Thursday, September 29, 2022

ಸೆ.30ರಂದು ಪ್ರತಿಭಾ ಕಾರಂಜಿ-ಕಲೋತ್ಸವ




ಭದ್ರಾವತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸೆ.30ರಂದು ಹಮ್ಮಿಕೊಳ್ಳಲಾಗಿದೆ. ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ. ಬಿ.ಕೆ ಸಂಗಮೇಶ್ವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

ಸೆ.೩೦ರಂದು ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಸಪ್ತಪತಿ ಪಾರಾಯಣ


    ಭದ್ರಾವತಿ, ಸೆ. ೨೯: ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಸೆ.೩೦ರಂದು ದುರ್ಗಾ ಸಪ್ತಪತಿ ಪಾರಾಯಣ ಹಮ್ಮಿಕೊಳ್ಳಲಾಗಿದೆ.
    ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ದುರ್ಗಾ ಸಪ್ತಪತಿ ಪಾರಾಯಣ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.

ಪರಿಸರ ದಸರಾ : ಗಮನ ಸೆಳೆದ ಬೀದಿ ನಾಟಕ

ಭದ್ರಾವತಿ ನಗರಸಭೆ ವತಿಯಿಂದ ಪರಿಸರ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನ ಗಮನ ಸೆಳೆಯಿತು.
    ಭದ್ರಾವತಿ, ಸೆ. ೨೯; ನಗರಸಭೆ ವತಿಯಿಂದ ಪರಿಸರ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನ ಗಮನ ಸೆಳೆಯಿತು.
    ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಹಾಗು ನಾಗರೀಕರ ಜವಾಬ್ದಾರಿ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು.
    ಅಂಬೇಡ್ಕರ್ ಜಾನಪದ ಕಲಾ ತಂಡದ ಕಲಾವಿದರಾದ ತಮಟೆ ಜಗದೀಶ್, ದಿವಾಕರ್, ಜಿ. ರವಿಕುಮಾರ್, ಷಣ್ಮುಖಪ್ಪ, ಆಂಜನಪ್ಪ ಮತ್ತು ರವಿನಾಯ್ಕ ಅವರ ಅಭಿನಯ ಎಲ್ಲರ ಗಮನ ಸೆಳೆಯಿತು.


    ಇದಕ್ಕೂ ಮೊದಲು ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ವಿದ್ಯಾರ್ಥಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.

ಪರಿಸರ ದಸರಾ : ಭದ್ರಾ ನದಿ ತಟದಲ್ಲಿ ಸ್ವಚ್ಛತಾ ಕಾರ್ಯ

ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಪರಿಸರ ದಸರಾ ವಿಶೇಷ ಕಾರ್ಯಕ್ರಮ ನಡೆಯಿತು. ನದಿ ತಟದಲ್ಲಿ ನಡೆದ ಸ್ವಚ್ಛತಾ ಕಾರ್ಯ ಗಮನ ಸೆಳೆಯಿತು.


    ಭದ್ರಾವತಿ, ಸೆ. ೨೯ : ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ಪರಿಸರ ದಸರಾ ವಿಶೇಷ ಕಾರ್ಯಕ್ರಮ ನಡೆಯಿತು. ನದಿ ತಟದಲ್ಲಿ ನಡೆದ ಸ್ವಚ್ಛತಾ ಕಾರ್ಯ ಗಮನ ಸೆಳೆಯಿತು.
    ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದಲ್ಲಿರುವ ಹೊಸಸೇತುವೆಯ ಎಡ ಮತ್ತು ಬಲ ಬದಿಯ ಭದ್ರಾ ನದಿ ತಟದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.


    ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಸಹಿ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಆರಂಭಗೊಂಡ ಸ್ವಚ್ಛತಾ ಕಾರ್ಯ ಸುಮಾರು ೨ ಗಂಟೆ ಸಮಯ ನಡೆಯಿತು.
    ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ತಾಲೂಕು ಮಾಜಿ ಸೈನಿಕರ ಸಂಘ, ತಾಲೂಕು ರೈಫಲ್ ಅಸೋಸಿಯೇಷನ್, ಪತಂಜಲಿ ಯೋಗ ಸಮಿತಿ, ಹಳೇನಗರ ಮಹಿಳಾ ಸೇವಾ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದವು.