ್ರಶಂಸೆ

ಭದ್ರಾವತಿ ಹುತ್ತಾ ಕಾಲೋನಿ ಚಂದ್ರಾಲಯದಲ್ಲಿ  ಸಮಾಜ ಸೇವಕ, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್‌ರವರ ೪೯ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಸೇವಾ ಕಾರ್ಯಗಳ ಸಮಾರಂಭದಲ್ಲಿ ಪೊಲೀಸ್ ಉಮೇಶ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
    ಭದ್ರಾವತಿ, ಡಿ. ೨೫ : ಸಾವಿರಾರು ಕೋಟಿ ರು. ಹಣವಿದ್ದವರೂ ಸಹ ಮಾಡದಂತಹ ಸಮಾಜ ಕಾರ್ಯಗಳನ್ನು ಪೊಲೀಸ್ ಉಮೇಶ್‌ರವರು ಕೈಗೊಳ್ಳುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆಂದು ಚಿಕ್ಕಮಗಳೂರು ಮೂಡಿಗೆರೆ ಕರುನಾಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ, ಸಮಾಜ ಸೇವಕ ರುದ್ರೇಶ್ ಕಹಳೆ ಪ್ರಶಂಸೆ ವ್ಯಕ್ತಪಡಿಸಿದರು.
    ಅವರು ಭಾನುವಾರ ನಗರದ ಹುತ್ತಾ ಕಾಲೋನಿ ಚಂದ್ರಾಲಯದಲ್ಲಿ ಸಮಾಜ ಸೇವಕ, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್‌ರವರ ೪೯ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಸೇವಾ ಕಾರ್ಯಗಳಲ್ಲಿ ಪಾಲ್ಗೊಂಡು ಮಾತನಾಡಿದರು.
    ಹುಟ್ಟುಹಬ್ಬ ಆಚರಣೆಯನ್ನು ವಿಶೇಷವಾಗಿ ಆಚರಿಸಿಕೊಳ್ಳುವ ಮೂಲಕ ಪೊಲೀಸ್ ಉಮೇಶ್‌ರವರು ಮಾದರಿಯಾಗಿದ್ದಾರೆ. ಸದಾ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಸೇವಾ ಕಾರ್ಯಗಳು ಸಮಾಜದಲ್ಲಿ ಇವರಿಂದ ನಡೆಯುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
    ಸುರಕ್ಷಾ ಸೇವಾ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಮಾತನಾಡಿ, ಪೊಲೀಸ್ ಉಮೇಶ್‌ರವರ ಸೇವಾ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸಿದರು.
    ನಗರದ ಗಣ್ಯರು ಹಾಗು ವಿವಿಧ ಸಂಘ-ಸಂಸ್ಥೆಗಳಿಂದ ಪೊಲೀಸ್ ಉಮೇಶ್‌ರವರನ್ನು ಅಭಿನಂದಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಬಡಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್, ಬರವಣಿಗೆ ಪುಸ್ತಕ ಮತ್ತು ಹಿರಿಯ ನಾಗರೀಕರಿಗೆ ಕನ್ನಡಕ ಹಾಗು ಮಹಿಳೆಯರಿಗೆ ಸ್ವೆಟರ್ ಮತ್ತು ನಿರಾಶ್ರಿತರಿಗೆ ಕಂಬಳಿ ವಿತರಿಸಲಾಯಿತು.  
    ಮಹಾಮಾರಿ ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಒಳಗಾದ ಕಡುಬಡವರಿಗೆ ದವಸ ಧಾನ್ಯ ವಿತರಣೆ, ಪ್ರತಿದಿನ ಆಹಾರ ಪೂರೈಕೆ, ದೇವಸ್ಥಾನಗಳ ಸಭೆ-ಸಮಾರಂಭಗಳಲ್ಲಿ ಉಚಿತ ಅನ್ನದಾಸೋಹ ಸೇರಿದಂತೆ ಇನ್ನಿತರ ಸೇವಾಕಾರ್ಯಗಳನ್ನು ಹಲವಾರು ವರ್ಷಗಳಿಂದ ಪೊಲೀಸ್ ಉಮೇಶ್‌ರವರು ಸ್ನೇಹ ಜೀವಿ ಬಳಗದ ಸಹಯೋಗದೊಂದಿಗೆ ನಡೆಸಿಕೊಂಡು ಬರುತ್ತಿದ್ದಾರೆ.


ಭದ್ರಾವತಿ ಹುತ್ತಾ ಕಾಲೋನಿ ಚಂದ್ರಾಲಯದಲ್ಲಿ  ಸಮಾಜ ಸೇವಕ, ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್‌ರವರ ೪೯ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಕೇಕ್ ಕತ್ತರಿಸಿ ಸಿಹಿ ಹಂಚಲಾಯಿತು.

No comments:

Post a Comment