Monday, October 3, 2022

ಭಕ್ತರ ಗಮನ ಸೆಳೆದ ಶ್ರೀ ಬನಶಂಕರಿ ಅಮ್ಮನವರ ಮಹಿಷಾಸುರ ಮರ್ದಿನಿ ಅಲಂಕಾರ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ೧೧ನೇ ವರ್ಷದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ಪ್ರತಿದಿನ ವಿವಿಧ ಅಲಂಕಾರ ಕೈಗೊಳ್ಳಲಾಗಿದ್ದು, ಸೋಮವಾರ ಮಹಿಷಾಸುರ ಮರ್ದಿನಿ ಅಲಂಕಾರ ಭಕ್ತರ ಗಮನ ಸೆಳೆಯಿತು.
    ಭದ್ರಾವತಿ, ಅ. ೩: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ೧೧ನೇ ವರ್ಷದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ಪ್ರತಿದಿನ ವಿವಿಧ ಅಲಂಕಾರ ಕೈಗೊಳ್ಳಲಾಗಿದ್ದು, ಸೋಮವಾರ ಮಹಿಷಾಸುರ ಮರ್ದಿನಿ ಅಲಂಕಾರ ಭಕ್ತರ ಗಮನ ಸೆಳೆಯಿತು.
    ಅಮ್ಮನವರಿಗೆ ಗಜಲಕ್ಷ್ಮಿ, ಸ್ಕಂದ ಮಾತೇ, ರಾಜರಾಜೇಶ್ವರಿ, ಧನಲಕ್ಷ್ಮೀ, ಶಾಖಾಂಬರಿ, ಸಪ್ತಮಿ ಸರಸ್ವತಿ ಮತ್ತು ಮಹಿಷಾಸುರ ಮರ್ದಿನಿ ಅಲಂಕಾರಗಳನ್ನು ಕೈಗೊಳ್ಳಲಾಗಿದ್ದು, ಪ್ರತಿಯೊಂದು ಅಲಂಕಾರ ಸಹ ಭಕ್ತರ ಮನಸೂರೆಗೊಂಡಿತು. ಅಲ್ಲದೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.
    ನಗರದ ವಿವಿಧೆಡೆಗಳಿಂದ ಭಕ್ತರು ಪಾಲ್ಗೊಂಡು ಅಮ್ಮನವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮಕರಣ ಹಾಗು ಹೆಚ್ಚುವರಿ ನಾಮಕರಣ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಸೇವಾಕರ್ತರು ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು.

ವೀಕ್ಷಕರ ಮೆಚ್ಚುಗೆಗೆ ಪಾತ್ರವಾದ ಮಕ್ಕಳ ದಸರಾ


ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ನಡೆದ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಪುಟಾಣಿ ಮಗುವೊಂದು ಛತ್ರಪತಿ ಶಿವಾಜಿ ಮಹಾರಾಜರ ವೇಷದಲ್ಲಿ ಕಾಣಿಸಿಕೊಂಡು ಗಮನ ಸೆಳೆಯಿತು.
    ಭದ್ರಾವತಿ, ಅ. ೩: ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ನಡೆದ ಮಕ್ಕಳ ದಸರಾ ಕಾರ್ಯಕ್ರಮ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
    ಚಿಣ್ಣರ ಸಾಂಸ್ಕೃತಿಕ ಸಿರಿ ಹೆಸರಿನಲ್ಲಿ ಕನಕಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಂದ ನೃತ್ಯ, ಏಕ ಪಾತ್ರಾಭಿನಯ ಸೇರಿದಂತೆ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಲ್ಲದೆ ಜಾನಪದ ಕಲಾವಿದರಿಂದ ಗೀಗೀ ಪದ ಸಹ ನಡೆಯಿತು.
    ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪೌರಾಯುಕ್ತ ಮನುಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಸಮನ್ವಯಾಧಿಕಾರಿ ಪಂಚಾಕ್ಷರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಅಂಗವಾಗಿ ಸೋಮವಾರ ನಡೆದ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದರಿಂದ ಗೀಗೀ ಪದ ನಡೆಯಿತು.

ಕಾಣೆಯಾಗಿದ್ದ ಯುವಕನ ಶವ ಭದ್ರಾ ನದಿಯಲ್ಲಿ ಪತ್ತೆ: ಹತ್ಯೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ಭದ್ರಾವತಿಯಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಜಮೀರ್ ಎಂಬ ಯುವಕನ ಶವ ಸೋಮವಾರ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಇದು ಹತ್ಯೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ನಡುವೆ ಆರೋಪಿಗಳನ್ನು ತತಕ್ಷಣವೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿ ರಂಗಪ್ಪ ವೃತ್ತ ಹಾಗೂ ಹೊಸಮನೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆನಡೆಸಾಯಿತು.
    ಭದ್ರಾವತಿ, ಅ. ೩: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಜಮೀರ್ ಎಂಬ ಯುವಕನ ಶವ ಸೋಮವಾರ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಇದು ಹತ್ಯೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಟಿವಿ ಅಂಗಡಿಯೊಂದರಲ್ಲಿ ಇತ್ತೀಚೆಗೆ ಕೆಲಸಕ್ಕೆ ಸೇರಿಕೊಂಡಿದ್ದ ಜಮೀರ್ ಟಿವಿ ರಿಪೇರಿ ಮಾಡಲು ತೆರಳಿದ್ದು, ಎರಡು ದಿನಗಳ ಹಿಂದೆ ಕಾಣೆಯಾಗಿದ್ದ.  ತರೀಕರೆ ರಸ್ತೆಯ ಅಯ್ಯಪ್ಪ ದೇವಾಲಯದ ಹಿಂಭಾಗದ ಭದ್ರಾ ನದಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಹತ್ಯೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹೊಸಮನೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀರ್ ಮೃತದೇಹವನ್ನು ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.
    ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ:
    ಘಟನೆ ಹಿನ್ನೆಲೆಯಲ್ಲಿ ನೂರಾರು ಮಂದಿ ರಂಗಪ್ಪ ವೃತ್ತ ಹಾಗೂ ಹೊಸಮನೆ ಪೊಲೀಸ್ ಠಾಣೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದ್ದು, ಜಮೀರ್ ಸಾವಿಗೆ ನ್ಯಾಯ ಒದಗಿಸಬೇಕು. ಆರೋಪಿಗಳನ್ನು ತತಕ್ಷಣವೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

ಗಣಕ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಮೊದಲ ಮಹಿಳಾ ಸಂಶೋಧಕಿ

ಡಾ. ಶೃತಿಹರ್ಷಾರಿಗೆ ಎಮರಿಟಸ್ ಪ್ರೊಫೆಸರ್ ಡಾ. ವಿಜಯದೇವಿ ಅಭಿನಂದನೆ



ಗಣಕ ವಿಜ್ಞಾನ(ಕಂಪ್ಯೂಟರ್ ಸೈನ್ಸ್)ದಲ್ಲಿ ಸ್ನಾತಕೋತ್ತರ ಪದವಿ ಪಡೆದ ಭದ್ರಾವತಿ ನಗರದ ಮೊದಲ ಮಹಿಳಾ ಸಂಶೋಧಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ. ಶೃತಿಹರ್ಷಾ ಅವರನ್ನು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಮರಿಟಸ್ ಪ್ರೊಫೆಸರ್ ಡಾ. ವಿಜಯದೇವಿ ಅವರು ಸೋಮವಾರ ಸನ್ಮಾನಿಸಿ ಅಭಿನಂದಿಸಲಾಯಿತು.  
    ಭದ್ರಾವತಿ, ಅ. ೩ : ಗಣಕ ವಿಜ್ಞಾನ(ಕಂಪ್ಯೂಟರ್ ಸೈನ್ಸ್)ದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಗರದ ಮೊದಲ ಮಹಿಳಾ ಸಂಶೋಧಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ. ಶೃತಿಹರ್ಷಾ ಅವರನ್ನು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಎಮರಿಟಸ್ ಪ್ರೊಫೆಸರ್ ಡಾ. ವಿಜಯದೇವಿ ಅವರು ಸೋಮವಾರ ಸನ್ಮಾನಿಸಿ ಅಭಿನಂದಿಸಲಾಯಿತು.  
    ನಗರದಲ್ಲಿ ಬೇರೆ ಬೇರೆ ವಿಷಯಗಳಲ್ಲಿ ಸಂಶೋಧನೆ ಮಾಡಿರುವವರು ಬಹಳಷ್ಟು ಮಂದಿ ಇದ್ದಾರೆ. ಆದರೆ ಗಣಕ ವಿಜ್ಞಾನದಲ್ಲಿ ಸಂಶೋಧನೆ ಮಾಡಿರುವುದು ಇದೆ ಮೊದಲು. ಈ ಹಿನ್ನಲೆಯಲ್ಲಿ ನಗರಕ್ಕೆ ಕೀರ್ತಿ ತಂದಿರುವ ಡಾ. ಶೃತಿಹರ್ಷಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಗುತ್ತಿದೆ ಎಂದರು.
    ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಸುವಾಸಿನಿ, ನ್ಯಾಯವಾದಿ ಆರ್.ಎಸ್ ಶೋಭಾ, ಪತ್ರಕರ್ತ ಅನಂತಕುಮಾರ್, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಮಲ್ಲಿಕಾಂಬ ವಿರುಪಾಕ್ಷಪ್ಪ, ರೇಖಾ ಕೆಂಪರಾಜ್ ಹಾಗು ಡಾ. ಶೃತಿಹರ್ಷಾ ದಂಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.