ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಶನಿವಾರ ಬೆಳಿಗ್ಗೆ ಪ್ರಾಯಶ್ಚಿತ ರೂಪವಾಗಿ ಚಿಕ್ಕ ರಥೋತ್ಸವ ನಡೆಸಲಾಯಿತು.
ಭದ್ರಾವತಿ, ಏ. ೧೬: ಹಳೇನಗರದ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ಶನಿವಾರ ಬೆಳಿಗ್ಗೆ ಪ್ರಾಯಶ್ಚಿತ ರೂಪವಾಗಿ ಚಿಕ್ಕ ರಥೋತ್ಸವ ನಡೆಸಲಾಯಿತು.
ದೇವಾಲಯದಲ್ಲಿ ಪ್ರತಿವರ್ಷ ಮೇ.೧೬ರ ಬೌದ್ಧಪೌರ್ಣಮಿಯಂದು ವಾರ್ಷಿಕ ರಥೋತ್ಸವ ನಡೆಸಿಕೊಂಡು ಬರಲಾಗುತ್ತಿದ್ದು, ಮಹಾಮಾರಿ ಕೊರೋನಾ ಹಿನ್ನಲೆಯಲ್ಲಿ ಕಳೆದ ಸುಮಾರು ೨ ವರ್ಷಗಳಿಂದ ವಾರ್ಷಿಕ ರಥೋತ್ಸವ ನಡೆಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಪ್ರಾಯಶ್ಚಿತ ರೂಪವಾಗಿ ಚಿಕ್ಕ ರಥೋತ್ಸವ ನಡೆಸಲಾಯಿತು.
ಬಣ್ಣ ಬಣ್ಣದ ಹೂವುಗಳಿಂದ ಅಲಂಕೃತಗೊಂಡ ರಥದಲ್ಲಿ ಸ್ವಾಮಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ರಥೋತ್ಸವ ನಡೆಸಲಾಯಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಸ್ವಾಮಿಗೆ ಜಯಘೋಷಗಳನ್ನು ಹಾಕಿದರು.
ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ.ರಂಗನಾಥ ಶರ್ಮ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ಜಿ ಮಾರುತಿ ಹಾಗೂ ಸದಸ್ಯರು, ನಾರಾಯಣಾಚಾರ್, ಶ್ರೀನಿವಾಸ, ನರಸಿಂಹಚಾರ್, ಶ್ರೀಕಾಂತ್, ಶ್ರೀಹರಿ, ಶ್ರೀರಾಮ್, ನಿರಂಜನ್, ರವಿಮಾಸ್ಟರ್, ಸತ್ಯನಾರಾಯಣ್, ಮನು, ರಮಾಕಾಂತ, ಅಭಿನಂದನ್, ಶೋಭ, ಪುಷ್ಪ ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.