ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿ ಹುತ್ತಾಕಾಲೋನಿಯಲ್ಲಿರುವ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು.
ಭದ್ರಾವತಿ, ಡಿ. ೫ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರದ ಹುತ್ತಾಕಾಲೋನಿಯಲ್ಲಿರುವ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದ ರಥೋತ್ಸವ ಸೋಮವಾರ ವಿಜೃಂಭಣೆಯಿಂದ ನಡೆಯಿತು.
ರಥೋತ್ಸವ ಅಂಗವಾಗಿ ಬೆಳಿಗ್ಗೆ ಗಣಪತಿ ಪೂಜೆ, ಪುಣ್ಯಾಹ ಪ್ರಧಾನ ಹೋಮ ಮತ್ತು ರಥಶುದ್ದಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ೧೨.೩೦ಕ್ಕೆ ದೇವಸ್ಥಾನದ ಮುಂಭಾಗ ಆರಂಭಗೊಂಡ ರಥೋತ್ಸವ ವಿಶ್ವೇಶ್ವರಾಯ ಆಟೋ ನಿಲ್ದಾಣದವರೆಗೂ ಸಾಗಿತು. ಉತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಸ್ವಾಮಿಗೆ ಜೈಕಾರಗಳನ್ನು ಹಾಕಿದರು. ಸಂಜೆ ರಥೋತ್ಸವ ಅಷ್ಟಾವದಾನಸೇವೆ, ಮಹಾಪೂಜೆ. ಮಹಾಮಂಗಳಾರತಿ ನೆರವೇರಿತು.
. ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಸಿ.ದಾಸೇಗೌಡರವರು ಹಲವಾರು ವರ್ಷಗಳಿಂದ ಅನ್ನಸಂತರ್ಪಣೆ ಸೇವಾ ಕಾರ್ಯ ನಡೆಸಿಕೊಂಡು ಬರುತ್ತಿದ್ದು, ಈ ಬಾರಿ ಸಹ ಸೇವಾ ಕಾರ್ಯ ಮುಂದುವರೆಸುವ ಮೂಲಕ ಗಮನ ಸೆಳೆದರು. ವಿಶ್ವೇಶ್ವರಾಯ ಆಟೋ ನಿಲ್ದಾಣದ ಚಾಲಕರು ಮಜ್ಜಿಗೆ ವಿತರಣೆ ಹಾಗು ವೀರಾಂಜನೇಯಸ್ವಾಮಿ ದೇವಸ್ಥಾನ ಸಮಿತಿವತಿಯಿಂದ ಪಾನಕ, ಕೋಸಂಬರಿ ವಿತರಣೆ ನಡೆಯಿತು.
ಶಾಸಕ ಬಿ.ಕೆ.ಸಂಗಮೇಶ್ವರ್, ದೇವಸ್ಥಾನ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳ ಮುಖಂಡರು, ಹಾಗು ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.
No comments:
Post a Comment