Saturday, September 3, 2022

ಸೆ.೫ರಂದು ಶಿಕ್ಷಕರ ದಿನಾಚರಣೆ


ಭದ್ರಾವತಿ, ಸೆ. ೩: ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಸೆ.೫ರಂದು ಬೆಳಿಗ್ಗೆ ೧೦ ಗಂಟೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನಾಚರಣೆ ಶಿಕ್ಷಕರ ದಿನಾಚರಣೆ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲೂಕು ಮಟ್ಟದ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಹಾಗು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ಪಡೆದ ಶಾಲೆಗಳಿಗೆ ಸನ್ಮಾನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಲಿವೆ.
ತಾಲೂಕಿನ ಎಲ್ಲಾ ಶಿಕ್ಷಕರು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕೋರಿದ್ದಾರೆ. ಕೋರಲಾಗಿದೆ. 

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಇಎಸ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ಬಹುಮಾನ

ಭದ್ರಾವತಿ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಹಾಗೂ ಕನ್ನಡ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಭದ್ರಾವತಿ, ಸೆ. ೩:  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಆಶ್ರಿತದ  ನಗರದ ಹೊಸಸೇತುವೆ ರಸ್ತೆಯಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಆಂಗ್ಲ ಹಾಗೂ ಕನ್ನಡ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಹಳೇನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಆಯೋಜಿಸಲಾಗಿದ್ದ  ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸುವ ಮೂಲಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
    ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು, ಆಡಳಿತಾಧಿಕಾರಿಗಳು, ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಬಬ್ಬೂರುಕಮ್ಮೆ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರ

ಭದ್ರಾವತಿ ನಗರದ ಜನ್ನಾಪುರ ಬಬ್ಬೂರುಕಮ್ಮೆ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಭದ್ರಾವತಿ, ಸೆ. ೩: ನಗರದ ಜನ್ನಾಪುರ ಬಬ್ಬೂರುಕಮ್ಮೆ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
    ಪ್ರತಿಭಾವಂತ ವಿದ್ಯಾರ್ಥಿಗಳಾದ ಸ್ಕಂದ ಭಾರದ್ವಾಜ್ ಮತ್ತು ವಿಕಾಸ್ ಅವರನ್ನು ತಾಲೂಕು ಬ್ರಾಹ್ಮಣ ಸಭಾ ಪ್ರಮುಖರಾದ ಎ.ಎನ್ ಸುರೇಶ್ ಸನ್ಮಾನಿಸಿ ಗೌರವಿಸಿದರು. ಬಬ್ಬೂರುಕಮ್ಮೆ ಸೇವಾ ಸಂಘದ ಅಧ್ಯಕ್ಷ ಎಚ್.ಎಸ್ ನಂಜುಂಡಯ್ಯ ಅಧ್ಯಕ್ಷತೆ ವಹಿಸಿದ್ದರು,
    ಎಚ್.ಆರ್ ಸುಧಾ ಪ್ರಾರ್ಥಿಸಿದರು, ಡಾ.ಎಂ.ಎಚ್ ವಿದ್ಯಾಶಂಕರ್ ಸ್ವಾಗತಿಸಿದರು. ಎಚ್.ಆರ್ ಶ್ರೀಧರೇಶ್ ಭಾರದ್ವಾಜ್ ನಿರೂಪಿಸಿ, ದಿನೇಶ್ ವಂದಿಸಿದರು.

ಸೆ.೪ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳು

    ಭದ್ರಾವತಿ, ಸೆ. ೩: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸೆ.೪ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯ್ಕೆ ಸ್ಪರ್ಧೆಗಳು ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆಯಲಿವೆ.
    ಅಥ್ಲೆಟಿಕ್ ಸ್ಪರ್ಧೆಗಳು (ಪುರುಷರಿಗೆ) : ೧೦೦೦ ಮೀ., ೨೦೦ ಮೀ., ೪೦೦ ಮೀ., ೫೦೦ ಮೀ., ೧೫೦೦ ಮೀ. ಮತ್ತು ೫೦೦೦ ಮೀ. ಓಟ ಹಾಗು ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಡಿಸ್ಕಸ್ ಎಸೆತ ಮತ್ತು ಜಾವಲಿನ್ ಥ್ರೋ, ೪*೧೦೦ ಮತ್ತು ೪*೪೦೦ ರಿಲೆ ಮತ್ತು ೧೧೦ ಮೀ. ಹರ್ಡಲ್ಸ್ ಸ್ಪರ್ಧೆಗಳು.
    ಅಥ್ಲೆಟಿಕ್ ಸ್ಪರ್ಧೆಗಳು (ಮಹಿಳೆಯರಿಗೆ) : ೧೦೦ ಮೀ., ೨೦೦ ಮೀ., ೪೦೦ ಮೀ., ೮೦೦ ಮೀ., ೧೫೦೦ ಮೀ. ಮತ್ತು ೩೦೦೦ ಮೀ. ಓಟ ಹಾಗು ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಡಿಸ್ಕಸ್ ಎಸೆತ ಮತ್ತು ಜಾವಲಿನ್ ಥ್ರೋ, ೪*೧೦೦ ಮತ್ತು ೪*೪೦೦ ರಿಲೆ ಮತ್ತು ೧೦೦ ಮೀ. ಹರ್ಡಲ್ಸ್ ಸ್ಪರ್ಧೆಗಳು.
    ಉಳಿದಂತೆ ಪುರುಷರಿಗೆ ಪುಟ್‌ಬಾಲ್, ಪುರುಷ ಮತ್ತು ಮಹಿಳೆಯರಿಗೆ ಖೋ-ಖೋ, ಕಬಡ್ಡಿ, ವಾಲಿಬಾಲ್, ಥ್ರೋ ಬಾಲ್ ಮತ್ತು ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯಲಿವೆ.
    ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಹಾಗು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಮೊ: ೯೦೦೮೯೪೯೮೪೭ ಅಥವಾ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಜಿ. ಪ್ರಭು, ಮೊ: ೯೮೪೫೪೦೫೮೫೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.