Sunday, December 18, 2022

ಜೆಡಿಎಸ್ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರಾಗಿ ಉಮೇಶ್ ನೇಮಕ

ಭದ್ರಾವತಿ ಜೆಡಿಎಸ್ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರಾಗಿ ಉಮೇಶ್ ನೇಮಕಗೊಂಡಿದ್ದು, ವಿಧಾನಸಭಾ ಕ್ಷೇತ್ರದ ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದಾ ಅಪ್ಪಾಜಿ ನೇಮಕ ಆದೇಶ ಪತ್ರ ವಿತರಿಸಿದರು.
    ಭದ್ರಾವತಿ, ಡಿ. ೧೮: ಜಾತ್ಯಾತೀತ ಜನತಾದಳ ವಿಧಾನಸಭಾ ಕ್ಷೇತ್ರದ ಕಾರ್ಮಿಕರ ವಿಭಾಗದ ಕಾರ್ಯಾಧ್ಯಕ್ಷರಾಗಿ ಸುರಗಿತೋಪು ನಿವಾಸಿ, ಯುವ ಮುಖಂಡ ಉಮೇಶ್ ನೇಮಕಗೊಂಡಿದ್ದಾರೆ.
    ಪಕ್ಷದ ಕಾರ್ಮಿಕರ ವಿಭಾಗದ ಜಿಲ್ಲಾಧ್ಯಕ್ಷ ಡಿ. ಶ್ಯಾಮು ನೇಮಕಗೊಳಿಸಿ ಆದೇಶ ಹೊರಡಿಸಿದ್ದು, ಪಕ್ಷದ ತತ್ವ ಸಿದ್ದಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸುವ ಮೂಲಕ ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿಸುವಂತೆ ಕೋರಿದ್ದಾರೆ.
  ಕಾರ್ಯಾಧ್ಯಕ್ಷರಾಗಿ ನೇಮಕಗೊಳ್ಳಲು ಕಾರಣಕರ್ತರಾದ ಪಕ್ಷದ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ವಿಧಾನಸಭಾ ಕ್ಷೇತ್ರದ ಪಕ್ಷದ ನಿಯೋಜಿತ ಅಭ್ಯರ್ಥಿ ಶಾರದಾ ಅಪ್ಪಾಜಿ, ಕಾರ್ಮಿಕರ ವಿಭಾಗದ ಜಿಲ್ಲಾಧ್ಯಕ್ಷ ಡಿ. ಶ್ಯಾಮು, ಪ್ರಮುಖರಾದ ಆರ್. ಕರುಣಾಮೂರ್ತಿ, ಎಸ್. ಮಣಿಶೇಖರ್, ಜಯಶೀಲ ಸುರೇಶ್ ಹಾಗು ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರಿಗೆ ಉಮೇಶ್ ಕೃತಜ್ಞತೆ ಸಲ್ಲಿಸಿದ್ದಾರೆ.

No comments:

Post a Comment