Monday, May 2, 2022

ಹೋರಾಟಗಾರ ಗಿರೀಶ್ ಹೆಸರು ನಾಮಕರಣಕ್ಕೆ ಒತ್ತಾಯಿಸಿ ಮನವಿ

ಹೋರಾಟಗಾರ ದಿವಂಗತ ಬಿ.ವಿ ಗಿರೀಶ್‌ರವರ ಹೆಸರನ್ನು ನಗರದ ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿರುವ ತಿಮ್ಲಾಪುರಕ್ಕೆ ಹೋಗುವ ರಸ್ತೆಗೆ ನಾಮಕರಣಗೊಳಿಸುವಂತೆ ಒತ್ತಾಯಿಸಿ ಭದ್ರಾವತಿಯಲ್ಲಿ ಸೋಮವಾರ ವಿವಿಧ ಸಂಘಟನೆಗಳ ಪ್ರಮುಖರು ತಹಸೀಲ್ದಾರ್ ಆರ್. ಪ್ರದೀಪ್‌ಗೆ ಮನವಿ ಸಲ್ಲಿಸಿದರು.
    ಭದ್ರಾವತಿ, ಮೇ. ೨: ಹೋರಾಟಗಾರ ದಿವಂಗತ ಬಿ.ವಿ ಗಿರೀಶ್‌ರವರ ಹೆಸರನ್ನು ನಗರದ ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿರುವ ತಿಮ್ಲಾಪುರಕ್ಕೆ ಹೋಗುವ ರಸ್ತೆಗೆ ನಾಮಕರಣಗೊಳಿಸುವಂತೆ ಒತ್ತಾಯಿಸಿ ಸೋಮವಾರ ವಿವಿಧ ಸಂಘಟನೆಗಳ ಪ್ರಮುಖರು ತಹಸೀಲ್ದಾರ್ ಆರ್. ಪ್ರದೀಪ್‌ಗೆ ಮನವಿ ಸಲ್ಲಿಸಿದರು.
    ತಾಲೂಕು ಕಛೇರಿ ಬಳಿ ಹಮ್ಮಿಕೊಳ್ಳಲಾಗಿದ್ದ ಬಿ.ವಿ ಗಿರೀಶ್‌ರವರ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಮುಖರು ಬಿ.ವಿ ಗಿರೀಶ್‌ರವರು ಕನ್ನಡಪರ ಹೋರಾಟಗಳ ಜೊತೆಗೆ ಕಾರ್ಮಿಕರು, ರೈತರು, ವಿದ್ಯಾರ್ಥಿಗಳ ಹೋರಾಟಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಹೋರಾಟಗಳಿಗೆ ಬೆನ್ನೆಲುಬಾಗಿ ನ್ಯಾಯ ದೊರಕಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಹೆಸರನ್ನು ಚಿರಸ್ಥಾಯಿಯಾಗಿಸಲು ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪದಲ್ಲಿರುವ ತಿಮ್ಲಾಪುರಕ್ಕೆ ಹೋಗುವ ರಸ್ತೆಗೆ ಇವರ ಹೆಸರನ್ನು ನಾಮಕರಣಗೊಳಿಸುವಂತೆ ಮನವಿ ಮಾಡಿದರು.
    ಜನತಾದಳ(ಸಂಯುಕ್ತ) ಕರ್ನಾಟಕ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್. ಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕರುನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ವೈ. ಶಶಿಕುಮಾರ್, ವೀರಶೈವ ಲಿಂಗಾಯತ ಸಮಾಜದ  ಪ್ರಮುಖರಾದ ತೀರ್ಥಯ್ಯ, ಮಲ್ಲಿಕಾರ್ಜುನ, ಬಾರಂದೂರು ಮಂಜುನಾಥ್, ಬಸವರಾಜ್, ನಗರಸಭಾ ಸದಸ್ಯರಾದ ಆರ್. ಮೋಹನ್‌ಕುಮಾರ್, ಆರ್. ಶ್ರೇಯಸ್(ಚಿಟ್ಟೆ), ಪೌರಾಯುಕ್ತ ಕೆ. ಪರಮೇಶ್, ಪರಿಸರ ಅಭಿಯಂತರ ಪ್ರಭಾಕರ್, ಮುಖಂಡರಾದ ಬಿ. ಗಂಗಾಧರ್, ಚಂದ್ರಶೇಖರ್ ಹಾಗು ಬಿ.ವಿ ಗಿರೀಶ್ ಅಭಿಮಾನಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.