ಭದ್ರಾವತಿ ಎಂಪಿಎಂ ಹಾಗು ವಿಐಎಸ್ಎಲ್ ಕಾರ್ಖಾನೆಗಳ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ತಾಲೂಕಿನಾದ್ಯಂತ ಚಿಟಿಕೆ ಉಪ್ಪು ಸಂಗ್ರಹಿಸಿ ಮನವಿ ಸಲ್ಲಿಸಲು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆಗೆ ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಪಾದಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
ಭದ್ರಾವತಿ, ಡಿ. ೧೧: ನಗರದ ಎಂಪಿಎಂ ಹಾಗು ವಿಐಎಸ್ಎಲ್ ಕಾರ್ಖಾನೆಗಳ ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ತಾಲೂಕಿನಾದ್ಯಂತ ಚಿಟಿಕೆ ಉಪ್ಪು ಸಂಗ್ರಹಿಸಿ ಮನವಿ ಸಲ್ಲಿಸಲು ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪಾದಯಾತ್ರೆ ಭಾನುವಾರ ಬಿ.ಎಚ್ ರಸ್ತೆ ಅಂಡರ್ಬ್ರಿಡ್ಜ್ ಬಳಿ ಇರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಆರಂಭಗೊಂಡಿತು.
ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಪಾದಯಾತ್ರೆಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಡಿ.೨೮ರವರೆಗೆ ನಗರಸಭೆ ವ್ಯಾಪ್ತಿಯಲ್ಲಿ ಡಿ.೩೦ರಿಂದ ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಪಾದಯಾತ್ರೆ ನಡೆಯಲಿದೆ.
ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತಾ, ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ ಮತ್ತು ರೈತ ಸಂಘ ಹಸಿರು ಸೇನೆ ವರಿಷ್ಠ ಕೆ.ಟಿ ಗಂಗಾಧರ್, ಶಾಸಕ ಬಿ.ಕೆ ಸಂಗಮೇಶ್ವರ್, ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ, ಜೆಡಿಎಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಶಿಕ್ಷಕ, ಗಾಯಕ ಹರೋನಹಳ್ಳಿ ಸ್ವಾಮಿ, ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾ ಸಮಿತಿ ಅಧ್ಯಕ್ಷೆ ಹನುಮಮ್ಮ, ನಗರಸಭೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣೆ, ವಿಜಯಮ್ಮ ಎನ್. ಗಿರಿಯಪ್ಪ ಸಿದ್ದಲಿಂಗಯ್ಯ, ಆಂಜನೇಯ, ಶಶಿಕುಮಾರ್ ಎಸ್. ಗೌಡ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಕಾರ್ಯಾಧ್ಯಕ್ಷ ಐ.ಎಲ್ ಅರುಣ್ಕುಮಾರ್, ಉಪಾಧ್ಯಕ್ಷರಾದ ಶೇಖರ್, ರಂಗಪ್ಪ, ಪ್ರಧಾನ ಸಂಚಾಲಕರಾದ ಶ್ರೀನಿವಾಸ್ ಮತ್ತು ಬಸವರಾಜ್ ಸೇರಿದಂತೆ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.