Wednesday, February 23, 2022

ಸಮಾಜಕ್ಕೆ ಉತ್ತಮ ಸಂದೇಶದ ಜೊತೆಗೆ ಚಿತ್ರರಂಗದಲ್ಲಿಯೇ ಎಲ್ಲವನ್ನೂ ಕಂಡುಕೊಂಡು ಡಾ. ರಾಜ್‌ಕುಮಾರ್ ಕುಟುಂಬ

ಡಾ. ರಾಜ್‌ಕುಮಾರರ ದೇಗುಲ, ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬಿ.ವೈ ರಾಘವೇಂದ್ರ ಪ್ರಶಂಸೆ


ಭದ್ರಾವತಿ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಹಾಗು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರಾಜ್‌ಕುಮಾರರ ದೇಗುಲ ಹಾಗು ಪುತ್ಥಳಿ ಆನಾವರಣಕ್ಕೆ ಬುಧವಾರ ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
    ಭದ್ರಾವತಿ, ಫೆ. ೨೩: ಕರ್ನಾಟಕ ರತ್ನ, ವರನಟ ಡಾ. ರಾಜ್‌ಕುಮಾರ್ ಕುಟುಂಬದವರು ತಮ್ಮ ಇಡೀ ಬದುಕನ್ನು ಕೇವಲ ಚಿತ್ರರಂಗ ಹಾಗು ಸಮಾಜ ಸೇವೆಗೆ ಮಾತ್ರ ಮೀಸಲಿಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆಂದು ಸಂಸದ ಬಿ.ವೈ ರಾಘವೇಂದ್ರ ಪ್ರಶಂಸೆ ವ್ಯಕ್ತಪಡಿಸಿದರು.
    ಅವರು ಬುಧವಾರ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಹಾಗು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರಾಜ್‌ಕುಮಾರರ ದೇಗುಲ ಹಾಗು ಪುತ್ಥಳಿ ಆನಾವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
    ಡಾ. ರಾಜ್‌ಕುಮಾರ್ ಕುಟುಂಬದವರು ಚಿತ್ರರಂಗದಲ್ಲಿಯೇ ಎಲ್ಲವನ್ನು ಕಂಡು ಕೊಂಡಿದ್ದಾರೆ. ಆ ಮೂಲಕ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಂಡಿದ್ದಾರೆ. ಆದರ್ಶತನದ ಬದುಕನ್ನು ಈ ನಾಡಿಗೆ ನೀಡಿದ್ದಾರೆ. ರಾಜ್‌ಕುಮಾರ್‌ರವರು ಒಂದು ವೇಳೆ ರಾಜಕೀಯಕ್ಕೆ ಪ್ರವೇಶಿಸಿದ್ದರೇ ಅವರನ್ನು ನಾವೆಲ್ಲರೂ ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕಾಗಿರುತ್ತಿತ್ತು. ಆದರೆ ಈ ಕುಟುಂಬದವರು ಯಾವುದಕ್ಕೂ ಆಸೆ ಪಡದೆ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ಕುಟುಂಬದ ಪುನೀತ್‌ರಾಜ್‌ಕುಮಾರ್‌ರವರ ಪುತ್ಥಳಿ ಜಿಲ್ಲೆಯಲ್ಲಿ ಅದರಲ್ಲೂ ಭದ್ರಾವತಿಯಲ್ಲಿ ನಿರ್ಮಾಣಗೊಳ್ಳುತ್ತಿರುವುದು ತುಂಬಾ ಸಂತಸದ ಸಂಗತಿಯಾಗಿದೆ ಎಂದರು.

ಒಟ್ಟು ೨೦ ಲಕ್ಷ ರು. ಅಂದಾಜು ವೆಚ್ಚದಲ್ಲಿ ದೇಗುಲ ಮತ್ತು ಪುತ್ಥಳಿ ನಿರ್ಮಿಸಲಾಗುತ್ತಿದೆ. ಕಂಚು ಸೇರಿದಂತೆ ಇನ್ನಿತರ ಲೋಹ ಬಳಸಿ ಸುಮಾರು ೬.೫ ಲಕ್ಷ ರು. ವೆಚ್ಚದಲ್ಲಿ ೩ ಅಡಿ ಎತ್ತರ, ೨ ಅಡಿ ಅಗಲ ಹೊಂದಿರುವ ಪುತ್ಥಳಿಯನ್ನು ನಗರದ ಉಜ್ಜನಿಪುರದ ವಿಷ್ಣು ಆರ್ಟ್ಸ್‌ರವರು ನಿರ್ಮಿಸುತ್ತಿದ್ದಾರೆ. ಈ ಕಾರ್ಯಕ್ಕೆ ಸಂಸದರು ರು. ೫೧,೦೦೦ ದೇಣಿಗೆ ನೀಡಿದ್ದು, ಇದೆ ರೀತಿ ಹಲವು ಮಂದಿ ಗಣ್ಯರು, ದಾನಿಗಳು, ಅಭಿಮಾನಿಗಳು ದೇಣಿಗೆ ನೀಡಿದ್ದಾರೆ.
                                                 - ಅಪ್ಪು, ಅಧ್ಯಕ್ಷರು, ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳ ಸಂಘ

    ನಗರಸಭಾ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ಕಳೆದ ೫-೬ ದಶಕಗಳಿಂದ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಯಾವುದೇ ರಾಜಕೀಯ ಹಿತಾಸಕ್ತಿಗೆ ಒಳಗಾಗದೆ ಮುನ್ನಡೆದುಕೊಂಡು ಬರುತ್ತಿರುವುದು ಜಿಲ್ಲೆಯಲ್ಲಿಯೇ ವಿಶೇಷವಾಗಿದೆ. ಎಲ್ಲಾ ಧರ್ಮ, ಜಾತಿ, ಪಂಗಡ, ಎಲ್ಲಾ ರಾಜಕೀಯ ಪಕ್ಷಗಳ, ವಿವಿಧ ಸಂಘಟನೆಗಳು ಒಟ್ಟಾಗಿ ಅಭಿಮಾನಿ ಬಳಗ ರೂಪಿಸಿಕೊಂಡಿರುವುದು ಸಮಾಜಕ್ಕೆ ಮಾದರಿಯಾಗಿದೆ. ಈ ಸಂಘಟನೆ ಇದೀಗ ರಾಜ್‌ಕುಮಾರ್‌ರವರ ದೇಗುಲ ಪುನೀತ್‌ರಾಜ್‌ಕುಮಾರ್‌ರವರ ಪುತ್ಥಳಿ ನಿರ್ಮಾಣಕ್ಕೆ ಮುಂದಾಗಿರುವುದು ಒಳ್ಳೆಯ ಬೆಳೆವಣಿಗೆಯಾಗಿದೆ ಎಂದರು.
    ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಬಿಜೆಪಿ ಮುಖಂಡ ಬಿ.ಕೆ ಶ್ರೀನಾಥ್, ನಗರಸಭಾ ಸದಸ್ಯರಾದ ವಿ. ಕದಿರೇಶ್, ಜಾರ್ಜ್, ಡಾ. ರಾಜ್‌ಕುಮಾರ್ ಹಾಗು ಪುನೀತ್‌ರಾಜ್‌ಕುಮಾರ್ ಅಭಿಮಾನಿ ಬಳಗದ ಪದಾಧಿಕಾರಿಗಳು, ಪ್ರಮುಖರು, ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿರಿದ್ದರು.


ಭದ್ರಾವತಿ ನಗರಸಭೆ ೩ನೇ ವಾರ್ಡ್ ವ್ಯಾಪ್ತಿಯ ಬಿ.ಎಚ್ ರಸ್ತೆ ಚಾಮೇಗೌಡ ಏರಿಯಾದಲ್ಲಿರುವ ಡಾ. ರಾಜ್‌ಕುಮಾರ್ ಅಭಿಮಾನಿಗಳ ಬಳಗ ಹಾಗು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ರಾಜ್‌ಕುಮಾರರ ದೇಗುಲ ಹಾಗು ಪುತ್ಥಳಿ ಆನಾವರಣಕ್ಕೆ ಬುಧವಾರ ಸಂಸದ ಬಿ.ವೈ ರಾಘವೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.




ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಖಂಡನೆ, ಸಂತಾಪ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಭದ್ರಾವತಿ ಶಿವಾಜಿ ವೃತ್ತದಲ್ಲಿ ಬುಧವಾರ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸುವ ಜೊತೆಗೆ ಸಂತಾಪ ಸೂಚಿಸಲಾಯಿತು.
    ಭದ್ರಾವತಿ, ಫೆ. ೨೩: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ನಗರದಲ್ಲಿ ಬುಧವಾರ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸುವ ಜೊತೆಗೆ ಸಂತಾಪ ಸೂಚಿಸಲಾಯಿತು.
     ನಗರದ ಹೊಸಮನೆ ಶಿವಾಜಿ ವೃತ್ತದಲ್ಲಿ ರಾಷ್ಟ್ರೀಯ ಬಜರಂಗದಳ, ಕೇಸರಿ ಪಡೆ, ಹಿಂದೂ ಕೋಟೆ ಮತ್ತು ರಾಮ್ ಸೇನೆ ವತಿಯಿಂದ ಬಜರಂಗದಳ ಕಾರ್ಯಕರ್ತ ಹರ್ಷ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸಂತಾಪ ಸೂಚಿಸಲಾಯಿತು. ನಂತರ ಮಾತನಾಡಿದ ಪ್ರಮುಖರು ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು.
    ಹಿಂದೂಪರ ಸಂಘಟನೆಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಇದಕ್ಕೆ ಪೊಲೀಸ್ ಇಲಾಖೆ ಅನುಮತಿ ನೀಡದ ಹಿನ್ನಲೆಯಲ್ಲಿ ಶಿವಾಜಿ ವೃತ್ತದಲ್ಲಿ ವೃತ್ತದಲ್ಲಿ ಕೇವಲ ಪ್ರತಿಭಟನೆ ನಡೆಸಲಾಯಿತು ಎಂದು ಸಂಘಟನೆಯ ಪ್ರಮುಖರು ಆರೋಪಿಸಿದ್ದಾರೆ.
    ಪ್ರಮುಖರಾದ ಬಿ.ವಿ ಚಂದನ್‌ರಾವ್, ನವೀನ್, ಮನು ಗೌಡ, ಜೀವನ್, ಗಿರೀಶ್, ಮಂಜುನಾಥ್, ಕಿರಣ್, ಹಿಂದೂ ಕೋಟೆ  ಮಂಜುನಾಥ್, ಉಮೇಶ್ ಗೌಡ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಬಿ. ವೈ ರಾಘವೇಂದ್ರ

ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಭದ್ರಾವತಿ ಗಾಂಧಿನಗರದ ಆಗಮುಡಿ(ಮೊದಲಿಯಾರ್) ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಇ-ಶ್ರಮ್ ಕಾರ್ಡ್ ವಿತರಣೆ ಹಾಗು ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮವನ್ನು ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು.
    ಭದ್ರಾವತಿ, ಫೆ. ೨೩: ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.
    ಅವರು ಬುಧವಾರ ಶ್ರಮ ಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದ ವತಿಯಿಂದ ಗಾಂಧಿನಗರದ ಆಗಮುಡಿ(ಮೊದಲಿಯಾರ್) ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಇ-ಶ್ರಮ್ ಕಾರ್ಡ್ ವಿತರಣೆ ಹಾಗು ಕಾರ್ಮಿಕ ಇಲಾಖೆಯಿಂದ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಅಸಂಘಟಿತ ಕಾರ್ಮಿಕರು ಸಹ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಅಗತ್ಯವಿರುವ ಯೋಜನೆಗಳನ್ನು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ರೂಪಿಸಿವೆ. ಈ ಯೋಜನೆಗಳು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸಂಘಟನೆಗಳ ಪಾತ್ರ ಪ್ರಮುಖವಾಗಿವೆ ಎಂದರು.
    ನಗರಸಭಾ ಸದಸ್ಯ ಬಿ.ಕೆ ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುದೀಪ್‌ಕುಮಾರ್, ಸದಸ್ಯರಾದ ವಿ. ಕದಿರೇಶ್, ಮಣಿ ಎಎನ್‌ಎಸ್, ಜಾರ್ಜ್, ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸಿ.ಬಿ ರಂಗಯ್ಯ, ಕಾರ್ಮಿಕ ನಿರೀಕ್ಷಕಿ ಮುಮ್ತಾಜ್ ಬೇಗಂ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸದಸ್ಯ ಮಂಗೋಟೆ ರುದ್ರೇಶ್, ಬಿಜೆಪಿ ಮುಖಂಡರಾದ ಎಸ್. ಕುಮಾರ್, ಬಿ.ಕೆ ಶ್ರೀನಾಥ್, ಎಂ. ಪ್ರಭಾಕರ್, ಶಿವಕುಮಾರ್(ಬಂಕ್),  ಉದ್ಯಮಿಗಳಾದ ಎ. ಮಾಧು, ಜಿ. ಸುರೇಶ್‌ಕುಮಾರ್, ಕಣ್ಣಪ್ಪ, ಸುಂದರ್ ಬಾಬು, ಬಿ.ಎಸ್ ಗಣೇಶ್, ವಿವಿಧ ಕಾರ್ಮಿಕ ಸಂಘಟನೆಗಳ ಪ್ರಮುಖರಾದ ರಾಜೇಶ್ವರಿ, ಶಾರದಮ್ಮ, ವಸಂತ, ಎಂ. ಭೂಪಾಲ್, ಕೆ.ಎಸ್ ಸುಬ್ರಹ್ಮಣಿ, ದುಗ್ಗೇಶ್ ತೇಲ್ಕರ್, ಅರುಣ್‌ಕುಮಾರ್, ಚಂದ್ರಶೇಖರ್, ಬಾಬು, ಲಕ್ಷ್ಮಣ, ವಿಶ್ವನಾಥ್, ಸತೀಶ್‌ಗೌಡ, ಚಂದ್ರಕಲಾ, ಸುಂದರ್, ಜಯಂತಿ, ಕೃಷ್ಣಮೂರ್ತಿ, ಸಚಿನ್, ಸಮಿವುಲ್ಲಾ, ಹಫೀಜ್, ಮುರುಗನ್, ಶ್ರೀನಿವಾಸ್, ಸುರೇಶ್, ವಸಂತಿ, ಅರುಣ್, ಸಂಜಯ್‌ಕುಮಾರ್, ಮಣಿಕಂಠ, ಆರ್‍ಮುಗಂ, ತರಕಾರಿ ಮಂಜಣ್ಣ, ಮಂಜು, ಹೇಮಾವತಿ ಮತ್ತು ಪುಷ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕವಿತಾ ಸುರೇಶ್ ಪ್ರಾರ್ಥಿಸಿದರು. ಕೆ. ಮಂಜುನಾಥ್ ಸ್ವಾಗತಿಸಿದರು. ವಿಜಯ್ ಸಿದ್ದಾರ್ಥ್ ಮತ್ತು ಅಭಿಲಾಷ್ ನಿರೂಪಿಸಿದರು. ಉದ್ಯಮಿ ಎ. ಮಾಧು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.