Monday, December 26, 2022

ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿಯ ಶ್ರೀ ಪಾಣಿ ಪೀಠದ ಶಿಲೆ ದರ್ಶನ, ಬೀಳ್ಕೊಡುಗೆ

ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದಲ್ಲಿ ಸುಮಾರು ೭೫ ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿ ಪ್ರತಿಷ್ಠಾಪನೆಗೊಳ್ಳುತ್ತಿದ್ದು,  ಲಿಂಗೋದ್ಭವ ಮೂರ್ತಿಯ ಶಿಲೆಯ ಒಂದು ಭಾಗವಾದ ಕೆಳಗಿನ ಶ್ರೀ ಪಾಣಿ ಪೀಠದ ಶಿಲೆ ಬೆಂಗಳೂರಿನಿಂದ ಆಗಮಿಸಿದ್ದು, ಭದ್ರಾವತಿ ನಗರದ ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಶಿಲೆಗೆ ವಿಶೇಷ ಪೂಜೆ ಸಲ್ಲಿಸಿ ಬೀಳ್ಕೊಡುಗೆ ನೀಡಲಾಯಿತು.
    ಭದ್ರಾವತಿ, ಡಿ. ೨೬: ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದಲ್ಲಿ ಸುಮಾರು ೭೫ ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿ ಪ್ರತಿಷ್ಠಾಪನೆಗೊಳ್ಳುತ್ತಿದ್ದು,  ಲಿಂಗೋದ್ಭವ ಮೂರ್ತಿಯ ಶಿಲೆಯ ಒಂದು ಭಾಗವಾದ ಕೆಳಗಿನ ಶ್ರೀ ಪಾಣಿ ಪೀಠದ ಶಿಲೆ ಬೆಂಗಳೂರಿನಿಂದ ಆಗಮಿಸಿದ್ದು, ನಗರದ ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಶಿಲೆಗೆ ವಿಶೇಷ ಪೂಜೆ ಸಲ್ಲಿಸಿ ಬೀಳ್ಕೊಡುಗೆ ನೀಡಲಾಯಿತು.
    ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ ಹಾಗೂ ಶ್ರೀ ಮರುಳಸಿದ್ದೇಶರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಮುಖಂಡರಾದ ರುದ್ರೇಶ್ ಶಾಸ್ತ್ರಿ, ರಾಜಣ್ಣ, ಶಿವಕುಮಾರ್, ಮೂರ್ತಣ್ಣ ಮಂಜುನಾಥ್ ಹಾಗೂ ಸರೋಜಮ್ಮ, ಕವಿತಾ, ಶ್ರೀ ಪೀಠದ ವೀರಶೈವ ಕಲ್ಯಾಣ ಮಂದಿರದ ವ್ಯವಸ್ಥಾಪಕ  ಅಶೋಕ್ ಕುಮಾರ್ ಸೇರಿದಂತೆ ಇನ್ನಿತರರು ಶಿಲೆಯ ದರ್ಶನ ಪಡೆದರು.

No comments:

Post a Comment