Wednesday, May 18, 2022

ಸುಗ್ರಾಮ ಒಕ್ಕೂಟದ ಮಾಸಿಕ ಸಭೆ

ಭದ್ರಾವತಿ ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಮಾಸಿಕ ಸಭೆ ಬುಧವಾರ ನಗರದ ಕಾಂಚನ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.
    ಭದ್ರಾವತಿ, ಮೇ. ೧೮: ತಾಲೂಕು ಸುಗ್ರಾಮ ಚುನಾಯಿತ ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯರ ಒಕ್ಕೂಟದ ಮಾಸಿಕ ಸಭೆ ಬುಧವಾರ ನಗರದ ಕಾಂಚನ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.
    ದಿ ಹಂಗರ್ ಪ್ರಾಜೆಕ್ಟ್ ಕರ್ನಾಟಕ ಮತ್ತು ತರೀಕೆರೆ ವಿಕಸನ ಸಂಸ್ಥೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಪಾಲ್ಗೊಂಡು ಒಕ್ಕೂಟದ ಸದಸ್ಯರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    ಒಕ್ಕೂಟದ ಅಧ್ಯಕ್ಷೆ, ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಸದಸ್ಯೆ ಗೌರಮ್ಮ ಎಸ್. ಮಹಾದೇವ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಒಕ್ಕೂಟದ ಕಾರ್ಯ ಚಟುವಟಿಕೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು.
    ಒಕ್ಕೂಟದ ಉಪಾಧ್ಯಕ್ಷೆ ಪಲ್ಲವಿ, ಗೀತಾ, ಕವಿತ, ಮಾಲತಿ, ಶಾಂತಬಾಯಿ ಸೇರಿದಂತೆ ಸುಮಾರು ೬೦ಕ್ಕೂ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು. ಶಾಲಿನಿ ಕಾರ್ಯಕ್ರಮ ನಿರೂಪಿಸಿದರು.

ಪಿಡಿಓಗಳಿಗೆ ಡೇಂಗಿ ಕುರಿತು ಕಾರ್ಯಾಗಾರ

ಭದ್ರಾವತಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೇಂಗಿ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ(ಪಿಡಿಓ) ತಾಲೂಕು ಕಛೇರಿ ಸಭಾಂಗಣದಲ್ಲಿ ಬುಧವಾರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಮೇ. ೧೮: ತಾಲೂಕು ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಡೇಂಗಿ ದಿನಾಚರಣೆ ಅಂಗವಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳಿಗೆ(ಪಿಡಿಓ) ತಾಲೂಕು ಕಛೇರಿ ಸಭಾಂಗಣದಲ್ಲಿ ಬುಧವಾರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
    ಕಾರ್ಯಾಗಾರಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್ ಚಾಲನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಜನಗರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಗಮನ ನೀಡುವ ಮೂಲಕ ಸೊಳ್ಳೆ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಾಹಿತಿ ನೀಡಲಾಯಿತು.
    ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಆರೋಗ್ಯ ಸಹಾಯಕರಾದ ರೇವತಿ, ಆನಂದಮೂರ್ತಿ, ಶಿವಮೊಗ್ಗ ಎನ್‌ವಿಬಿಡಿಸಿಪಿ ಮೇಲ್ವಿಚಾರಕರು, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಸಿಬ್ಬಂದಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ವಿ.ಎಚ್ ಪಂಚಾಕ್ಷರಿ ಅಧಿಕಾರ ಸ್ವೀಕಾರ

ಭದ್ರಾವತಿ ತಾಲೂಕಿನ ನೂತನ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ವಿ.ಎಚ್ ಪಂಚಾಕ್ಷರಿ ಬುಧವಾರ ಅಧಿಕಾರ ಸ್ವೀಕರಿಸಿದರು.
    ಭದ್ರಾವತಿ, ಮೇ. ೧೮: ತಾಲೂಕಿನ ನೂತನ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ವಿ.ಎಚ್ ಪಂಚಾಕ್ಷರಿ ಬುಧವಾರ ಅಧಿಕಾರ ಸ್ವೀಕರಿಸಿದರು.
    ಸುಮಾರು ೨ ವರ್ಷಗಳಿಂದ ತೆರವಾಗಿದ್ದ ಹುದ್ದೆಯಲ್ಲಿ ಮುಖ್ಯ ಶಿಕ್ಷಕ ಗಣೇಶ್‌ರವರು ಪ್ರಭಾರ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಸೊರಬ ತಾಲೂಕಿನಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ವಿ.ಎಚ್ ಪಂಚಾಕ್ಷರಿ ಅವರನ್ನು  ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರ. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪ್ರಭಾರ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಗಣೇಶ್, ಶಿಕ್ಷಣ ಸಂಯೋಜಕ ರವಿಕುಮಾರ್ ಸೇರಿದಂತೆ ಇನ್ನಿತರರು ವಿ.ಎಚ್ ಪಂಚಾಕ್ಷರಿ ಅವರನ್ನು ಅಭಿನಂದಿಸಿದರು.

ನೂತನ ಪೌರಾಯುಕ್ತ ಎಚ್.ಎಂ ಮನುಕುಮಾರ್

ಎಚ್.ಎಂ ಮನುಕುಮಾರ್
    ಭದ್ರಾವತಿ, ಮೇ. ೧೮ : ಇಲ್ಲಿನ ನಗರಸಭೆ ನೂತನ ಪೌರಾಯುಕ್ತರಾಗಿ ಎಚ್.ಎಂ ಮನುಕುಮಾರ್ ಮಂಗಳವಾರ ಅಧಿಕಾರ ವಹಿಸಿಕೊಂಡರು.
    ಮನುಕುಮಾರ್ ೨೦೧೧ನೇ ಸಾಲಿನ ಕರ್ನಾಟಕ ಪೌರಾಡಳಿತ ಸೇವೆಯ ಮುಖ್ಯಾಧಿಕಾರಿ ಶ್ರೇಣಿ-೧ರ ಗ್ರೂಪ್-ಬಿ ಅಧಿಕಾರಿಯಾಗಿದ್ದಾರೆ. ಸ್ಥಳ ನಿರೀಕ್ಷೆಯಲ್ಲಿದ್ದ ಇವರನ್ನು ಮೊದಲ ಬಾರಿಗೆ ಪೌರಾಯುಕ್ತರ ಹುದ್ದೆಗೆ ನಿಯೋಜನೆಗೊಳಿಸಿ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ಲತಾ ಆದೇಶ ಹೊರಡಿಸಿದ್ದಾರೆ.
    ಸುಮಾರು ೧ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕೆ. ಪರಮೇಶ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.