Thursday, January 20, 2022

ಮೊದಲ ಬಾರಿಗೆ ಉಕ್ಕಿನ ನಗರದಲ್ಲಿ ಉಚಿತ ಫೂಟ್ ಪಲ್ಸ್ ಥೆರಫಿ ಚಿಕಿತ್ಸಾ ಶಿಬಿರ

ಭದ್ರಾವತಿ ಸಿದ್ದರೂಢ ನಗರದ ಶ್ರೀ ಸದ್ಗುರು ಸಿದ್ದಾರೂಢ ಆಶ್ರಮ ಮತ್ತು ಕಂಪಾನಿಯೋ ಜನ್ಯ ವೆಲ್ನೆಸ್ ಸೆಂಟರ್ ವತಿಯಿಂದ ಉಚಿತ ಫೂಟ್ ಪಲ್ಸ್ ಥೆರಫಿ ಚಿಕಿತ್ಸಾ ಶಿಬಿರ ಹಮ್ಮಿಕೊಂಡಿರುವುದು.
    ಭದ್ರಾವತಿ, ಜ. ೨೦: ಸಿದ್ದರೂಢ ನಗರದ ಶ್ರೀ ಸದ್ಗುರು ಸಿದ್ದಾರೂಢ ಆಶ್ರಮ ಮತ್ತು ಕಂಪಾನಿಯೋ ಜನ್ಯ ವೆಲ್ನೆಸ್ ಸೆಂಟರ್ ವತಿಯಿಂದ ಉಚಿತ ಫೂಟ್ ಪಲ್ಸ್ ಥೆರಫಿ ಚಿಕಿತ್ಸಾ ಶಿಬಿರ ಫೆ.೬ರವರೆಗೆ ಹಮ್ಮಿಕೊಳ್ಳಲಾಗಿದೆ.
    ದೇಶದಲ್ಲಿ ಮೊದಲ ಬಾರಿಗೆ ಫೂಟ್ ಪಲ್ಸ್ ಥೆರಫಿ ಚಿಕಿತ್ಸೆಯನ್ನು ಮೇಕ್ ಇನ್ ಇಂಡಿಯಾ ಯೋಜನೆಯಡಿ ದೇಶಾದ್ಯಂತ ಸುಮಾರು ೩೫೦ ಶಾಖೆಗಳ ಮೂಲಕ ಪರಿಚಯಿಸಲಾಗುತ್ತಿದೆ. ಈ ಚಿಕಿತ್ಸೆ ಮೂಲಕ ರಕ್ತ ಪರಿಚಲನೆ ಮತ್ತು ನರಗಳ ಯಾವುದೇ ವಿಧದ ಸರಳ ಮತ್ತು ದೀರ್ಘಕಾಲಿನ ಸಮಸ್ಯೆಗಳನ್ನು ಔಷಧಿ ರಹಿತವಾಗಿ ಅಡ್ಡ ಪರಿಣಾಮವಿಲ್ಲದೆ ನಿವಾರಿಸಬಹುದಾಗಿದೆ.
    ಮಧುಮೇಹ(ಶುಗರ್), ಅಧಿಕ ರಕ್ತದೊತ್ತಡ(ಬಿ.ಪಿ), ಸಂಧಿವಾತ, ವೆರಿಕೋಸ್ ವೇನ್, ಸ್ನಾಯು ಸೆಳೆತ, ಊತ, ಪಾರ್ಕಿನಸೆನ್, ಸಯಾಟಿಕಾ, ಸರ್ವಿಕಲ್ ಸ್ಪಾಂಡಿಲೈಟಿಸ್, ನಿದ್ರಾಹೀನತೆ, ಪಾರ್ಶ್ವವಾಯು, ಥೈರಾಯ್ಡ್, ಬೆನ್ನುನೋವು, ಮಂಡಿನೋವು ಮತ್ತು ಬೊಜ್ಜು ನಿವಾರಣೆ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರು ಈ ಚಿಕಿತ್ಸೆ ಮೂಲಕ ಪರಿಹಾರ ಕಂಡು ಕೊಳ್ಳಬಹುದಾಗಿದೆ.
    ಶಿಬಿರ ಶ್ರೀ ಸದ್ಗುರು ಸಿದ್ದಾರೂಢ ಆಶ್ರಮದಲ್ಲಿ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ ಗಂಟೆವರೆಗೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗೆ ಮೊ: ೯೬೩೨೧೨೦೨೯೯ ಅಥವಾ ೮೧೯೭೭೫೦೬೧೯ ಸಂಖ್ಯೆಗೆ ಕರೆಮಾಡಬಹುದಾಗಿದೆ. ಸಾರ್ವಜನಿಕರು ಉಚಿತ ಚಿಕಿತ್ಸಾ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಎಂದು ಆಶ್ರಮದ ಸೇವಾ ಕರ್ತರಾದ ರಾಮಮೂರ್ತಿ ಕೋರಿದ್ದಾರೆ.

ಸೂಡಾ ಸದಸ್ಯರಾಗಿ ವಿ. ಕದಿರೇಶ್, ಹೇಮಾವತಿ ವಿಶ್ವನಾಥ್


ವಿ. ಕದಿರೇಶ್

    

ಹೇಮಾವತಿ ವಿಶ್ವನಾಥ್
ಭದ್ರಾವತಿ, ಜ. ೨೦: ರಾಜ್ಯ ಸರ್ಕಾರ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಗುರುವಾರ ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್ ಸೇರಿದಂತೆ ಇಬ್ಬರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.
    ಹೊಸಮನೆ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ, ನಗರಸಭಾ ಸದಸ್ಯರಾದ ವಿ. ಕದಿರೇಶ್ ಈ ಹಿಂದಿನ ಅವಧಿಯಲ್ಲೂ ಪ್ರಾಧಿಕಾರಕ್ಕೆ ಸದಸ್ಯರಾಗಿ ನೇಮಕಗೊಂಡಿದ್ದು, ಇದೀಗ ಪುನಃ ನೇಮಕಗೊಂಡಿದ್ದಾರೆ. ಉಳಿದಂತೆ ಭಾರತೀಯ ಜನತಾ ಪಕ್ಷದ ಮಹಿಳಾ ಮುಖಂಡರಾದ, ಹಳೇನಗರ ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್ ಅವರನ್ನು ಮೊದಲ ಬಾರಿಗೆ ಸದಸ್ಯರಾಗಿ ನೇಮಕಗೊಳಿಸಲಾಗಿದೆ.
    ಈ ಕುರಿತು ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ನೇಮಕಾತಿ ಅಧಿಸೂಚನೆ ಹೊರಡಿಸಿದ್ದಾರೆ.

ಜ.೨೧ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ

    ಭದ್ರಾವತಿ, ಜ. ೨೦: ನಗರದ ತರೀಕೆರೆ ರಸ್ತೆಯ ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮದಲ್ಲಿ ಜ.೨೧ರಂದು ಸಿದ್ಧ ಕಣ್ಣಿನ ಹನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ತಮಿಳುನಾಡು ದಿಂಡಿಕಲ್ ವಂಶಪಾರಂಪರೆ ಸಿದ್ಧ ವೈದ್ಯರಾದ ಕೆ. ಮುತ್ತುಕೃಷ್ಣನ್ ಅವರಿಂದ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆವರೆಗೆ ನಡೆಯಲಿದೆ. ಕಣ್ಣಿಗೆ ಹನಿ ಹಾಕುವುದರಿಂದ ಕಣ್ಣಿನಲ್ಲಿ ನೀರು ಬರುತ್ತಿರುವುದು, ಕಣ್ಣು ಉರಿ, ಕಣ್ಣು ಕೆಂಪಗಾಗುವುದು, ಕಣ್ಣಿನಲ್ಲಿ ಪೊರೆ ಬರುವ ಹಂತದಲ್ಲಿರುವವರು, ಸೂಕ್ಷ್ಮ ಕೆಲಸಗಾರರು, ಚಿನ್ನಬೆಳ್ಳಿ, ಕಂಪ್ಯೂಟರ್, ಟೈಲರಿಂಗ್ ಕೆಲಸಗಾರರು ಹಾಗು ದೂರ ದೃಷ್ಠಿ ಮತ್ತು ಸಮೀಪ ದೃಷ್ಠಿ ತೊಂದರೆ ಇರುವವರು ಇದರಿಂದ ಉಪಯೋಗ ಪಡೆಯಬಹುದಾಗಿದೆ.
    ಹೆಚ್ಚಿನ ಮಾಹಿತಿಗೆ ಮೊ: ೯೪೮೦೨೮೩೦೩೦ ಅಥವಾ ೯೪೪೮೨೫೫೫೪೪ ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಆಶ್ರಮದ ವ್ಯವಸ್ಥಾಪಕರು ತಿಳಿಸಿದ್ದಾರೆ.