Wednesday, December 21, 2022

ಪರಿಸರ ಕಾಳಜಿ ಹೊಂದಿ, ಬದುಕಲು ಯೋಗ್ಯವನ್ನಾಗಿಸಿ : ಬಿ.ಎಲ್ ಚಂದ್ವಾನಿ

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಆಚರಿಸಲಾಗಿದ್ದ ಪರಿಸರ ಮಾಸಾಚರಣೆ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಮಾತಮಾಡಿದರು.
    ಭದ್ರಾವತಿ, ಡಿ. ೨೧ : ನಾವು ಪರಿಸರ ರಕ್ಷಣೆಯಲ್ಲಿ ಸಾಮೂಹಿಕವಾಗಿ ಮತ್ತು ವೈಯುಕ್ತಿಕವಾಗಿ ಕೊಡುಗೆ ನೀಡಬೇಕೆಂದು ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಹೇಳಿದರು.
    ಅವರು ಕಾರ್ಖಾನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪರಿಸರ ಮಾಸಾಚರಣೆ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಂದು ಕೆಲಸದಲ್ಲೂ ಪರಿಸರದ ಕಾಳಜಿ ವಹಿಸುವ ಜೊತೆಗೆ ಬದುಕಲು ಯೋಗ್ಯವನ್ನಾಗಿಸಬೇಕೆಂದರು.
    ಕಾರ್ಖಾನೆಯ ಹಿರಿಯ ಅಧಿಕಾರಿಗಳು ಪರಿಸರ ನೀತಿ ಹಾಗೂ ಪರಿಸರ ಪ್ರತಿಜ್ಞೆಗಳನ್ನು ಭೋದಿಸಿದರು.  ಮಾಸಾಚರಣೆ ಅಂಗವಾಗಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ, ಪರಿಸರ ರಸಪ್ರಶ್ನೆ ಮತ್ತು  ಚಿತ್ರಬರೆಯುವ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ಕಾರ್ಖಾನೆಯ ಅಧಿಕಾರಿಗಳು, ಕಾಯಂ ಮತ್ತು ಗುತ್ತಿಗೆ ಕಾರ್ಮಿಕರು ಹಾಗು ಶಾಲಾ ಮಕ್ಕಳು ಭಾಗವಹಿಸಿದ್ದರು.
    ಕಾರ್ಖಾನೆಯ ಭದ್ರಾ ಅತಿಥಿಗೃಹದಲ್ಲಿ ಮಾಸಾಚರಣೆಯ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಖಾನೆಯ ಮಹಾಪ್ರಬಂಧಕಿ (ಹಣಕಾಸು ಮತ್ತು ವಿತ್ತ) ಶೋಭ ಶಿವಶಂಕರನ್, ಇಸ್ಪಾತ್ ಮಹಿಳಾ ಸಮಾಜದ ಅಧ್ಯಕ್ಷೆ ದುಲಾರಿ ಚಂದ್ವಾನಿ, ಶಿವಮೊಗ್ಗ ಪ್ರಾದೇಶಿಕ ಕಛೇರಿ ಪರಿಸರ ಅಧಿಕಾರಿ(ಪ್ರಭಾರಿ) ಕೆ. ಶಿಲ್ಪಾ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
    ಹಿರಿಯ ಪ್ರಬಂಧಕ(ಹಣಕಾಸು) ಉನ್ನಿಕೃಷ್ಣನ್ ಪ್ರಾರ್ಥಿಸಿದರು. ಮಹಾಪ್ರಬಂಧಕರು (ಈ.ಎಂ.ಡಿ) ಡಿ. ಲೋಕೇಶ್ವರ ಸ್ವಾಗತಿಸಿ, ಆರ್. ಸತೀಶ್ ವಂದಿಸಿದರು.

ಜಮೀನಿನ ಹುಲ್ಲಿನ ಬಣವೆಯಲ್ಲಿ ಬೆಂಕಿ : ಲಕ್ಷಾಂತರ ರು. ನಷ್ಟ

ಹುಲ್ಲಿನ ಬಣವೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರು. ನಷ್ಟ ಉಂಟಾಗಿರುವ ಘಟನೆ ಭದ್ರಾವತಿ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ನಡೆದಿದೆ
    ಭದ್ರಾವತಿ, ಡಿ. ೨೧ : ಹುಲ್ಲಿನ ಬಣವೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರು. ನಷ್ಟ ಉಂಟಾಗಿರುವ ಘಟನೆ ತಾಲೂಕಿನ ದೊಣಬಘಟ್ಟ ಗ್ರಾಮದಲ್ಲಿ ನಡೆದಿದೆ.
    ಗ್ರಾಮದ ನಾಸೀರ್ ಎಂಬುವರ ಜಮೀನಿನ ಕಣದಲ್ಲಿದ್ದ ಹುಲ್ಲಿನ ಬಣವೆಗೆ ಬೆಂಕಿ ಬಿದ್ದಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೆಚ್ಚಿನ ನಷ್ಟ ತಪ್ಪಿದಂತಾಗಿದೆ. ಸುಮಾರು ೬ ಲಕ್ಷ ರು. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ದೀಪ ನಮಸ್ಕಾರ

ಭದ್ರಾವತಿ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಭಜನಾ ಮಂಡಳಿವತಿಯಿಂದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ದೀಪ ನಮಸ್ಕಾರ ವಿಜೃಂಭಣೆಯಿಂದ ನಡೆಯಿತು.
    ಭದ್ರಾವತಿ, ಡಿ. ೨೧: ನಗರದ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಭಜನಾ ಮಂಡಳಿವತಿಯಿಂದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ದೀಪ ನಮಸ್ಕಾರ ವಿಜೃಂಭಣೆಯಿಂದ ನಡೆಯಿತು.
ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ಸಂಗೀತ ಶಿಕ್ಷಕಿ ಡಿ.ಎಸ್.ಗಾಯಿತ್ರಿ ರವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಯುವ ಮುಖಂಡ ಬಿ.ಎಸ್ ಗಣೇಶ್ ಅಥಿತಿಗಳಾಗಿ ಆಗಮಿಸಿದ್ದರು.