Thursday, January 6, 2022

ಪ್ರಧಾನಿ ಭದ್ರತೆಯಲ್ಲಿ ಲೋಪ : ಪಂಜಾಬ್ ಸರ್ಕಾರದ ವಿರುದ್ಧ ಪ್ರತಿಭಟನೆ

ಪಂಜಾಬ್ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಉಂಟಾದ ಲೋಪವನ್ನು ಖಂಡಿಸಿ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುರುವಾರ ಸಂಜೆ ಭದ್ರಾವತಿಯಲ್ಲಿ ಯುವ ಮೋರ್ಚಾ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಜ. ೬: ಪಂಜಾಬ್ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಉಂಟಾದ ಲೋಪವನ್ನು ಖಂಡಿಸಿ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುರುವಾರ ಸಂಜೆ ಯುವ ಮೋರ್ಚಾ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಪಂಜಾಬ್ ಸರ್ಕಾರ ದೇಶ ದ್ರೋಹಿ ಸರ್ಕಾರವಾಗಿದೆ ಟೈರ್ ಸುಡುವ ಮೂಲಕ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಯುವಮೋರ್ಚಾ ಅಧ್ಯಕ್ಷ ವಿಜಯ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.
    ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ ಶ್ರೀನಾಥ್, ಜಿ. ಧರ್ಮಪ್ರಸಾದ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಜಿ. ಹರಿಕೃಷ್ಣ, ಹಾಗೂ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್,  ರಾಜ್ಯ ಕಾರ್ಯಕಾರಿಣಿ ಸದಸ್ಯ ಅನುಪ್, ಜಿಲ್ಲಾ ಕಾರ್ಯದರ್ಶಿ ಧನುಷ್ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಗೋಕುಲ ಕೃಷ್ಣ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನಕುಲ್, ಎಸ್ ಸಿ ಮೋರ್ಚಾ ಅಧ್ಯಕ್ಷ ಪಿ. ಗಣೇಶ್ ರಾವ್ ಹಾಗೂ ರೈತ ಮೋರ್ಚಾ ಅಧ್ಯಕ್ಷ ನಾಗರಾಜ್ ಅಂಬೋರೆ ಹಾಗೂ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಕೃಷ್ಣಮೂರ್ತಿ, ರಾಮನಾಥ್ ಬರ್ಗೆ, ಉಪಾಧ್ಯಕ್ಷ ಕಿರಣ್, ವಿಜಯ್, ರಾಘವೇಂದ್ರ, ಹೇಮಂತ, ಲಕ್ಷ್ಮಣ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಚಿತ್ರ: ಡಿ೬-ಬಿಡಿವಿಟಿ೭

ಆಜಾದಿ ಕ ಅಮೃತ್ ಮಹೋತ್ಸವ್ ಅಂಗವಾಗಿ ಸೈಲ್-ವಿಐಎಸ್‌ಎಲ್‌ನಲ್ಲಿ ನೇತ್ರ ತಪಾಸಣಾ ಶಿಬಿರ


ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ 'ಆಜಾದಿ ಕ ಅಮೃತ್ ಮಹೋತ್ಸವ್' ಅಂಗವಾಗಿ ೩ನೇ ಬಾರಿಗೆ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಸಹಯೋಗದೊಂದಿಗೆ ಕಾರ್ಖಾನೆಯಲ್ಲಿ ನೇತ್ರ ತಪಾಸಣಾ ಶಿಬಿರ ಗುರುವಾರ ಆಯೋಜಿಸಲಾಗಿತ್ತು.
    ಭದ್ರಾವತಿ, ಜ. ೬ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ 'ಆಜಾದಿ ಕ ಅಮೃತ್ ಮಹೋತ್ಸವ್' ಅಂಗವಾಗಿ ೩ನೇ ಬಾರಿಗೆ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಸಹಯೋಗದೊಂದಿಗೆ ಕಾರ್ಖಾನೆಯಲ್ಲಿ ನೇತ್ರ ತಪಾಸಣಾ ಶಿಬಿರ ಗುರುವಾರ ಆಯೋಜಿಸಲಾಗಿತ್ತು.
    ಶಿಬಿರದಲ್ಲಿ ೨೫೦ಕ್ಕೂ ಹೆಚ್ಚು ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಪಾಲ್ಗೊಂಡು ಸದುಪಯೋಗ ಪಡೆದುಕೊಂಡರು. ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಸೃಜನ್, ಡಾ. ಶ್ರೀಲಕ್ಷ್ಮಿ ಮತ್ತು ಡಾ. ಶೃತಿಕ ಬಿನೇವಾರ್‌ರವರ ಮಾರ್ಗದರ್ಶನದಲ್ಲಿ ಕಾರ್ಖಾನೆಯ ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಶಿಬಿರದ ಯಶಸ್ವಿಗೆ ಶ್ರಮಿಸಿದವು.

ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರ ೨ನೇ ವರ್ಷದ ಆರಾಧನಾ ಮಹೋತ್ಸವ

ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರ ೨ನೇ ವರ್ಷದ ಆರಾಧನಾ ಮಹೋತ್ಸವ ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜರುಗಿತು.
    ಭದ್ರಾವತಿ, ಜ. ೬: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವತೀರ್ಥ ಸ್ವಾಮೀಜಿಯವರ ೨ನೇ ವರ್ಷದ ಆರಾಧನಾ ಮಹೋತ್ಸವ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಜರುಗಿತು.
    ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಿಂದ ರಾಘವೇಂದ್ರ ಸ್ವಾಮಿ ಮಠದ ವರೆಗೆ ಶ್ರೀಗಳ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. ವೇದಘೋಷದೊಂದಿಗೆ ಆರಂಭಗೊಂಡ ಮೆರವಣಿಗೆಗೆ ದೇವಸ್ಥಾನದ ಪ್ರಧಾನ ಅರ್ಚಕ ವೇದಬ್ರಹ್ಮ ರಂಗನಾಥ ಶರ್ಮ ಮತ್ತು ಸಹಾಯಕ ಅರ್ಚಕ ಶ್ರೀನಿವಾಸ್ ಚಾಲನೆ ನೀಡಿದರು.
    ಯಾರಿಂದಲೂ ಆರ್ಥಿಕ ನೆರವು ಆಪೇಕ್ಷಿಸದೆ ಪೇಜಾವರ ಶ್ರೀಗಳ ಶಿಷ್ಯರಾದ ಪ್ರಮೋದ್‌ಕುಮಾರ್ ಮತ್ತು ಶ್ರೀನಿಧಿ ಪವನ್‌ಕುಮಾರ್‌ರವರು ತಮ್ಮ ಸ್ವಂತ ಹಣದಲ್ಲಿ ಕಾರ್ಯಕ್ರಮ ನೆರವೇರಿಸಿಕೊಟ್ಟರು.
    ಗುರುರಾಜಸೇವಾ ಸಮಿತಿ ಅಧ್ಯಕ್ಷರಾದ ಮುರಳಿಧರ ತಂತ್ರಿ, ನಿರಂಜನ್ ಆಚಾರ್ ಉಪಾಧ್ಯಕ್ಷರಾದ ಸುಮಾ, ರಾಘವೇಂದ್ರ ತಂತ್ರಿ,  ಪ್ರಧಾನ ಕಾರ್ಯದರ್ಶಿ ರಮಾಕಾಂತ್, ಪ್ರಧಾನ ಅರ್ಚಕ ಸತ್ಯನಾರಾಯಣ, ಜಯತೀರ್ಥ, ಶ್ರೀಪತಿ, ಮಧು, ಗುರುರಾಜ್ ಚೌತಾಯಿ, ವಾಸುದೇವಮೂರ್ತಿ, ನಾಗರಾಜ್ ಉಪಧ್ಯಾಯ, ರಂಗಣ್ಣ, ಗಿರಿ, ಕೃಷ್ಣಮೂರ್ತಿ, ರಾಘವೇಂದ್ರ ಅಡಿಗ, ಪ್ರಹ್ಲಾದ, ಉದಯಕುಮಾರ್, ಅನಿಲ, ಹರಿದಾಸ ಭಜನಾ ಮಂಡಳಿ, ಕರಾವಳಿ ವಿಪ್ರ ಬಳಗ ಭಜನಾ ಮಂಡಳಿ, ಹರಿಪ್ರಿಯಾ ಭಜನಾ ಮಂಡಳಿ, ಜ್ಞಾನವಾಹಿನಿ ಭಜನಾ ಮಂಡಳಿ ಮತ್ತು ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಂಡಿದ್ದವು.  

ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಸೌಂದರ್ಯ ಲಹರಿ ದೀಪ ನಮಸ್ಕಾರ

ಭದ್ರಾವತಿ ಹುತ್ತಾ ಕಾಲೋನಿ ಶೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೌಂದರ್ಯ ಲಹರಿ ದೀಪ ನಮಸ್ಕಾರ ಜರುಗಿತು.
    ಭದ್ರಾವತಿ, ಜ. ೬: ನಗರದ ಹುತ್ತಾ ಕಾಲೋನಿ ಶೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸೌಂದರ್ಯ ಲಹರಿ ದೀಪ ನಮಸ್ಕಾರ ಜರುಗಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ದೇವಸ್ಥಾನದ ಅರ್ಚಕ ವೇ.ಬ್ರ. ರಾಘವೇಂದ್ರ ಉಪಧ್ಯಾಯ ಮಾತನಾಡಿ, ಸೌಂದರ್ಯ ಲಹರಿ ದೀಪ ನಮಸ್ಕಾರ ಮಹತ್ಸ ವಿವರಿಸಿದರು. ಜೆಡಿಎಸ್ ಪಕ್ಷದ ಮುಖಂಡರಾದ ಶಾರದಾ ಅಪ್ಪಾಜಿ ಮತ್ತು ಡಿ.ಎಸ್.ಗಾಯಿತ್ರಿ ಹಾಗು ಸಂಗಡಿಗರು ಪಾಲ್ಗೊಂಡಿದ್ದರು.  

ಸಾಮಿಲ್‌ನಲ್ಲಿ ಬೆಂಕಿ ಅವಘಡ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ಶ್ರೀ ಮಂಜುನಾಥಸ್ವಾಮಿ ಸಾಮಿಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಸ್ಥಳಕ್ಕೆ ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಭದ್ರಾವತಿ, ಜ. ೬: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಮಂಜುನಾಥಸ್ವಾಮಿ ಸಾಮಿಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಸ್ಥಳಕ್ಕೆ ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಸಾಮಿಲ್‌ನಲ್ಲಿ ನಡೆದಿರುವ ಅಗ್ನಿ ಅವಘಡ ಕುರಿತು ವಿಷಾದ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ಅವಘಡದಿಂದ ಸಂತ್ರಸ್ಥರಾಗಿರುವವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸಿಕೊಡುವಂತೆ ಮನವಿ ಮಾಡಿದರು.
    ಪರಿಹಾರ ನೀಡಲು ಸರ್ಕಾರಕ್ಕೆ ವರದಿ:
    ತಾಲೂಕು ದಂಡಾಧಿಕಾರಿ, ತಹಸೀಲ್ದಾರ್ ಆರ್. ಪ್ರದೀಪ್ ಬೆಂಕಿ ಅವಘಡ ಸಂಭವಿರುವ ಮಾಹಿತಿ ತಿಳಿದ ತಕ್ಷಣ ಸ್ಥಳದಲ್ಲಿಯೇ ಬೀಡುಬಿಟ್ಟು ಪರಿಸ್ಥಿತಿ ಪರಿಶೀಲನೆ ನಡೆಸುವ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಂಡರು. ಪತ್ರಿಕೆಯೊಂದಿಗೆ ಮಾತನಾಡಿ, ಪ್ರಸ್ತುತ ಉಂಟಾಗುವ ನಷ್ಟದ ಲೆಕ್ಕಚಾರ ನಡೆಯುತ್ತಿದ್ದು, ಕೆಲವು ಮನೆಗಳು ಬಿರುಕು ಬಿಟ್ಟು ಹಾನಿಯಾಗಿದ್ದು, ಕೆಲವು ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ತಗುಲಿ ಹಾನಿ ಉಂಟಾಗಿದ್ದು, ಸೂಕ್ತ ಪರಿಹಾರ ನೀಡುವ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
    ಈ ಸಂದರ್ಭದಲ್ಲಿ ಕಂದಾಯ ಇಲಾಖೆ, ನಗರಸಭೆ, ಪೊಲೀಸ್ ಹಾಗು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಸಾಮಿಲ್‌ನಲ್ಲಿ ಬೆಂಕಿ ಅವಗಡ : ಕೋಟ್ಯಾಂತರ ರು. ನಷ್ಟ