Sunday, January 23, 2022

ಪೊಂಗಲ್ ಕಮಿಟಿ ಅಧ್ಯಕ್ಷ ಸೂರ್ಯನಾರಾಯಣ ನಿಧನ

ಎಸ್.ಪಿ ಸೂರ್ಯನಾರಾಯಣ
    ಭದ್ರಾವತಿ, ಜ. ೨೩: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ನ್ಯೂಟೌನ್ ನಿವಾಸಿ ಎಸ್.ಪಿ ಸೂರ್ಯನಾರಾಯಣ(೭೩) ಭಾನುವಾರ ನಿಧನ ಹೊಂದಿದರು.
    ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿದ್ದರು. ಸೂರ್ಯನಾರಾಯಣರವರು ನ್ಯೂಟೌನ್ ಪೊಂಗಲ್ ಕಮಿಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ನಿಧನಕ್ಕೆ ನಗರದ ಗಣ್ಯರು ಸಂತಾಪ ಸೂಚಿಸಿದ್ದಾರೆ.


ಜ.೨೪ರಂದು ನೂತನ ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ

    ಭದ್ರಾವತಿ, ಜ. ೨೩: ನಗರಸಭೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್ ಜ.೨೪ರ ಸೋಮವಾರ ತಮ್ಮ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
    ನಗರಸಭೆ ವಾರ್ಡ್ ನಂ. ೧೨ರ ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಸುದೀಪ್‌ಕುಮಾರ್ ಮೊದಲ ಬಾರಿಗೆ ನಗರಸಭೆಗೆ ಆಯ್ಕೆಯಾಗಿದ್ದು, ಮೊದಲ ಅವಧಿಯಲ್ಲಿಯೇ ಸ್ಥಾಯಿ ಸಮಿತಿ ಅಧ್ಯಕ್ಷರಾಗುವ ಮೂಲಕ ಗಮನ ಸೆಳೆದಿದ್ದಾರೆ.
    ಇವರ ತಂದೆ ವಿ. ಕದಿರೇಶ್ ನಗರಸಭೆ ಹಿರಿಯ ಸದಸ್ಯರಾಗಿದ್ದು, ಜೊತೆಗೆ ಇದೀಗ ೨ನೇ ಬಾರಿಗೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದಾರೆ. ಮಗ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರೇ, ಇವರು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವುದು ವಿಶೇಷವಾಗಿದೆ.

೬೨೨ನೇ ವಚನ ಮಂಟಪ, ದತ್ತಿ ಕಾರ್ಯಕ್ರಮ

೬೨೨ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮದ ಅಂಗವಾಗಿ ಭದ್ರಾವತಿ ಹೊಸಮನೆ ಸುಭಾಷ್ ನಗರದ ಕಮಲಕುಮಾರಿಯವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಹಿರೇನಲ್ಲೂರು ಎಚ್.ಎಸ್ ವೀರಸಂಗಪ್ಪ ದತ್ತಿ ಮತ್ತು ಗ್ಯಾರಹಳ್ಳಿ ರಂಗಪ್ಪ ಗಂಗಮ್ಮ ದತ್ತಿ ಕಾರ್ಯಕ್ರಮ ಪಿರಮಿಡ್ ಧ್ಯಾನ ಕೇಂದ್ರದ ಶುಭ ಉದ್ಘಾಟಿಸಿದರು.
    ಭದ್ರಾವತಿ, ಜ. ೨೩: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಶಾಖೆ ವತಿಯಿಂದ ಕದಳಿ ಮಹಿಳಾ ವೇದಿಕೆ ಸಹಯೋಗದೊಂದಿಗೆ ೬೨೨ನೇ ವಚನ ಮಂಟಪ ಮತ್ತು ದತ್ತಿ ಕಾರ್ಯಕ್ರಮದ ಅಂಗವಾಗಿ ಹೊಸಮನೆ ಸುಭಾಷ್ ನಗರದ ಕಮಲಕುಮಾರಿಯವರ ನಿವಾಸದಲ್ಲಿ ಹಿರೇನಲ್ಲೂರು ಎಚ್.ಎಸ್ ವೀರಸಂಗಪ್ಪ ದತ್ತಿ ಮತ್ತು ಗ್ಯಾರಹಳ್ಳಿ ರಂಗಪ್ಪ ಗಂಗಮ್ಮ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಪಿರಮಿಡ್ ಧ್ಯಾನ ಕೇಂದ್ರದ ಶುಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಪ್ರಮುಖರಾದ ಕತ್ತಲಗೆರೆ ತಿಮ್ಮಪ್ಪ ಅಧ್ಯಕ್ಷತೆ ವಹಿಸಿದ್ದರು. ಕದಳಿ ಮಹಿಳಾ ವೇದಿಕೆ ಸಂಚಾಲಕಿ ಹೇಮಾವತಿ ಚಿಗಟೇರಪ್ಪ, ನಿವೃತ್ತ ಶಿಕ್ಷಕಿ ದಾಕ್ಷಾಯಣಮ್ಮ, ಮಲ್ಲಿಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕಮಲಕುಮಾರಿ ಸ್ವಾಗತಿಸಿದರು. ತರುಣ ಭಾರತಿ ಶಾಲೆ ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಆಟೋ ನಿಲ್ದಾಣದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ೧೨೫ನೇ ಜನ್ಮದಿನ ಆಚರಣೆ

ಭದ್ರಾವತಿ ನಗರಸಭೆ ಸಮೀಪದ ನೇತಾಜಿ ಆಟೋ ನಿಲ್ದಾಣದಲ್ಲಿ ಭಾನುವಾರ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ದೇಶಭಕ್ತ ನೇತಾಜಿ ಸುಭಾಷ್ ಚಂದ್ರಬೋಸ್‌ರವರ ೧೨೫ನೇ ಜನ್ಮದಿನ ಸರಳವಾಗಿ ಆಚರಿಸಲಾಯಿತು.
    ಭದ್ರಾವತಿ, ಜ. ೨೩: ನಗರಸಭೆ ಸಮೀಪದ ನೇತಾಜಿ ಆಟೋ ನಿಲ್ದಾಣದಲ್ಲಿ ಭಾನುವಾರ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ, ದೇಶಭಕ್ತ ನೇತಾಜಿ ಸುಭಾಷ್ ಚಂದ್ರಬೋಸ್‌ರವರ ೧೨೫ನೇ ಜನ್ಮದಿನ ಸರಳವಾಗಿ ಆಚರಿಸಲಾಯಿತು.
    ನೇತಾಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ ಟಿ. ಜನಾರ್ಧನ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
    ಸಂಘದ ಗೌರವಾಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಚಿನ್ನಪ್ಪ, ಉಪಾಧ್ಯಕ್ಷ ಹಫೀಜ್, ಕೃಷ್ಣಪ್ಪ, ಮನು, ಅಶೋಕ್ ಸೇರಿದಂತೆ ಆಟೋ ಮಾಲೀಕರು, ಚಾಲಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.