Saturday, December 3, 2022

ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಸೇವಾಕಾರ್ಯದಲ್ಲಿ ತೊಡಗಿಸಿಕೊಳ್ಳಿ : ಡಾ. ಮಹಾಬಲೇಶ್ವರ

ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಪ್ರಶಾಂತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಈಶ್ವರಮ್ಮ ಪ್ರೌಢಶಾಲೆ-ಕನ್ನಡ ಮತ್ತು ಆಂಗ್ಲ ಮಾಧ್ಯಮ, ಶ್ರೀ ಸತ್ಯ ಸಾಯಿ ಜ್ಞಾನಪೀಠ ಸಿ.ಬಿ.ಎಸ್.ಇ ವತಿಯಿಂದ ಮೊದಲಬಾರಿಗೆ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಸೈನಿಕ ಹಾಗು ರೈತ ಪೋಷಕರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ, ಡಿ. ೩: ಶಿಕ್ಷಣ ಸಂಸ್ಥೆಗಳ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಸೇವಾ ಕಾರ್ಯದ ಮೂಲಕ ಬದುಕನ್ನು ಸಾರ್ಥಕಗೊಳಿಸಿಕೊಳ್ಳಬೇಕೆಂದು ತರುಣ ಭಾರತಿ ವಿಶ್ವಸ್ಥ ಮಂಡಳಿ ಗೌರವಾಧ್ಯಕ್ಷ ಡಾ. ಮಹಾಬಲೇಶ್ವರ ಹೇಳಿದರು.
    ಅವರು ಶನಿವಾರ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಪ್ರಶಾಂತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಈಶ್ವರಮ್ಮ ಪ್ರೌಢಶಾಲೆ-ಕನ್ನಡ ಮತ್ತು ಆಂಗ್ಲ ಮಾಧ್ಯಮ, ಶ್ರೀ ಸತ್ಯ ಸಾಯಿ ಜ್ಞಾನಪೀಠ ಸಿ.ಬಿ.ಎಸ್.ಇ ವತಿಯಿಂದ ಮೊದಲಬಾರಿಗೆ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
    ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುವವರು ತಮ್ಮನ್ನು ತಾವು ಸೇವಾ ಮನೋಭಾವದಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಸಂಸ್ಕಾರಯುತವಾದ, ಮೌಲ್ಯಯುತವಾದ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಜೊತೆಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣಕರ್ತರಾಗಬೇಕೆಂದರು.

ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಪ್ರಶಾಂತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಈಶ್ವರಮ್ಮ ಪ್ರೌಢಶಾಲೆ-ಕನ್ನಡ ಮತ್ತು ಆಂಗ್ಲ ಮಾಧ್ಯಮ, ಶ್ರೀ ಸತ್ಯ ಸಾಯಿ ಜ್ಞಾನಪೀಠ ಸಿ.ಬಿ.ಎಸ್.ಇ ವತಿಯಿಂದ ಮೊದಲಬಾರಿಗೆ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ತರುಣ ಭಾರತಿ ವಿಶ್ವಸ್ಥ ಮಂಡಳಿ ಗೌರವಾಧ್ಯಕ್ಷ ಡಾ. ಮಹಾಬಲೇಶ್ವರ ಮತ್ತು ಕಾರ್ಯದರ್ಶಿ ಮಧುಕರ್ ವಿ. ಕಾನಿಟ್ಕರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಿ. ಪ್ರಭಾಕರ ಬೀರಯ್ಯ, ಈ ಶಿಕ್ಷಣ ಸಂಸ್ಥೆ ಹಣ ಮಾಡುವ ದುರುದ್ದೇಶ ಹೊಂದಿಲ್ಲ. ಮೌಲ್ಯಯುತ ಶಿಕ್ಷಣ ನೀಡುವುದು ಸಂಸ್ಥೆಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆ ಮುನ್ನಡೆಯುತ್ತಿದೆ ಎಂದರು.
    ತರುಣ ಭಾರತಿ ವಿಶ್ವಸ್ಥ ಮಂಡಳಿ ಕಾರ್ಯದರ್ಶಿ ಮಧುಕರ್ ವಿ. ಕಾನಿಟ್ಕರ್, ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಸೈನಿಕ ಹಾಗು ರೈತ ಪೋಷಕರನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.  
    ಪ್ರಶಾಂತಿ ಸೇವಾ ಟ್ರಸ್ಟ್ ಅಧ್ಯಕ್ಷ ಎಂ. ದೇವೇಂದ್ರಪ್ಪ, ಕುವೆಂಪು ವಿಶ್ವವಿದ್ಯಾನಿಲಯ ಎಂ.ಎಸ್ಸಿ ಗೋಲ್ಡ್ ಮೆಡಲಿಸ್ಟ್, ಶಿಕ್ಷಣ ಸಂಸ್ಥೆಯ ಹಳೇಯ ವಿದ್ಯಾರ್ಥಿ ಧನುಷ್ ಚವ್ಹಾಣ್, ಶಿಕ್ಷಣ ಸಂಸ್ಥೆಯ ಜಂಟಿ ಆಡಳಿತಾಧಿಕಾರಿ ಕೆ. ಸೌಮ್ಯರೂಪ, ಪ್ರಾಂಶುಪಾಲ ಮೃತ್ಯುಂಜಯ ಕಾನಿಟ್ಕರ್, ಪ್ರಶಾಂತಿ ಸೇವಾ ಟ್ರಸ್ಟ್ ಸದಸ್ಯರಾದ ಎಚ್.ಪಿ ಶಿವಪ್ಪ, ರಾಮಕೃಷ್ಣಯ್ಯ, ಡಾ. ವೀಣಾ ಎಸ್. ಭಟ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಭದ್ರಾವತಿ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ಪ್ರಶಾಂತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಈಶ್ವರಮ್ಮ ಪ್ರೌಢಶಾಲೆ-ಕನ್ನಡ ಮತ್ತು ಆಂಗ್ಲ ಮಾಧ್ಯಮ, ಶ್ರೀ ಸತ್ಯ ಸಾಯಿ ಜ್ಞಾನಪೀಠ ಸಿ.ಬಿ.ಎಸ್.ಇ ವತಿಯಿಂದ ಮೊದಲಬಾರಿಗೆ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಲಾ ಮಕ್ಕಳಿಂದ ನಡೆದ ಮಹಿಷಾಸುರಾಮರ್ಧಿನಿ ನೃತ್ಯ ಹೆಚ್ಚು ಗಮನ ಸೆಳೆಯಿತು.
    ಶಿಕ್ಷಣ ಸಂಸ್ಥೆಯಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಅವರು ಇಷ್ಟಪಡುವ ವಸ್ತುಗಳನ್ನು ಬಹುಮಾನ ರೂಪದಲ್ಲಿ ವಿತರಿಸಲಾಯಿತು. ವಿಶೇಷ ಎಂದರೆ ಕಾರ್ಯಕ್ರಮವನ್ನು ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಪೋಷಕರು ಉದ್ಘಾಟಿಸಿದರು. ಶಿಕ್ಷಣ ಸಂಸ್ಥೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ನಿವೇಶನ ರಹಿತರಿಗೆ ಭೂಮಿ ಮೀಸಲಿಡಿ : ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ

ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ಮನವಿ


ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿ ಜಂಬರಘಟ್ಟ ಗ್ರಾಮದ ಸರ್ವೆ ನಂ.೯೭ರ ೧೩೮ ಎಕರೆ ವಿಸ್ತೀರ್ಣದ ದನಗಳ ಮುಪ್ಪತ್ತು ಮತ್ತು ಮೂಡಲವಿಠಲಾಪುರ ಗ್ರಾಮದ ಸರ್ವೆ ನಂ.೨೫ರ ೨೬ ಎಕರೆ ೦೯ ಗುಂಟೆ ಹಾಗು ಅರಹತೊಳಲು ಗಡಿ ಗ್ರಾಮದ ಸರ್ವೆ ನಂ. ೫೨ರ ೪ ಎಕರೆ ೨೫ ಗುಂಟೆ ಗುಂಡುತೋಪಿನ ಭೂಮಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಮೀಸಲಿಡುವಂತೆ ಆದೇಶಿಸಬೇಕೆಂದು ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ 
ಸಲ್ಲಿಸಲಾಯಿತು.
    ಭದ್ರಾವತಿ, ಡಿ. ೩ : ತಾಲೂಕಿನ ಹೊಳೆಹೊನ್ನೂರು ಹೋಬಳಿ ಜಂಬರಘಟ್ಟ ಗ್ರಾಮದ ಸರ್ವೆ ನಂ.೯೭ರ ೧೩೮ ಎಕರೆ ವಿಸ್ತೀರ್ಣದ ದನಗಳ ಮುಪ್ಪತ್ತು ಮತ್ತು ಮೂಡಲವಿಠಲಾಪುರ ಗ್ರಾಮದ ಸರ್ವೆ ನಂ.೨೫ರ ೨೬ ಎಕರೆ ೦೯ ಗುಂಟೆ ಹಾಗು ಅರಹತೊಳಲು ಗಡಿ ಗ್ರಾಮದ ಸರ್ವೆ ನಂ. ೫೨ರ ೪ ಎಕರೆ ೨೫ ಗುಂಟೆ ಗುಂಡುತೋಪಿನ ಭೂಮಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಮೀಸಲಿಡುವಂತೆ ಆದೇಶಿಸಬೇಕೆಂದು ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ಚಾಣುಕ್ಯ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
      ಸುಮಾರು ವರ್ಷಗಳ ಹಿಂದೆ ಈ ಭೂಮಿಯಲ್ಲಿ ಕಲ್ಲು ಗಣಿಗಾರಿಕೆ ನಡೆಸುವ ಮೂಲಕ ಕೋಟ್ಯಾಂತರ ರು. ಲೂಟಿ ಮಾಡಿಕೊಂಡಿದ್ದು, ಅಲ್ಲದೆ ಪರಿಸರಕ್ಕೆ ಧಕ್ಕೆಯನ್ನುಂಟು ಮಾಡಲಾಗಿದೆ. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಈ ಭೂಮಿಯನ್ನು ಸರ್ವೆ ಮಾಡಬೇಕೆಂದು ಮನವಿ ಮಾಡಲಾಗಿದೆ.
      ಈ ಭೂಮಿಯ ಸುತ್ತಮುತ್ತಲ ಹಲವು ಗ್ರಾಮಗಳಲ್ಲಿ ನಿವೇಶನ ರಹಿತ ಬಡವರು, ವಿಧವೆಯರು, ಅಂಗವಿಕಲರು, ಮಂಗಳಮುಖಿಯರು ಹಾಗು ಪರಿಶಿಷ್ಟ ಜಾತಿ/ಪಂಗಡದವರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಹಾಗು ಅಲೆಮಾರಿ ಸಮುದಾಯ ಜನಾಂಗದವರು, ನಿರಾಶ್ರಿತರು ಮತ್ತು ನಿರ್ಗತಿಕರು ವಾಸಿಸುತ್ತಿದ್ದಾರೆ. ಇವರಿಗೆ ನಿವೇಶನ ಹಂಚಿಕೆ ಮಾಡಲು ಭೂಮಿ ಮೀಸಲಿಡುವಂತೆ ಕೋರಲಾಗಿದೆ.
       ಚಾಣುಕ್ಯ ಸೇನೆ ರಾಜ್ಯಾಧ್ಯಕ್ಷ ನಾರಾಯಣ ಐಹೊಳೆ ಮತ್ತು ರಾಜ್ಯ ಗೌರವಾಧ್ಯಕ್ಷ ರಾಮಚಂದ್ರರಾವ್ ಪವಾರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.