Tuesday, November 29, 2022

ಡಿ.೩ರಂದು ನಗರಕ್ಕೆ ಪ.ಪೂ ದತ್ತಾವಧೂತ ಮಹಾರಾಜರ ಆಗಮನ

ಪ.ಪೂ ದತ್ತಾವಧೂತ ಮಹಾರಾಜರು
    ಭದ್ರಾವತಿ, ನ. ೨೯: ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾದಲ್ಲಿರುವ ಶ್ರೀ ಚಂಡಿಕಾದುರ್ಗಾ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿರುವ ಉಪಾಸನಾ ಹಾಗು ನಾಮಸಾಧನಾ ಅಭ್ಯಾಸ ಶಿಬಿರದ ಸಮಾರಂಭಕ್ಕೆ ಡಿ.೩ರಂದು ಶ್ರೀ ಕ್ಷೇತ್ರ ಹೆಬ್ಬಳ್ಳಿಯಿಂದ ಪ.ಪೂ ದತ್ತಾವಧೂತ ಮಹಾರಾಜರು ಆಗಮಿಸಲಿದ್ದಾರೆ.
    ಅಂದು ಸಂಜೆ ೬ ಗಂಟೆಗೆ ಶ್ರೀ ಮಹಾರಾಜರ ದಿವ್ಯ ಪಾದುಕೆಗಳೊಂದಿಗೆ ಪ.ಪೂ ದತ್ತಾವಧೂತ ಮಹಾರಾಜರು ಹಾಗು ಆಶ್ರಮ ವಾಸಿಗಳು ಆಗಮಿಸಲಿದ್ದಾರೆ. ಆರತಿ ಮಂತ್ರಪುಷ್ಪ, ಪ್ರಸಾದ ವಿನಿಯೋಗ ಜರುಗಲಿದೆ.
    ಡಿ.೪ರಂದು ಸಂಜೆ ೬ ಗಂಟೆಯಿಂದ ಕಾಕಡಾರತಿ ಹಾಗು ಪಂಚಪದಿ ಭಜನೆ, ೭ ರಿಂದ ಪ್ರಾತಃಕಾಲ ಪೂಜೆ, ೮ರಿಂದ ಸಾಮೂಹಿಕ ಜಪ, ೯ ರಿಂರ ಉಪಹಾರ, ೧೦ರಿಂದ ಸಾಮೂಹಿಕ ಜಪ, ೧೧ ರಿಂದ ಶ್ರೀ ಹನುಮಾನ್ ಚಾಲೀಸ ಪಾಠ, ೧೧.೩೦ರಿಂದ ಆಶೀರ್ವಚನ ಹಾಗು ೧೨.೩೦ರಿಂದ ಮಾಹಾನೈವೇದ್ಯ, ಮಹಾಮಂಗಳಾರತಿ ಹಾಗು ಮಹಾಪ್ರಸಾದ ವಿನಿಯೋಗ ನಡೆಯಲಿದೆ.
    ಭಕ್ತಾಧಿಗಳು ಹೆಚ್ಚಿನಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೮೬೬೦೬೦೦೮೨೭ ಅಥವಾ ೯೬೩೨೬೨೩೩೦೩ ಸಂಖ್ಯೆಗೆ ಕರೆ ಮಾಡಬಹುದಾಗಿದೆ.


ಶ್ರೀ ರಾಮೇಶ್ವರ ಯುವಕ ಸಂಘದಿಂದ ಕನ್ನಡ ರಾಜ್ಯೋತ್ಸವ

ಭದ್ರಾವತಿ ತಾಲೂಕಿನ ಶ್ರೀ ರಾಮನಗರದ ಶ್ರೀ ರಾಮೇಶ್ವರ ಯುವಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ, ಎಸ್. ಮಣಿಶೇಖರ್, ಧರ್ಮೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಭದ್ರಾವತಿ, ನ. ೨೯: ತಾಲೂಕಿನ ಶ್ರೀ ರಾಮನಗರದ ಶ್ರೀ ರಾಮೇಶ್ವರ ಯುವಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕನ್ನಡ ರಾಜ್ಯೋತ್ಸವ ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ ಉದ್ಘಾಟಿಸಿದರು.
    ಶ್ರೀ ರಾಮೇಶ್ವರ ರಂಗಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಭದ್ರಾವತಿ ಬೀಟ್ಸ್ ಆರ್ಕೇಸ್ಟ್ರಾ ವತಿಯಿಂದ ರಸಮಂಜರಿ ಕಾರ್ಯಕ್ರಮ ನಡೆಯಿತು.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮಣಿಶೇಖರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಧರ್ಮೇಗೌಡ(ಕುಂಬ್ರಿ ಚಂದ್ರಣ್ಣ), ವೀರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಲ್ ಯಶೋಧರಯ್ಯ, ಜೆಡಿಎಸ್ ಪಕ್ಷದ ಮುಖಂಡರಾದ ಭಾಗ್ಯಮ್ಮ, ಶ್ರೀ ರಾಮೇಶ್ವರ ಯುವಕರ ಸಂಘದ ಗೌರವಾಧ್ಯಕ್ಷ ಟಿ.ಎಸ್ ಶಶಿಕಾಂತ, ಅಧ್ಯಕ್ಷ ಎಸ್.ಪಿ ಅಭಿರಾಜ್, ನಿರಂಜನ ಕೆ ಗೌಡ ಸೇರಿದಂತೆ ಸಂಘದ ಪದಾಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಎಂ.ಜೆ ಅಪ್ಪಾಜಿ ಅಭಿಮಾನಿಗಳು, ಗ್ರಾಮದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸತ್ಯ ಸಂಸ್ಕೃತಿ ಸ್ಪಿರಿಚ್ಯುಯಲ್ ಟ್ರಸ್ಟ್ ವತಿಯಿಂದ ೧೯ ಸರ್ಕಾರಿ ಶಾಲೆಗಳಿಗೆ ಉಚಿತ ಕಲಿಕಾ ಸಾಮಾಗ್ರಿ ವಿತರಣೆ

ಬೆಂಗಳೂರಿನ ಸತ್ಯ ಸಂಸ್ಕೃತಿ ಸ್ಪಿರಿಚ್ಯುಯಲ್ ಟ್ರಸ್ಟ್ ವತಿಯಿಂದ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಆಟಗಾರಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ  ಸುಮಾರು ೧೬ ಸರ್ಕಾರಿ ಶಾಲೆಗಳಿಗೆ ಉಚಿತ ಕಲಿಕಾ  ಸಾಮಾಗ್ರಿಗಳನ್ನು  ವಿತರಿಸಲಾಯಿತು.
    ಭದ್ರಾವತಿ, ನ. ೨೯: ಬೆಂಗಳೂರಿನ ಸತ್ಯ ಸಂಸ್ಕೃತಿ ಸ್ಪಿರಿಚ್ಯುಯಲ್ ಟ್ರಸ್ಟ್ ವತಿಯಿಂದ ತಾಲೂಕಿನ ಕೂಡ್ಲಿಗೆರೆ ಗ್ರಾಮದ ಆಟಗಾರಿ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ  ಸುಮಾರು ೧೬ ಸರ್ಕಾರಿ ಶಾಲೆಗಳಿಗೆ ಉಚಿತ ಕಲಿಕಾ  ಸಾಮಾಗ್ರಿಗಳನ್ನು  ವಿತರಿಸಲಾಯಿತು.
   ಟ್ರಸ್ಟ್ ಸಂಸ್ಥಾಪಕ ಪಂಡಿತ್ ಶ್ರೀನಿವಾಸ್ ಮಾತನಾಡಿ, ಕಳೆದ ಸುಮಾರು ೮ ವರ್ಷದಿಂದ ಕಲಿಕಾ ಸಾಮಾಗ್ರಿಗಳನ್ನು  ವಿಸ್ತರಿಸಲಾಗುತ್ತಿದೆ. ೧೯ ಶಾಲೆಗಳಿಂದ ಆರಂಭಗೊಂಡ ಕಾರ್ಯ ಪ್ರಸ್ತುತ ೧೦೫ ಸರ್ಕಾರಿ ಶಾಲೆಗಳಿಗೆ ವಿಸ್ತರಣೆಯಾಗಿದೆ. ದೀನದಲಿತರು ಮತ್ತು ಬುಡಕಟ್ಟು ಶಾಲೆಯ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ಹಂಚಲಾಗುತ್ತಿದೆ. ಇದೊಂದು ಅಳಿಲು ಸೇವೆ ಎಂದರು.
       ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿ, ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಟ್ರಸ್ಟ್ ವತಿಯಿಂದ ಕಲಿಕಾ ಸಾಮಾಗ್ರಿಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ.  ಇಂತಹ ಸಮಾಜಮುಖಿ ಕಾರ್ಯಗಳು ಹೆಚ್ಚಾಗಿ ನಡೆಯಬೇಕೆಂದರು.
     , ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿಬಾಯಿ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಪಂಚಾಕ್ಷರಿ, ಪ್ರಾರ್ಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಟಿ. ಪೃಥ್ವಿರಾಜ್, ಮಾಜಿ ಅಧ್ಯಕ್ಷ ಎಂ.ಎಸ್ ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೈ.ಎನ್ ಶ್ರೀಧರಗೌಡ, ಸತ್ಯ ಸಂಸ್ಕೃತಿ ಸ್ಪಿರಿಚ್ಯುಯಲ್ ಟ್ರಸ್ಟ್ ಕಾರ್ಯದರ್ಶಿ ಮೋನಿಷಾ, ಎಸ್‌ಡಿಎಂಸಿ ಅಧ್ಯಕ್ಷ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಆರ್.ಎಸ್ ರೂಪ ಪ್ರಾರ್ಥಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಖಜಾಂಚಿ ಎಸ್.ಕೆ ಮೋಹನ್ ನಿರೂಪಿಸಿ, ಶಾಲೆಯ ಮುಖ್ಯಶಿಕ್ಷಕಿ ಎಚ್. ಭಾರತಿ ವಂದಿಸಿದರು.  

ಭದ್ರಾವತಿಯಲ್ಲಿ ವಿಜೃಂಭಣೆಯಿಂದ ಜರುಗಿದ ಸುಬ್ರಹ್ಮಣ್ಯ ಷಷ್ಠಿ

ಭದ್ರಾವತಿ ಹಳೇನಗರದ ಶ್ರೀ ರಾಮೇಶ್ವರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಸುಬ್ರಹ್ಮಣ್ಯ ಷಷ್ಠಿ ವಿಜೃಂಭಣೆಯಿಂದ ನೆರವೇರಿತು.
    ಭದ್ರಾವತಿ, ನ. ೨೯ : ಹಳೇನಗರದ ಶ್ರೀ ರಾಮೇಶ್ವರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ಸುಬ್ರಹ್ಮಣ್ಯ ಷಷ್ಠಿ ವಿಜೃಂಭಣೆಯಿಂದ ನೆರವೇರಿತು.
ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಶ್ರೀ ರಾಮೇಶ್ವರ ದೇವರಿಗೆ ಹಾಗೂ ಸುಬ್ರಹ್ಮಣ್ಯ ದೇವರಿಗೆ ಬೆಳಗ್ಗೆಯಿಂದಲೇ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಪೂಜೆ ನೆರವೇರಿಸಲಾಯಿತು.
  ಅದ್ವೈತ ವಾಚಸ್ಪತಿ ಶ್ರೀ ಕೃಷ್ಣಮೂರ್ತಿ ಸೋಮಯಾಜಿ ಅವರ ನೇತೃತ್ವದಲ್ಲಿ ಶ್ರೀ ಸ್ವಾಮಿಗೆ ಪಂಚಾಮೃತ ಅಭಿಷೇಕ, ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ ನೆರವೇರಿಸಲಾಯಿತು. ಆ ನಂತರ ಸುಬ್ರಹ್ಮಣ್ಯ ಮೂಲಮಂತ್ರ ಹೋಮ, ಪೂರ್ಣಾಹುತಿ, ಬ್ರಹ್ಮಚಾರಿಗಳ ವಿಶೇಷ ಪೂಜೆ, ಇದಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಶ್ರೀ ಸ್ವಾಮಿಯ ರಾಜಬೀದಿ ಉತ್ಸವ ಅದ್ಧೂರಿಯಾಗಿ ನಡೆಯಿತು.
    ಮಹಾಮಂಗಳಾರತಿ ನಂತರ ಸಾವಿರಾರು ಮಂದಿಗೆ ಮಹಾಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು. ಎಲ್ಲಾ ಕಾರ್ಯಕ್ರಮದಲ್ಲಿ ಶ್ರೀ ರಾಮೇಶ್ವರ, ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿಯವರು, ಭಕ್ತರು ಪಾಲ್ಗೊಂಡಿದ್ದರು.