Saturday, June 18, 2022

ಪಿಯುಸಿ ಪರೀಕ್ಷೆಯಲ್ಲಿ ವಿವಿಧ ಕಾಲೇಜುಗಳಿಗೆ ಉತ್ತಮ ಫಲಿತಾಂಶ

ಭದ್ರಾವತಿ ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಎಸ್.ಆರ್ ಸುಷ್ಮ ವಾಣಿಜ್ಯ ವಿಭಾಗದಲ್ಲಿ ೫೭೬ ಅಂಕ ಪಡೆದುಕೊಂಡಿದ್ದಾರೆ.
    ಭದ್ರಾವತಿ, ಜೂ. ೧೮: ನಗರದ ವಿವಿಧ ಪದವಿ ಪೂರ್ವ ಕಾಲೇಜುಗಳು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡಿವೆ.


ಭದ್ರಾವತಿ ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  ವಿಜ್ಞಾನ ವಿಭಾಗದಲ್ಲಿ ಸಿಂಧೂಶ್ರೀ ೫೬೬ ಅಂಕ ಪಡೆದುಕೊಂಡಿದ್ದಾರೆ.
    ಹಳೇನಗರದ ಸಂಚಿ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು ೨೭೬ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ೧೬೪ ವಿದ್ಯಾರ್ಥಿಗಳು ಉತ್ತೀರ್ಣ ಹೊಂದಿದ್ದಾರೆ. ಒಟ್ಟು ೭೨ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗು ೧೯ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 


ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಎಸ್‌ಎವಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿ ಶ್ರೀಲಕ್ಷ್ಮೀ ಎಸ್. ಶೇಖರ್-೫೯೦ ಅಂಕ ಪಡೆದುಕೊಂಡಿದ್ದಾರೆ.
    ವಿದ್ಯಾರ್ಥಿಗಳಾದ ಎಸ್.ಆರ್ ಸುಷ್ಮ ವಾಣಿಜ್ಯ ವಿಭಾಗದಲ್ಲಿ ೫೭೬, ವಿಜ್ಞಾನ ವಿಭಾಗದಲ್ಲಿ ಸಿಂಧೂಶ್ರೀ ೫೬೬ ಮತ್ತು ಸುರಭಿ ೫೬೪ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು ಶೇ.೬೦ರಷ್ಟು ಫಲಿತಾಂಶ ಪಡೆದುಕೊಂಡಿದೆ ಎಂದು ಕಾಲೇಜಿನ ಪ್ರಾಚಾರ್ಯ ಸಿದ್ದಲಿಂಗಮೂರ್ತಿ ತಿಳಿಸದ್ದಾರೆ.


ಭದ್ರಾವತಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಎಸ್‌ಎವಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಎಂ.ಡಿ ಟಿ. ಫೈಸಲ್-೫೮೪ ಅಂಕ ಪಡೆದುಕೊಂಡಿದ್ದಾರೆ.
    ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಎಸ್‌ಎವಿ ಕಾಂಪೋಸಿಟ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಾದ ಶ್ರೀಲಕ್ಷ್ಮೀ ಎಸ್. ಶೇಖರ್-೫೯೦, ಎಂ.ಡಿ ಟಿ. ಫೈಸಲ್-೫೮೪, ಎಸ್. ವೀರೇಶ್-೫೮೨, ಬಿ.ಎನ್ ವರ್ಷ-೫೮೧, ಎಸ್.ಎಲ್ ದೃತಿ-೫೮೦, ಟಿ. ಚೇತನ-೫೭೭, ಎಚ್.ಆರ್ ಗಿರೀಶ್-೫೭೬, ಆರ್. ನಿಸರ್ಗ-೫೭೬, ಡಿ.ಆರ್ ಮೇಘನ-೫೭೩ ಮತ್ತು ಜಿ. ಪೂರ್ಣಿಮಾ-೫೭೧ ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ. ಒಟ್ಟಾರೆ ಕಾಲೇಜಿಗೆ ಈ ಬಾರಿ ಉತ್ತಮ ಫಲಿತಾಂಶ ಲಭಿಸಿದೆ ಎಂದು ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ ತಿಳಿಸಿದ್ದಾರೆ.


ಶಿವಮೊಗ್ಗ ನಂದನ ಎಜ್ಯುಕೇಷನ್ ಟ್ರಸ್ಟ್‌ನ ಆಚಾರ್ಯ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಸ್.ಡಿ ನಂದಿತಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೫೮೩ ಅಂಕ ಪಡೆದುಕೊಂಡಿದ್ದಾರೆ.
      ಎಸ್.ಡಿ ನಂದಿತಾಗೆ ೫೮೩ ಅಂಕ:
    ಶಿವಮೊಗ್ಗ ನಂದನ ಎಜ್ಯುಕೇಷನ್ ಟ್ರಸ್ಟ್‌ನ ಆಚಾರ್ಯ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಸ್.ಡಿ ನಂದಿತಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ೫೮೩ ಅಂಕ ಪಡೆದುಕೊಂಡಿದ್ದಾರೆ. ಈಕೆ ನಗರದ ಜನ್ನಾಪುರ ನಿವಾಸಿಗಳಾದ ಶ್ಯಾಮಲ ಮತ್ತು ಧನರಾಜ್ ದಂಪತಿ ಪುತ್ರಿಯಾಗಿದ್ದಾರೆ.


ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಎಚ್.ಎನ್ ಲಿಖಿತ್ ಪಟೇಲ್ ೫೬೮ ಅಂಕದೊಂದಿಗೆ ಶೇ.೯೫ ಫಲಿತಾಂಶ ಪಡೆದುಕೊಂಡಿದ್ದಾರೆ.
    ಎಚ್.ಎನ್ ಲಿಖಿತ್ ಪಟೇಲ್‌ಗೆ ೫೬೮ ಅಂಕ :
    ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಎಚ್.ಎನ್ ಲಿಖಿತ್ ಪಟೇಲ್ ೫೬೮ ಅಂಕದೊಂದಿಗೆ ಶೇ.೯೫ ಫಲಿತಾಂಶ ಪಡೆದುಕೊಂಡಿದ್ದಾರೆ. ಲಿಖಿತ್ ಪಟೇಲ್ ನಗರದ ನಿವಾಸಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಹೆಬ್ಬಂಡಿ ನಾಗರಾಜ್‌ರವರ ಪುತ್ರರಾಗಿದ್ದಾರೆ.

ಉತ್ತಮ ಪರಿಸರಕ್ಕೆ ಪ್ರತಿಯೊಬ್ಬರು ಸಸಿ ನೆಡುವುದು ಅವಶ್ಯಕ : ಶಫಿ ಉಲ್ಲಾ

ಭದ್ರಾವತಿ ತಾಲೂಕಿನ ಅರಬಿಳಿಚಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
    ಭದ್ರಾವತಿ, ಜೂ. ೧೮: ಉತ್ತಮ ಪರಿಸರಕ್ಕೆ ಪ್ರತಿಯೊಬ್ಬರು ಸಸಿಗಳನ್ನು ನೆಡುವ ಮೂಲಕ ಅವುಗಳನ್ನು ಪೋಷಿಸಿ ಬೆಳೆಸಬೇಕೆಂದು ತಾಲೂಕಿನ ಕೂಡ್ಲಿಗೆರೆ ಉಪ ವಲಯ ಅರಣ್ಯಾಧಿಕಾರಿ ಶಫಿ ಉಲ್ಲಾ ಹೇಳಿದರು.
    ಅವರು ತಾಲೂಕಿನ ಅರಬಿಳಿಚಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪ್ರತಿಯೊಬ್ಬ ಮನುಷ್ಯನಿಗೂ ಪ್ರಾಣ ವಾಯು ಆಮ್ಲಜನಕ ಅತಿ ಅವಶ್ಯಕವಾಗಿದ್ದು, ಶುದ್ಧ ಆಮ್ಲಜನಿಕ ಪಡೆಯಲು ಸಸಿಗಳನ್ನು ಹೆಚ್ಚು ಹೆಚ್ಚಾಗಿ ನೆಡುವುದು ಅವಶ್ಯಕವಾಗಿದೆ ಎಂದರು.
    ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲ, ಎಸ್‌ಡಿಎಂಸಿ ಅಧ್ಯಕ್ಷ ಆರ್. ವೀರಾಚಾರಿ ಹಾಗು ಮೇಲುಸ್ತುವಾರಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳು, ಶಾಲೆಯ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



ಶಿಕ್ಷಣ ಸಮಾಜದ ಎಲ್ಲರನ್ನು ಒಳಗೊಂಡಿದೆ : ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ

 ಭದ್ರಾವತಿ ವಿದ್ಯಾಮಂದಿರ ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಮಕ್ಕಳ ದಂತ ತಪಸಣಾ ಶಿಬಿರ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್  ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಿಸಿದರು.
    ಭದ್ರಾವತಿ, ಜೂ. ೧೮: ಶಿಕ್ಷಣ ಎಂದರೆ ಕೇವಲ ಮಕ್ಕಳು, ಶಿಕ್ಷಕರು ಹಾಗು ಪೋಷಕರ ನಡುವಿನ ಸಂಬಂಧವಲ್ಲ. ಶಿಕ್ಷಣ ಸಮಾಜದ ಎಲ್ಲರನ್ನು ಒಳಗೊಂಡಿದೆ ಎಂಬುದನ್ನು ಕೆಲವು ಸಂಘ-ಸಂಸ್ಥೆಗಳ ಮಾದರಿ ಕಾರ್ಯಗಳಿಂದ ತಿಳಿದು ಬರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಹೇಳಿದರು.
    ಅವರು ಶನಿವಾರ ವಿದ್ಯಾಮಂದಿರ ಕಲ್ಪವೃಕ್ಷ ಸೇವಾ ಟ್ರಸ್ಟ್ ವತಿಯಿಂದ ಲಯನ್ಸ್ ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಮತ್ತು ಮಕ್ಕಳ ದಂತ ತಪಸಣಾ ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಮಕ್ಕಳ ಶಿಕ್ಷಣಕ್ಕೆ ನೆರವಾಗಿ ಉಚಿತವಾಗಿ ನೋಟ್  ಪುಸ್ತಕ ಹಾಗು ಲೇಖನ ಸಾಮಗ್ರಿಗಳನ್ನು ವಿತರಿಸುತ್ತಿರುವುದು ಸಮಾಜಕ್ಕೆ ಮಾದರಿ ಕಾರ್ಯವಾಗಿದೆ. ಮಕ್ಕಳು ನೋಟ್ ಪುಸ್ತಕ ಹಾಗು ಲೇಖನ ಸಾಮಗ್ರಿಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
    ಯುವ ಮುಖಂಡ ಗಣೇಶ್ ಮಾತನಾಡಿ, ಟ್ರಸ್ಟ್ ಮೂಲಕ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿರುವ ಎಲ್ಲರ ಶ್ರಮ ಹೆಚ್ಚಿನದ್ದಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯಗಳು ಇನ್ನೂ ಹೆಚ್ಚಾಗಿ ನಡೆಯುವಂತಾಗಲಿ ಎಂದರು.
    ಸುಬ್ಬಯ್ಯ ಡೆಂಟಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ದಂತ ತಪಾಸಣೆ ನಡೆಸಲಾಯಿತು.
    ಟ್ರಸ್ಟ್ ಅಧ್ಯಕ್ಷ ಲಾಜರ್, ಉಪಾಧ್ಯಕ್ಷ ರಾಮಪ್ಪ ವಿ. ಮುನೇನಕೊಪ್ಪ, ಪ್ರಧಾನ ಕಾರ್ಯದರ್ಶಿ, ನಗರಸಭಾ ಸದಸ್ಯ್ ಕಾಂತರಾಜ್, ಸಹ ಕಾರ್ಯದರ್ಶಿ ಎಚ್.ಪಿ ಶ್ರೀನಿವಾಸ್, ಕೋಶಾಧ್ಯಕ್ಷ ಮಹೇಶ್ವರಪ್ಪ, ನಿರ್ದೇಶಕರಾದ ವಿ.ಎಚ್ ಶಿವಣ್ಣ, ಎಸ್.ಎಚ್ ಹನುಮಂತರಾವ್, ಎಲ್. ಬಸವರಾಜಪ್ಪ, ಡಿ. ಸುಬ್ರಮಣಿ, ನಾಗರಾಜ್, ಆರ್. ಕಾಮಾಕ್ಷಿ, ಎನ್. ರೂಪ, ವಿಲ್ಸನ್ ಬಾಬು ಮತ್ತು ಕೆ. ಆಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.