Monday, September 5, 2022

ಖಾತೆ ಪಹಣಿ ಮ್ಯುಟೇಷನ್ ದಾಖಲೆ ವಿಳಂಬ : ಡಿಎಸ್‌ಎಸ್ ಪ್ರತಿಭಟನೆ

ರೈತರಿಗೆ ಸಾಗುವಳಿ ಚೀಟಿ ನೀಡಿದ್ದರೂ ಸಹ ಖಾತೆ ಪಹಣಿ ಮ್ಯುಟೇಷನ್ ದಾಖಲೆ ಮಾಡದೆ ವಿಳಂಬ ನೀತಿ ಮತ್ತು ೯೪ಸಿ ಅಡಿಯ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಹಿಂದೂ ರುದ್ರಭೂಮಿ ಮಂಜೂರಾತಿಗೆ ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ(ಸಂಯೋಜಕ) ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಸೆ. ೫: ರೈತರಿಗೆ ಸಾಗುವಳಿ ಚೀಟಿ ನೀಡಿದ್ದರೂ ಸಹ ಖಾತೆ ಪಹಣಿ ಮ್ಯುಟೇಷನ್ ದಾಖಲೆ ಮಾಡದೆ ವಿಳಂಬ ನೀತಿ ಮತ್ತು ೯೪ಸಿ ಅಡಿಯ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಹಿಂದೂ ರುದ್ರಭೂಮಿ ಮಂಜೂರಾತಿಗೆ ಆಗ್ರಹಿಸಿ ಸೋಮವಾರ ತಾಲೂಕು ಕಛೇರಿ ಮುಂಭಾಗ ದಲಿತ ಸಂಘರ್ಷ ಸಮಿತಿ(ಸಂಯೋಜಕ) ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
    ತಾಲೂಕಿನಲ್ಲಿ ೨೦೨೧-೨೨ನೇ ಸಾಲಿನಲ್ಲಿ ಬಗರ್ ಹುಕುಂ ಜಮೀನು ಅಳತೆ ಮಾಡಿ ಸ್ಕೆಚ್ ಮಾಡಿ ಸಾಗುವಳಿ ಚೀಟಿ ನೀಡಿದ್ದು, ಆದರೆ ಇದುವರೆಗೂ ಖಾತೆ ಪಹಣಿ ಮ್ಯುಟೇಷನ್ ದಾಖಲೆ ಮಾಡದೆ ವಿಳಂಬ ನೀತಿ ಅನುಸರಿಸಲಾಗುತ್ತಿದ್ದು, ತಕ್ಷಣ  ಪರಿಶೀಲಿಸಿ ಖಾತೆ ಪಹಣಿ ಮ್ಯುಟೇಷನ್ ಮಾಡಿಕೊಡುವುದು.
    ತಾಲೂಕಿನಾದ್ಯಂತ ೯೪ಸಿ ಅಡಿಯಲ್ಲಿ ಮನೆಗಳಿಗೆ ಹಕ್ಕು ಪತ್ರ ಕೊಡುವುದಾಗಿ ಸರ್ಕಾರಕ್ಕೆ ಹಣ ಸಂದಾಯ ಮಾಡಿಕೊಂಡು ಇದುವರೆಗೂ ಹಕ್ಕು ಪತ್ರ ನೀಡದೆ ಬಡ ಕುಟುಂಬಗಳಿಗೆ ಅನ್ಯಾಯ ಮಾಡಲಾಗಿದ್ದು, ತಕ್ಷಣ ಅನ್ಯಾಯ ಸರಿಪಡಿಸುವುದು.
    ತಾಲೂಕಿನ ಕೂಡ್ಲಿಗೆರೆ ಹೋಬಳಿ ದೇವರಹಳ್ಳಿ ಅಂಚೆ ಗುಡ್ಡದ ನೇರಳೆಕೆರೆ ಗ್ರಾಮದ ಸರ್ವೆ ನಂ. ೩೪ ಮತ್ತು ೩೫ರಲ್ಲಿ ೨ ಎಕರೆ ಜಮೀನು ಹಿಂದೂ ರುದ್ರಭೂಮಿಗೆ ಮಂಜೂರು ಮಾಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿ ಕೋರಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಹಿಂದೂ ರುದ್ರಭೂಮಿ ಮಂಜೂರು ಮಾಡಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
    ಸಮಿತಿ ತಾಲೂಕು ಸಂಯೋಜಕ ಅಣ್ಣಾದೊರೈ, ಸಂಘಟನಾ ಸಂಯೋಜಕ ಬಸವರಾಜು ಮತ್ತು ರಾಜು ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅಪ್ಪಾಜಿ ಪುಣ್ಯಸ್ಮರಣೆ, ಬಾಗಿನ ಸಮರ್ಪಣೆ, ಜೆಡಿಎಸ್ ಶಕ್ತಿ ಪ್ರದರ್ಶನ

ಶಾರದ ಅಪ್ಪಾಜಿ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ


ಭದ್ರಾವತಿ ಗೋಣಿಬೀಡಿನಲ್ಲಿರುವ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಶಕ್ತಿಧಾಮದಲ್ಲಿ ಅಪ್ಪಾಜಿ ಪ್ರತಿಮೆಗೆ ಶಾರದ ಅಪ್ಪಾಜಿ ಹಾಗು ಕುಟುಂಬ ವರ್ಗದವರು ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.

ಶಾರದ ಅಪ್ಪಾಜಿ ಕುಟುಂಬ ವರ್ಗದವರು ಭದ್ರಾವತಿ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಬಾಗಿನ ಸಮರ್ಪಿಸಿದರು. 

ಭದ್ರಾವತಿಯಲ್ಲಿ ಸೋಮವಾರ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.

ಭದ್ರಾವತಿ ನ್ಯೂಟೌನ್ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಮೀಪದಲ್ಲಿರುವ ಅಪ್ಪಾಜಿ ನಿವಾಸದಿಂದ ಗೋಣಿಬೀಡಿನ ಶಕ್ತಿಧಾಮದವರೆಗೂ ನಂತರ ಶಂಕರಘಟ್ಟ, ಬಿಆರ್‌ಪಿ ವ್ಯಾಪ್ತಿಯಲ್ಲಿ  ಬೈಕ್ ರ‍್ಯಾಲಿ ನಡೆಸಲಾಯಿತು.
    ಭದ್ರಾವತಿ, ಸೆ. ೫ : ಒಂದೆಡೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ೨ನೇ ವರ್ಷದ ಪುಣ್ಯಸ್ಮರಣೆ, ಮತ್ತೊಂದೆಡೆ ತುಂಬಿದ ಭದ್ರೆಗೆ ಬಾಗಿನ ಸಮರ್ಪಣೆ, ಇನ್ನೊಂದೆಡೆ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ಸೋಮವಾರ ತಾಲೂಕಿನ ಗೋಣಿಬೀಡು, ಶಂಕರಘಟ್ಟ, ಬಿಆರ್‌ಪಿ ವ್ಯಾಪ್ತಿಯಲ್ಲಿ  ನಡೆಯಿತು.
    ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ೨ನೇ ವರ್ಷದ ಪುಣ್ಯಸ್ಮರಣೆ ಗೋಣಿಬೀಡಿನ ಅವರ ತೋಟದಲ್ಲಿರುವ ಶಕ್ತಿಧಾಮದಲ್ಲಿ ಬೆಳಿಗ್ಗೆ ನಡೆಯಿತು. ಅಪ್ಪಾಜಿ ಪ್ರತಿಮೆಗೆ ಶಾರದ ಅಪ್ಪಾಜಿ ಹಾಗು ಕುಟುಂಬ ವರ್ಗದವರು ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಆರ್‌ಪಿ ಭದ್ರಾ ಜಲಾಶಯದಲ್ಲಿ ಬಾಗಿನ ಸಮರ್ಪಿಸಲಾಯಿತು. ಮಧ್ಯಾಹ್ನ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ನಡೆಯಿತು. ನೂತನ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಿದರು.
    ನ್ಯೂಟೌನ್ ಉಂಬ್ಳೆಬೈಲು ರಸ್ತೆ, ರೋಟರಿ ಕ್ಲಬ್ ಸಮೀಪದಲ್ಲಿರುವ ಅಪ್ಪಾಜಿ ನಿವಾಸದಿಂದ ಗೋಣಿಬೀಡಿನ ಶಕ್ತಿಧಾಮದವರೆಗೂ ನಂತರ ಶಂಕರಘಟ್ಟ, ಬಿಆರ್‌ಪಿ ವ್ಯಾಪ್ತಿಯಲ್ಲಿ  ಬೈಕ್ ರ‍್ಯಾಲಿ ನಡೆಸಲಾಯಿತು. ಈ ನಡುವೆ ಶಾರದ ಅಪ್ಪಾಜಿ ನೇತೃತ್ವದಲ್ಲಿ ಪಾದಯಾತ್ರೆ ಸಹ ನಡೆಯಿತು. 
     ನೂತನ    ಪದಾಧಿಕಾರಿಗಳ ಪದಗ್ರಹಣ :
    ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮಧುಕುಮಾರ್, ತಾಲೂಕು ನಗರ ಘಟಕದ ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ, ಗ್ರಾಮಂತರ ಘಟಕದ ಅಧ್ಯಕ್ಷರಾಗಿ ಕೆ. ಧರ್ಮಕುಮಾರ, ನಗರ ಘಟಕದ ಮಹಿಳಾ ಅಧ್ಯಕ್ಷರಾಗಿ ವಿಶಾಲಾಕ್ಷಿ, ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಪಾರ್ವತಿಬಾಯಿ, ಅಲ್ಪ ಸಂಖ್ಯಾಂತರ ನಗರ ಘಟಕದ ಅಧ್ಯಕ್ಷರಾಗಿ ಮುತುರ್ಜಾಖಾನ್, ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಎಂ.ಎ ಅಜಿತ್, ನಗರ ಘಟಕದ ಕಾರ್ಯಾಧ್ಯಕ್ಷರಾಗಿ ಬಿ.ಸಿ ಉಮೇಶ್, ಪರಿಶಿಷ್ಟ ಜಾತಿ ನಗರ ಘಟಕದ ಅಧ್ಯಕ್ಷರಾಗಿ ಮೈಲಾರಪ್ಪ, ಪರಿಶಿಷ್ಟ ಜಾತಿ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಶ್ರೀಧರನಾಯ್ಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗು ವಕ್ತಾರರಾಗಿ ಎಂ. ರಾಜು ಮತ್ತು ನಗರ ಘಟಕದ ಮಹಿಳಾ ಕಾರ್ಯದರ್ಶಿಯಾಗಿ ಭಾಗ್ಯಮ್ಮ ಅವರು ಪದಗ್ರಹಣ ಸ್ವೀಕರಿಸಿದರು.  
    ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ಮುಖಂಡರಾದ ಕರಿಯಪ್ಪ, ಡಿ.ಟಿ ಶ್ರೀಧರ್, ಲೋಕೇಶ್ವರ್ ರಾವ್, ಧರ್ಮೇಗೌಡ ಹಾಗು ನಗರಸಭೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳು ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.