Wednesday, December 7, 2022

ವಿವಿಧ ಸಂಘಟನೆಗಳಿಂದ ಅಂಬೇಡ್ಕರ್ ಪರಿನಿರ್ವಾಣ ದಿನ

ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಭದ್ರಾವತಿಯಲ್ಲಿ ನಗರಸಭೆ ವತಿಯಿಂದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
    ಭದ್ರಾವತಿ, ಡಿ. ೭: ನಗರದ ವಿವಿಧ ಸಂಘಟನೆಗಳಿಂದ ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಿಸಲಾಯಿತು. ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
    ನಗರಸಭೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಮಾಲಾರ್ಪಣೆ ಮಾಡಿದರು. ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಲತಾ ಚಂದ್ರಶೇಖರ್, ಟಿಪ್ಪು ಸುಲ್ತಾನ್, ಪೌರಾಯುಕ್ತ ಮನುಕುಮಾರ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ಪೌರ ಸೇವಾ ನೌಕರರ ಸೇವಾ ಸಂಘದ ಪದಾಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
    ಛಲವಾದಿ ಸಮಾಜದಿಂದ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್, ಪ್ರಮುಖರಾದ ಜಯರಾಜ್, ಗೋಪಾಲ್, ಮಹೇಶ್, ಜಗದೀಶ್, ಛಲವಾದಿ ಕೃಷ್ಣ, ಇ.ಪಿ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕರ್ನಾಟಕ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ದಲಿತ ಸಂಘಟನೆಗಳು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪರಿನಿರ್ವಾಣ ದಿನ ಆಚರಿಸಿದವು.


ಅಂಬೇಡ್ಕರ್ ಪರಿನಿರ್ವಾಣ ದಿನದ ಅಂಗವಾಗಿ ಭದ್ರಾವತಿಯಲ್ಲಿ ಛಲವಾದಿ ಸಮಾಜ ಸೇರಿದಂತೆ ವಿವಿಧ ಸಂಘಟನೆಗಳಿಂದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 

ಅಂಬೇಡ್ಕರ್ ವಿಶ್ವದ ಮಹಾನ್ ವ್ಯಕ್ತಿ, ಜ್ಞಾನದ ಸಂಕೇತ : ಸತ್ಯ ಭದ್ರಾವತಿ

ಭದ್ರಾವತಿ ರಂಗಪ್ಪವೃತ್ತ, ಜೈಭೀಮ ನಗರದಲ್ಲಿರುವ ಸಮಿತಿ ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್‌ರವರ ಪರಿನಿರ್ವಾಣ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ  ಸತ್ಯ ಭದ್ರಾವತಿ ನೇತೃತ್ವವಹಿಸಿ ಮಾತನಾಡಿದರು.
    ಭದ್ರಾವತಿ, ಡಿ. ೭: ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರು ಪ್ರಪಂಚದ ಎಲ್ಲಾ ದೇಶಗಳು ಗೌರವಿಸುವ ಮಹಾನ್ ವ್ಯಕ್ತಿಯಾಗಿದ್ದಾರೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ  ಸತ್ಯ ಭದ್ರಾವತಿ ಬಣ್ಣಿಸಿದರು.
    ಅವರು ನಗರದ ರಂಗಪ್ಪವೃತ್ತ, ಜೈಭೀಮ ನಗರದಲ್ಲಿರುವ ಸಮಿತಿ ಕಛೇರಿ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಅಂಬೇಡ್ಕರ್‌ರವರ ಪರಿನಿರ್ವಾಣ ದಿನಾಚರಣೆ ನೇತೃತ್ವವಹಿಸಿ ಮಾತನಾಡಿದರು..
ಅಸ್ಪೃಶ್ಯ ಜಾತಿಯಲ್ಲಿ ಹುಟ್ಟಿಬೆಳೆದ ಅಂಬೇಡ್ಕರ್‌ರವರು ಸಮಾಜದ ಎಲ್ಲಾ ಸಂಕಷ್ಟಗಳನ್ನು ಕಂಡಿದ್ದು, ನೋವು, ಅಪಮಾನಗಳನ್ನು ಅನುಭವಿಸಿ ಉನ್ನತ ಸ್ಥಾನಕ್ಕೆ ಏರಿದವರು. ಈ ಹಿನ್ನಲೆಯಲ್ಲಿ ಅವರು ದೇಶದಲ್ಲಿನ ಎಲ್ಲಾ ಧರ್ಮ, ಎಲ್ಲಾ ಜಾತಿ-ಜನಾಂಗದವರಿಗೆ ಅನ್ವಯವಾಗುವ, ಸರ್ವ ಸಮಾನತೆಯಿಂದ ಕೂಡಿರುವ ಶ್ರೇಷ್ಠ ಸಂವಿಧಾನವನ್ನು ರಚಿಸುವ ಮೂಲಕ ಎಲ್ಲರೂ ಸೌಹಾರ್ದತೆಯಿಂದ ಬದುಕಲು ಕಾರಣಕರ್ತರಾಗಿದ್ದಾರೆ ಎಂದರು.
    ದೇಶದ ಪ್ರತಿಯೊಬ್ಬರೂ ಸಹ ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಅಂಬೇಡ್ಕರ್‌ರವರು ಜ್ಞಾನದ ಸಂಕೇತವಾಗಿ ಪ್ರಜ್ವಲಿಸುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಪಂಚದ ಎಲ್ಲಾ ದೇಶಗಳು ಸಹ ಅಂಬೇಡ್ಕರ್‌ರವರನ್ನು ಗೌರವಿಸುತ್ತಿವೆ. ಇಂತಹ ಮಹಾನ್ ವ್ಯಕ್ತಿಯ ದಾರಿಯಲ್ಲಿ ನಾವುಗಳು ಸಹ ಸಾಗುವಂತಾಗಬೇಕೆಂದರು.
    ತಾಲೂಕು ಸಂಚಾಲಕ ಕೆ. ರಂಗನಾಥ್, ಪ್ರಮುಖರಾದ ಶಾಂತಮ್ಮ, ಎನ್. ಗೋವಿಂದ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ದತ್ತ ಜಯಂತಿ : ವಿಜೃಂಭಣೆಯಿಂದ ಜರುಗಿದ ಉತ್ಸವ ಮೆರವಣಿಗೆ

ಭದ್ರಾವತಿ ನ್ಯೂಟೌನ್ ದತ್ತ ಮಂದಿರದಲ್ಲಿ ಬುಧವಾರ ದತ್ತ ಜಯಂತಿ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಉತ್ಸವ ಮೆರವಣಿಗೆ ನಡೆಸಲಾಯಿತು.
ಭದ್ರಾವತಿ, ಡಿ. ೭: ನಗರದ ನ್ಯೂಟೌನ್ ದತ್ತ ಮಂದಿರದಲ್ಲಿ ಬುಧವಾರ ದತ್ತ ಜಯಂತಿ ಅಂಗವಾಗಿ ಪ್ರಮುಖ ಬೀದಿಗಳಲ್ಲಿ ಉತ್ಸವ ಮೆರವಣಿಗೆ ನಡೆಸಲಾಯಿತು.
      ದತ್ತ ಜಯಂತಿ ಅಂಗವಾಗಿ ಪ್ರತಿದಿನ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ದತ್ತಾತ್ರೇಯ ಸ್ವಾಮಿ ಭಾವಚಿತ್ರದೊಂದಿಗೆ ಉತ್ಸವ ಮೆರವಣಿಗೆ ನಡೆಸಲಾಯಿತು.  ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಿತು.
      ವಿವಿಧ ಭಜನಾ ಮಂಡಳಿ ಸದಸ್ಯರು, ತಾಲೂಕು ಬ್ರಾಹ್ಮಣ ಮಹಾಸಭಾ ವಿವಿಧ ಸಂಘಟನೆಗಳ ಪ್ರಮುಖರು ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತರು ಪಾಲ್ಗೊಂಡಿದ್ದರು.



ಕೆರೆಗಳ ಒತ್ತುವರಿ ತೆರವು, ಬೌಂಡರಿ ನಿಗದಿ ಕಾರ್ಯ ವಿಳಂಬ : ಪ್ರತಿಭಟನೆ

ಸೂಕ್ತ ಕ್ರಮ ಕೈಗೊಳ್ಳಲು ತಹಸೀಲ್ದಾರ್‌ಗೆ ಮನವಿ

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ತೆರವು ಹಾಗು ಬೌಂಡರಿ ನಿಗದಿಪಡಿಸುವ ಕಾರ್ಯ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಡಿ. ೬: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ತೆರವು ಹಾಗು ಬೌಂಡರಿ ನಿಗದಿಪಡಿಸುವ ಕಾರ್ಯ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
      ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೭೦ ಕೆರೆಗಳಿದ್ದು, ಈ ಹಿಂದೆ ಪೌರಾಯುಕ್ತರಾಗಿದ್ದ ಮನೋಹರ್‌ರವರ ಪರಿಶ್ರಮದ ಫಲವಾಗಿ ೭೦ ಕೆರೆಗಳ ಬೌಂಡರಿ ನಿಗದಿಪಡಿಸುವ ಸಂಬಂಧ ಆದೇಶವಾಗಿರುತ್ತದೆ. ೭೦ ಕೆರೆಗಳ ಪೈಕಿ ಈಗಾಗಲೇ ೨೫ ಕೆರೆಗಳ ಬೌಂಡರಿ ನಿಗದಿಪಡಿಸಲಾಗಿದ್ದು, ತುರ್ತಾಗಿ ಈ ಕೆರೆಗಳ ಒತ್ತುವರಿ ಕೈಗೊಂಡು ನಕ್ಷೆ ಸಮೇತ ನಗರಸಭೆಗೆ ಹಸ್ತಾಂತರ ಮಾಡುವುದು. ಉಳಿದ ಕೆರೆಗಳ ಬೌಂಡರಿ ನಿಗದಿಪಡಿಸುವ ಸಂಬಂಧ ಕ್ರಮ ಕೈಗೊಳ್ಳುವುದು.
      ಕಲ್ಲಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ೪ ಕೆರೆಗಳ ಬೌಂಡರಿ ಹಾಗು ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೪ ಕೆರೆಗಳ ಬೌಂಡರಿ ಈಗಾಗಲೇ ನಿಗದಿಪಡಿಸಲಾಗಿದೆ. ಈ ಕೆರೆಗಳ ಒತ್ತುವರಿ ಕೈಗೊಂಡು ನಕ್ಷೆ ಸಮೇತ ಸಂಬಂಧ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
      ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಅಭಿವೃದ್ಧಿ ಪಡಿಸುವ ಸಂಬಂಧ ಸರ್ಕಾರದಿಂದ ಇದುವರೆಗೂ ಯಾವುದೇ ಅನುದಾನ ಬಂದಿರುವುದಿಲ್ಲ. ಈ ಹಿನ್ನಲೆಯಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಕ್ಯಾಚ್ ದ ರೈನ್'(ಮಳೆ ನೀರು ಹಿಡಿಯಿರಿ) ಅನುಷ್ಠಾನಗೊಳ್ಳಲು ಕೆರೆಗಳ ಸಮೀಪವಿರುವ ರೈತರುಗಳಿಗೆ ಕೆರೆಗಳಲ್ಲಿರುವ ಊಳನ್ನು ತೆಗೆದು ಕೆರೆಗಳನ್ನು ಅಭಿವೃದ್ಧಿಪಡಿಸಲು ಷರತ್ತು ಬದ್ಧ ಅನುಮತಿ ನೀಡುವಂತೆ ಮನವಿ ಮಾಡಲಾಯಿತು.
      ವೇದಿಕೆ ಪ್ರಮುಖರಾದ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್, ಮೂಡಲಗಿರಿ ಗೌಡ, ರುದ್ರೇಶ್, ಆನಂದ್, ದೇವಿಕಾ ನಾಗರಾಜ್, ಮಹಮದ್ ಸುಹೇಲ್, ಗವಿಸಿದ್ದಪ್ಪ, ಬಿ.ಡಿ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೆರೆಗಳ ಒತ್ತುವರಿ ತೆರವು ಹಾಗು ಬೌಂಡರಿ ನಿಗದಿಪಡಿಸುವ ಕಾರ್ಯ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.