ಭದ್ರಾವತಿ ನಗರಸಭೆ ವ್ಯಾಪ್ತಿಯ ಬುಳ್ಳಾಪುರ ನಿವಾಸಿ, ದಲಿತ ಮುಖಂಡ ಪಿ. ಮೂರ್ತಿ ಮಂಗಳವಾರ ಬಹುಜನ ಸಮಾಜ ಪಾರ್ಟಿಗೆ ಸೇರ್ಪಡೆಗೊಂಡರು.
ಭದ್ರಾವತಿ, ಏ. ೨೬: ನಗರಸಭೆ ವ್ಯಾಪ್ತಿಯ ಬುಳ್ಳಾಪುರ ನಿವಾಸಿ, ದಲಿತ ಮುಖಂಡ ಪಿ. ಮೂರ್ತಿ ಮಂಗಳವಾರ ಬಹುಜನ ಸಮಾಜ ಪಾರ್ಟಿಗೆ ಸೇರ್ಪಡೆಗೊಂಡರು.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯವತಿಯವರ ಸಾಧನೆ ಹಾಗು ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಿ. ಮೂರ್ತಿ ಬಿಎಸ್ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಕ್ಷದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ಅಧ್ಯಕ್ಷ ರಹಮತ್ ಉಲ್ಲಾ ಖಾನ್ ಪಕ್ಷದ ಬಾವುಟ ನೀಡುವುದರ ಮೂಲಕ ಸ್ವಾಗತಿಸಿದರು.
ತಾಲೂಕು ಸಂಯೋಜಕ ಎಂ. ರಾಜೇಂದ್ರ, ಪ್ರಚಾರ ಸಮಿತಿ ಅಧ್ಯಕ್ಷ ಗುಲಾಮ್ ಹುಸೇನ್, ಉಪಾಧ್ಯಕ್ಷ ಮಾಹಿನ್ ಹಾಗೂ ಪಕ್ಷದ ಸಂಘಟನಾ ಕಾರ್ಯದರ್ಶಿ ಶೌಕತ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.