Saturday, May 21, 2022

ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿಕೊಡುವಲ್ಲಿ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಯವರ ಶ್ರಮ ಹೆಚ್ಚು : ಬಿ. ಸಿದ್ದಬಸಪ್ಪ

ಭದ್ರಾವತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಸರ್ವ ಸದಸ್ಯರ ಸಭೆ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಮೇ. ೨೧: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಸರ್ವ ಸದಸ್ಯರ ಸಭೆ ಹಾಗು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಶನಿವಾರ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಹಳೇನಗರದ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಶಾಖೆ ಅಧ್ಯಕ್ಷ ಬಿ. ಸಿದ್ದಬಸಪ್ಪ, ಸರ್ಕಾರಿ ನೌಕರರ ಬಹುತೇಕ ಬೇಡಿಕೆಗಳನ್ನು ಈಡೇರಿಸಿಕೊಡುವಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿಯವರ ಶ್ರಮ ಹೆಚ್ಚಿನದ್ದಾಗಿದ್ದು, ಅದರಲ್ಲೂ ರಾಜ್ಯಾಧ್ಯಕ್ಷರು ಶಿವಮೊಗ್ಗ ಜಿಲ್ಲೆಯವರೇ ಆಗಿರುವ ಕಾರಣ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರು ನೆಮ್ಮದಿ ಕಾಣುವಂತಾಗಿದೆ. ಮುಂದಿನ ದಿನಗಳಲ್ಲಿ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಿಕೊಡುವ ವಿಶ್ವಾಸ ಹೊಂದಿದ್ದಾರೆ. ತಾಲೂಕಿನಲ್ಲಿ ನೌಕರರು ಇನ್ನೂ ಹೆಚ್ಚಿನ ರೀತಿಯಲ್ಲಿ ಕ್ರಿಯಾಶೀಲರಾಗುವ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಮನವಿ ಮಾಡಿದರು.
    ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಸನ್ಮಾನ ಹಾಗು ಬಹುಮಾನ ವಿತರಣೆ ನೆರವೇರಿಸಿದರು. ರಾಜ್ಯ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್, ಜಿಲ್ಲಾ ಕಾರ್ಯದರ್ಶಿ ಡಿ.ಟಿ ಕೃಷ್ಣಮೂರ್ತಿ,  ಪ್ರಸೂತಿ ತಜ್ಞೆ ಡಾ. ವೀಣಾ ಭಟ್, ತಹಸೀಲ್ದಾರ್ ಆರ್. ಪ್ರದೀಪ್, ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಎಲ್ ರಂಗಸ್ವಾಮಿ,  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಕಾಂತರಾಜ್, ಗ್ರಂಥಾಲಯ ಇಲಾಖೆಯ ರಾಜ್‌ಕುಮಾರ್, ಹಿರಿಯ ವೈದ್ಯ ಡಾ. ಶಿವಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕಾರ್ಯದರ್ಶಿ ಡಿ.ಎಸ್ ರಾಜಪ್ಪ ಸ್ವಾಗತಿಸಿದರು. ರಾಜ್ಯ ಪರಿಷತ್ ಸದಸ್ಯ ಎಸ್. ಪ್ರಕಾಶ್ ನಿರೂಪಿಸಿದರು. ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.

ವಿಜೃಂಭಣೆಯಿಂದ ಜರುಗಿದ ಶ್ರೀ ಆಂಜನೇಯ ಸ್ವಾಮಿ ಮಹಾರಥೋತ್ಸವ


ಭದ್ರಾವತಿ ತಾಲೂಕು ಕಚೇರಿ ರಸ್ತೆಯಲ್ಲಿರುವ ಕಂಚಿನ ಬಾಗಿಲು ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮಹಾರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಮೇ. ೨೧: ನಗರದ ತಾಲೂಕು ಕಚೇರಿ ರಸ್ತೆಯಲ್ಲಿರುವ ಕಂಚಿನ ಬಾಗಿಲು ಕೋಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮಹಾರಥೋತ್ಸವ ಶನಿವಾರ ವಿಜೃಂಭಣೆಯಿಂದ ಜರುಗಿತು.
    ಪ್ರತಿ ವರ್ಷದಂತೆ ಈ ಬಾರಿ ಸಹ  ಮಹಾ ರಥೋತ್ಸವ ನಡೆಯಿತು. ರಥೋತ್ಸವ ದೇವಸ್ಥಾನದಿಂದ ಆರಂಭಗೊಂಡು ರಂಗಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಸ್ವಾಮಿಗೆ ಜೈಕಾರ ಹಾಕಿ ಸಂಭ್ರಮಿಸಿದರು. ಭಜನಾ ತಂಡಗಳಿಂದ ಭಜನೆ, ಕೀರ್ತನೆಗಳು ಜರುಗಿದವು. ಭಕ್ತರಿಂದ ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ಹಾಗು ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.
     ರಥೋತ್ಸವಕ್ಕೂ ಮೊದಲು ಬೆಳಿಗ್ಗೆ ನವಗ್ರಹ ಹೋಮ, ಅಧಿವಾಸ ಹೋಮ, ರಥ ಶುದ್ಧಿಹೋಮ, ರಥಾಧಿವಾಸ ಹೋಮ, ಶ್ರೀ ಸ್ವಾಮಿಯ ರಥಾರೋಹಣ, ಸಂಜೆ ಅಷ್ಟಾವಧಾನ ಸೇವೆ, ಶಯನೋತ್ಸವ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ದೇವಸ್ಥಾನದ ಪ್ರಧಾನ ಅರ್ಚಕ ಪವನ್‌ಕುಮಾರ್ ಉಡುಪ ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು.
    ಬಿ.ಕೆ ಸಂಗಮೇಶ್ವರ್, ತಹಶೀಲ್ದಾರ್ ಆರ್. ಪ್ರದೀಪ್, ನಗರಸಭಾ ಸದಸ್ಯರಾದ ಬಿ.ಟಿ ನಾಗರಾಜ್, ಆರ್. ಶ್ರೇಯಸ್, ಬಿ.ಎಂ. ಮಂಜುನಾಥ್, ಮಣಿ ಎಎನ್‌ಎಸ್, ಅನುಪಮ ಚನ್ನೇಶ್, ಪೌರಾಯುಕ್ತ ಮನುಕುಮಾರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಮಂಗೋಟೆ ರುದ್ರೇಶ್, ರಮಾಕಾಂತ್, ನರಸಿಂಹಚಾರ್, ದೇವಸ್ಥಾನ ಸಮಿತಿ ಅಧ್ಯಕ್ಷ ಕೆ. ನರಸಿಂಹಮೂರ್ತಿ, ಗೌರವಾಧ್ಯಕ್ಷ ಎಸ್.ಕೆ ಶಿವಲಿಂಗೇಗೌಡ, ಉಪಾಧ್ಯಕ್ಷ ಬಿ. ಅಪ್ಪಾಜಿ ಗೌಡ, ಪ್ರಧಾನ ಕಾರ್ಯದರ್ಶಿ ಎಸ್.ಎನ್ ರಾಜಶೇಖರ್, ಕಾರ್ಯದರ್ಶಿ ಎ.ಎಸ್ ಆಶಾ ಪುಟ್ಟಸ್ವಾಮಿ, ಖಜಾಂಚಿ ಎಸ್.ಬಿ ದುಗ್ಗೇಗೌಡ, ಶಿವೇಗೌಡ, ರತ್ನಮ್ಮ ಸುಭಾಷ್, ಎನ್. ಜವರೇಗೌಡ, ವೀಣಾ ಶ್ರೀನಿವಾಸ್, ಎಸ್.ಎಸ್ ಪ್ರಸನ್ನಕುಮಾರ್ ಮತ್ತು ಹೇಮಂತಕುಮಾರ್ ಸೇರಿದಂತೆ ಪದಾಧಿಕಾರಿಗಳು ಹಾಗು ಸಿದ್ದರೂಢನಗರ, ಹಳೇನಗರ, ಹನುಮಂತನಗರ, ಅಂಬೇಡ್ಕರ್ ನಗರ, ಭೂತನಗುಡಿ, ಕೇಶವಪುರ, ಹೊಸಮನೆ, ಹುತ್ತಾಕಾಲೋನಿ, ನ್ಯೂಕಾಲೋನಿ ವಿವಿಧೆಡೆಗಳಿಂದ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು.