Monday, October 31, 2022

ನ.೧ರಂದು ಕನ್ನಡ ರಾಜ್ಯೋತ್ಸವ, ಸರ್ವಸದಸ್ಯರ ಸಭೆ

ಭದ್ರಾವತಿ, ಅ. ೩೧ : ಚುಂಚಾದ್ರಿ ಮಹಿಳಾ ವೇದಿಕೆ ವತಿಯಿಂದ ನ.೧ರಂದು ಬೆಳಿಗ್ಗೆ ೧೧ ಗಂಟೆಗೆ ಸರ್ವಸದಸ್ಯರ ಸಭೆ ಹಾಗು ೬೭ನೇ ಕನ್ನಡ ರಾಜ್ಯೋತ್ಸವ ಅಪ್ಪರ್‌ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
      ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಲುವೇಗೌಡರು, ವೇದಿಕೆ ಗೌರವಾಧ್ಯಕ್ಷೆ ಡಾ. ಆರ್. ಅನುರಾಧ ಪಟೇಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ವೇದಿಕೆ ಅಧ್ಯಕ್ಷೆ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆವಹಿಸಲಿದ್ದಾರೆ.

ವಿಇಎಸ್ ವಿದ್ಯಾಸಂಸ್ಥೆ ಅವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ಭದ್ರಾವತಿ ಹೊಸಸೇತುವೆ ರಸ್ತೆ ಸಿದ್ದಾರೂಢನಗರದಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ಸೋಮವಾರ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.
    ಭದ್ರಾವತಿ, ಅ. ೩೧ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆ ಸಿದ್ದಾರೂಢನಗರದಲ್ಲಿರುವ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆವರಣದಲ್ಲಿ ಸೋಮವಾರ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.
      ವಿದ್ಯಾಸಂಸ್ಥೆ ಅಧ್ಯಕ್ಷರು ಹಾಗು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಬಿ. ಸಿದ್ದಬಸಪ್ಪ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದಲ್ಲಿ ಸುಮಾರು ೪ ದಶಕಗಳಿಂದ ವಿದ್ಯಾಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು, ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿಯವರು ವಿದ್ಯಾಸಂಸ್ಥೆ ಅಭಿವೃದ್ಧಿಗೆ ಸರ್ಕಾರದಿಂದ ಸುಮಾರು ೧ ಕೋ.ರು. ಅನುದಾನ ಬಿಡುಗಡೆಗೊಳಿಸಿದ್ದರು. ಈ ಅನುದಾನದಲ್ಲಿ ಇದೀಗ ವಿದ್ಯಾಸಂಸ್ಥೆಯ ಆಡಳಿತ ಭವನ ನಿರ್ಮಿಸಲಾಗುತ್ತಿದೆ. ಅಲ್ಲದೆ ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಸಹ ಆರಂಭಿಸಲು ಮುಂದಾಗಿದೆ.
      ವಿದ್ಯಾಸಂಸ್ಥೆ ಕಾರ್ಯಾಧ್ಯಕ್ಷ ಬಿ.ಎಲ್ ರಂಗಸ್ವಾಮಿ, ಕಾರ್ಯದರ್ಶಿ ಡಿ.ಎಸ್ ರಾಜಪ್ಪ, ಖಜಾಂಚಿ ಎಸ್.ಕೆ ಮೋಹನ್, ನಿರ್ದೇಶಕರುಗಳಾದ ರಾಜಕುಮಾರ್, ಬಿ.ಆರ್ ದಿನೇಶ್ ಕುಮಾರ್, ಪ್ರಕಾಶ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪೃಥ್ವಿರಾಜ್, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ.ಎಸ್.ಪಿ ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ, ಪಿಯು ಕಾಲೇಜಿನ ಪ್ರಾಂಶುಪಾಲ ವರದರಾಜ್, ತಾಂತ್ರಿಕ ಸಲಹೆಗಾರ ಡಾ.ಎಲ್.ಎಸ್ ಮಂಜುನಾಥ್, ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾಸಂಸ್ಥೆಯ ವಿವಿಧ ವಿಭಾಗದ ಮುಖ್ಯೋಪಾಧ್ಯಾಯರುಗಳು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.



ಶ್ರೀ ತಿರುಮಲ ವೆಂಕಟೇಶ್ವರ ದೇವಸ್ಥಾನ ಸಮಿತಿಯಿಂದ ಶಾಸಕರಿಗೆ ಸನ್ಮಾನ

೬೦ನೇ ವರ್ಷದ ಹುಟ್ಟುಹಬ್ಬ ವಿಜೃಂಭಣೆಯಿಂದ ಆಚರಿಸಿಕೊಂಡ ಶಾಸಕ ಬಿ.ಕೆ ಸಂಗಮೇಶ್ವರ್‌ರನ್ನು ಭದ್ರಾವತಿ ಬಿ.ಎಚ್ ರಸ್ತೆ, ೨ನೇ ವಾರ್ಡ್ ವ್ಯಾಪ್ತಿಯ ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಸ್ಥಾನ ಸಮಿತಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ಅ. ೩೧: ೬೦ನೇ ವರ್ಷದ ಹುಟ್ಟುಹಬ್ಬ ವಿಜೃಂಭಣೆಯಿಂದ ಆಚರಿಸಿಕೊಂಡ ಶಾಸಕ ಬಿ.ಕೆ ಸಂಗಮೇಶ್ವರ್‌ರನ್ನು ನಗರದ ಬಿ.ಎಚ್ ರಸ್ತೆ, ೨ನೇ ವಾರ್ಡ್ ವ್ಯಾಪ್ತಿಯ ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಸ್ಥಾನ ಸಮಿತಿ ಸನ್ಮಾನಿಸಿ ಗೌರವಿಸಲಾಯಿತು.
      ನಗರದ ಪ್ರಮುಖ ದೇವಾಲಯಗಳಲ್ಲಿ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸಹ ಒಂದಾಗಿದ್ದು, ಪ್ರತಿವರ್ಷ ನಾಡಹಬ್ಬ ದಸರಾ  ಉತ್ಸವಕ್ಕೆ  ಈ ದೇವಸ್ಥಾನದ ಮುಂಭಾಗದಲ್ಲಿಯೇ ಚಾಲನೆ ನೀಡುವುದು ವಿಶೇಷವಾಗಿದೆ. ಶಾಸಕ ಬಿ.ಕೆ ಸಂಗಮೇಶ್ವರ್‌ರವರು ೬೦ ವಸಂತಗಳನ್ನು ಪೂರೈಸಿದ ಹಿನ್ನಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಾಸಕ ಬಿ.ಕೆ ಸಂಗಮೇಶ್ವರ್‌ರನ್ನು ಸನ್ಮಾನಿಸಿ ಗೌರವಿಸಲಾಯಿತು.
      ಯುವ ಮುಖಂಡ ಬಿ.ಎಸ್ ಗಣೇಶ್, ದೇವಸ್ಥಾನ ಸಮಿತಿ ಅಧ್ಯಕ್ಷ ರಂಗನಾಥರಾವ್ ಕರಾಡೆ, ಪ್ರಧಾನ ಕಾರ್ಯದರ್ಶಿ ಪರಶುರಾಮರಾವ್(ರಘು) ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.