Thursday, July 7, 2022

ವರ್ಗಾವಣೆಗೊಂಡ ಉಪವಿಭಾಗಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಿಗೆ ಬೀಳ್ಕೊಡುಗೆ


ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ವರ್ಗಾವಣೆಗೊಂಡಿರುವ ಟಿ.ವಿ ಪ್ರಕಾಶ್ ಹಾಗು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾಗಿ ಪ್ರಭಾರ ಕರ್ತವ್ಯ ನಿರ್ವಹಿಸಿ ಮೂಲ ಸ್ಥಾನಕ್ಕೆ ಹಿಂದಿರುಗಿರುವ ಗೋಪಿನಾಥ್ ಅವರಿಗೆ ಭದ್ರಾವತಿ ತಾಲೂಕು ಆಡಳಿತದ ಪರವಾಗಿ ಬೀಳ್ಕೊಡುಗೆ ನೀಡಲಾಯಿತು.
    ಭದ್ರಾವತಿ, ಜು. ೭: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮುಂಬಡ್ತಿ ಹೊಂದಿ ವರ್ಗಾವಣೆಗೊಂಡಿರುವ ಟಿ.ವಿ ಪ್ರಕಾಶ್ ಹಾಗು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾಗಿ ಪ್ರಭಾರ ಕರ್ತವ್ಯ ನಿರ್ವಹಿಸಿ ಮೂಲ ಸ್ಥಾನಕ್ಕೆ ಹಿಂದಿರುಗಿರುವ ಗೋಪಿನಾಥ್ ಅವರಿಗೆ ತಾಲೂಕು ಆಡಳಿತದ ಪರವಾಗಿ ಬೀಳ್ಕೊಡುಗೆ ನೀಡಲಾಯಿತು.
      ಸುಮಾರು ೪ ವರ್ಷಗಳ ಕಾಲ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಟಿ.ವಿ ಪ್ರಕಾಶ್‌ರವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಲಾಯಿತು.
      ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಹಿಂದೆ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೂದ್‌ಪೀರ್ ಅವರು ಮುಂಬಡ್ತಿಹೊಂದಿ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ತೆರವಾಗಿದ್ದ ಹುದ್ದೆಯಲ್ಲಿ ಗೋಪಿನಾಥ್ ಅವರು ಸುಮಾರು ೧ ವರ್ಷ ಪ್ರಭಾರ ಅಧಿಕಾರ ನಿರ್ವಹಿಸಿ ಹಿಂದಿರುಗಿದ್ದಾರೆ. ತಾಲೂಕು ಆಡಳಿತ ವತಿಯಿಂದ ಇಬ್ಬರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
      ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಗೀತಾರಾಜ್‌ಕುಮಾರ್, ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಆರೊಗ್ಯಾಧಿಕಾರಿ ಡಾ. ಎಂ.ವಿ ಅಶೋಕ್, ಪೊಲೀಸ್ ಇನ್ಸ್‌ಪೆಕ್ಟರ್ ಇ.ಓ ಮಂಜುನಾಥ್ ಹಾಗು ಆಡಳಿತ ಕಛೇರಿ, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಶಾಂತಿಯುತ ಬಕ್ರೀದ್ ಆಚರಣೆಗೆ ಪೊಲೀಸ್ ಇಲಾಖೆ ಮನವಿ

ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಗುರುವಾರ ಭದ್ರಾವತಿ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಮುಸ್ಲಿಂ ಸಮುದಾಯದವರೊಂದಿಗೆ ಶಾಂತಿ ಸಭೆ ನಡೆಸಲಾಯಿತು.
    ಭದ್ರಾವತಿ, ಜು. ೭: ನಗರದಲ್ಲಿ ಬಕ್ರೀದ್ ಹಬ್ಬ ಶಾಂತಿಯುತವಾಗಿ ಆಚರಿಸುವ ಮೂಲಕ ಸೌಹಾರ್ದತೆ ಮೂಡಿಸಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.
      ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಗುರುವಾರ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಇಲಾಖೆ ವತಿಯಿಂದ ಮುಸ್ಲಿಂ ಸಮುದಾಯದವರೊಂದಿಗೆ ಶಾಂತಿ ಸಭೆ ನಡೆಸಲಾಯಿತು. ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಮುಸ್ಲಿಂ ಸಮುದಾಯದವರು ಸಡಗರ, ಸಂಭ್ರಮದಿಂದ ಹಬ್ಬ ಆಚರಿಸಬೇಕು. ಯಾವುದೇ ರೀತಿ ಆಶಾಂತಿ ವಾತಾವರಣಕ್ಕೆ ಅವಕಾಶ ಕಲ್ಪಿಸಿಕೊಡಬಾರದು. ಹಬ್ಬದ ಆಚರಣೆಗೆ ಇಲಾಖೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಭರವಸೆ ನೀಡಲಾಯಿತು.
        ಮುಸ್ಲಿಂ ಸಮುದಾಯದ ಪ್ರಮುಖರು, ಹಬ್ಬದ ಸಂದರ್ಭದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಇಲಾಖೆ ಗಮನಕ್ಕೆ ತರುವ ಜೊತೆಗೆ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಬ್ಬ ಆಚರಿಸು ವಿಶ್ವಾಸ ವ್ಯಕ್ತಪಡಿಸಿದರು.
      ಮುಸ್ಲಿಂ ಸಮುದಾಯದ ಪ್ರಮುಖರಾದ ಅಂಜುಮಾನ್ ಇಸ್ಲಾಹುಲ್ ಮುಸ್ಲಿಂಮೀನ್ ಅಧ್ಯಕ್ಷ ಮುರ್ತುಜಾಖಾನ್, ನಗರಸಭೆ ಸದಸ್ಯ ಸೈಯದ್ ರಿಜ್ವಾನ್, ಮಾಜಿ ಸದಸ್ಯ ಬಾಬಾಜಾನ್, ಅಮೀರ್‌ಜಾನ್, ಫೀರ್ ಷರೀಫ್, ವಿವಿಧ ಠಾಣೆಗಳ ಠಾಣಾಧಿಕಾರಿಗಳು ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
      ತಹಸೀಲ್ದಾರ್ ಆರ್. ಪ್ರದೀಪ್, ಪೊಲೀಸ್  ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ದೇವರಾಜ್ ಸ್ವಾಗತಿಸಿದರು.

ಜು.೯ರಂದು ೨೦೨ನೇ ಸಾಹಿತ್ಯ ಹುಣ್ಣಿಮೆ


ಭದ್ರಾವತಿ, ಜು. ೭: ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗು ಕಾಗದನಗರದ ಗುರು ಬ್ರದರ್‍ಸ್ ಆರ್ಟ್ಸ್ ವತಿಯಿಂದ ಶ್ರೀಮತಿ ಸರೋಜಮ್ಮನವರ ಮೊದಲ ವರ್ಷದ ಭಾವಸ್ಮರಣೆ ಅಂಗವಾಗಿ ಜು.೯ರಂದು ಸಂಜೆ ೬ ಗಂಟೆಗೆ ಉಜ್ಜನಿಪುರದ ಡಿ.ಜಿ ಹಳ್ಳಿ ಮುಖ್ಯ ರಸ್ತೆಯಲ್ಲಿರುವ ಬಣ್ಣದ ಮನೆ ಆವರಣದಲ್ಲಿ ೨೦೨ನೇ ಸಾಹಿತ್ಯ ಹುಣ್ಣಿಮೆ ತಿಂಗಳ ಮನೆ-ಮನ-ಸಾಹಿತ್ಯ ಕಾರ್ಯಕ್ರಯ ಹಮ್ಮಿಕೊಳ್ಳಲಾಗಿದೆ.
      ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ. ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸೀತವ್ವ ಜೋಡಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
        ಶಾಸಕ ಬಿ.ಕೆ ಸಂಗಮೇಶ್ವರ್, ಜಾತ್ಯಾತೀತ ಜನತಾದಳ ಮುಖಂಡರಾದ ಶಾರದ ಅಪ್ಪಾಜಿ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಚನ್ನಪ್ಪ, ನಗಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಅಂತರರಾಷ್ಟ್ರೀಯ ಗಾಯಕ ಡಾ. ಕಿಕ್ಕೇರಿ ಕೃಷ್ಣಮೂರ್ತಿ, ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘದ ರಾಜ್ಯಾಧ್ಯಕ್ಷ ಬಿ.ಕೆ ಗುರುರಾಜ್, ಚಿಕ್ಕಮಗಳೂರು ಜಿಲ್ಲಾ ಯೋಜನಾ ನಿರ್ದೇಶಕ ಮನೋಹರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಎನ್. ಹರಿಕುಮಾರ್, ಕೋಗಲೂರು ತಿಪ್ಪೇಸ್ವಾಮಿ, ಕೋಡ್ಲು ಯಜ್ಞಯ್ಯ, ಎಂ.ಎಸ್ ಸುಧಾಮಣಿ, ಎಂ.ಎಸ್ ಶಿವಪ್ರಕಾಶ್, ಬಿ.ಎನ್ ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
      ಹಾಡು-ಹಾಸ್ಯ-ಕವನ-ಹನಿಗವನ-ಕಥೆ-ವಿಚಾರ ಸಾಂಸ್ಕೃತಿಕ ಕಾರ್ಯಕ್ರಮ, ಸರ್ಕಾರಿ ಶಾಲಾ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ, ಕರೋನಾ ಯೋಧರಿಗೆ ಅಭಿನಂದನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ.