Monday, December 26, 2022

ಕುವೆಂಪು ವಿಶ್ವವಿದ್ಯಾನಿಲಯ ನೌಕರರ ಹುದ್ದೆಗಳ ಉನ್ನತೀಕರಣದ ಪರಿನಿಯಮ ಅನುಮೋದನೆಗೆ ಒತ್ತಾಯ

ಕುವೆಂಪು ವಿಶ್ವವಿದ್ಯಾನಿಲಯ ನೌಕರರ ಹುದ್ದೆಗಳ ಉನ್ನತೀಕರಣದ ಪರಿನಿಯಮ ಅನುಮೋದನೆ ಕುರಿತು ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್‌ನಾರಾಯಣ್‌ರವರ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ಹಾಗೂ ಡಿ.ಎಸ್.ಅರುಣ್ ರವರು ಚರ್ಚಿಸಿದರು.
    ಭದ್ರಾವತಿ, ಡಿ. ೨೬: ಕುವೆಂಪು ವಿಶ್ವವಿದ್ಯಾನಿಲಯ ನೌಕರರ ಹುದ್ದೆಗಳ ಉನ್ನತೀಕರಣದ ಪರಿನಿಯಮ DRAFT STATUES GOVERNING THE UPGRADATION AND REORGANIZATION OF THE SANCTIONED MINISTERIAL POSTS IN THE KUVEMPU UNIVERSITY ಅನುಮೋದನೆ ಕುರಿತು ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್‌ನಾರಾಯಣ್‌ರವರ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ ಹಾಗೂ ಡಿ.ಎಸ್.ಅರುಣ್ ರವರು ಚರ್ಚಿಸಿದರು.
    ಕುವೆಂಪು ವಿಶ್ವವಿದ್ಯಾನಿಲಯದ ಅಧ್ಯಾಪಕೇತರ ನೌಕರರ ಸಂಘದವರ ಜೊತೆ ಸೇರಿ ಎಸ್. ರುದ್ರೇಗೌಡ ಹಾಗು ಡಿ.ಎಸ್ ಅರುಣ್‌ರವರು ಪರಿನಿಯಮದ ಅನುಮೋದನೆಗೆ ಒತ್ತಾಯಿಸಿದರು.
ಅಧ್ಯಾಪಕೇತರ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ಪ್ರತಿನಿಧಿಗಳಾದ ಎಂ.ಎಂ ಸ್ವಾಮಿ, ಪಿ. ಮಹೇಶ್, ಡಿ. ಕೃಷ್ಣ ಮತ್ತು ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸಂಸದ ಬಿ.ವೈ ರಾಘವೇಂದ್ರ, ಎಸ್. ರುದ್ರೇಗೌಡ, ಡಿ.ಎಸ್ ಅರುಣ್, ಪಟ್ಟಾಭಿರಾಮ್ ಜೀರವರಿಗೆ ಸಂಘ ಕೃತಜ್ಞತೆ ಸಲ್ಲಿಸಿದೆ.

ಜಿ. ರಾಜಶೇಖರಪ್ಪ ನಿಧನ

ಜಿ. ರಾಜಶೇಖರಪ್ಪ
    ಭದ್ರಾವತಿ, ಡಿ. ೨೬: ಹಳೇನಗರದ ವೀರಶೈವ ಸೇವಾ ಸಮಾಜದ ಅಧ್ಯಕ್ಷ ಆರ್. ಮಹೇಶ್‌ಕುಮಾರ್‌ರವರ ತಂದೆ ಜಮೀನ್ದಾರ್ ಜಿ. ರಾಜಶೇಖರಪ್ಪ(೯೨) ಸೋಮವಾರ ನಿಧನ ಹೊಂದಿದರು.
    ೩ ಪುತ್ರರು, ೩ ಪುತ್ರಿಯರು, ಅಳಿಯಂದಿರು, ಸೊಸೆಯಂದಿರು ಹಾಗು ಮೊಕ್ಕಳು ಇದ್ದರು. ಇವರ ಅಂತ್ಯಕ್ರಿಯೆ ಸಂಜೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು. ಇವರ ನಿಧನಕ್ಕೆ ವೀರಶೈವ ಸಮಾಜದ ವಿವಿಧ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ಐಎಂಎ ಅಧ್ಯಕ್ಷೆ ಡಾ. ಕವಿತಾ ಭಟ್ ನಿಧನ

ಡಾ. ಕವಿತಾ ಭಟ್
    ಭದ್ರಾವತಿ, ಡಿ. ೨೬: ಭಾರತೀಯ ವೈದ್ಯಕೀಯ ಸಂಘ(ಐಎಂಎ)ದ ತಾಲೂಕು ಶಾಖೆ ಅಧ್ಯಕ್ಷೆ ಡಾ. ಕವಿತಾ ಭಟ್(೬೩) ಸೋಮವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನ ಹೊಂದಿದರು.
    ಪತಿ, ಓರ್ವ ಪುತ್ರ ಇದ್ದರು. ಮಧ್ಯಾಹ್ನ ಊಟದ ಸಮಯದಲ್ಲಿ ಏಕಾಏಕಿ ಹೃದಯಾಘಾತವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
    ಇತ್ತೀಚೆಗೆ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಡಾ. ಕವಿತಾ ಭಟ್ ಹಾಗು ಇವರ ಪತಿ ಡಾ. ಕೆ.ಜಿ ಭಟ್ ಇಬ್ಬರು ಸಹ ನಗರದ  ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಕವಿತಾ ಭಟ್‌ರವರು ಭೂಮಿಕಾ ವೇದಿಕೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು, ವೈದ್ಯರು ಸಂತಾಪ ಸೂಚಿಸಿದ್ದಾರೆ.

ಜನ್ನಾಪುರ ಎನ್‌ಟಿಬಿ ಕಛೇರಿ ಮೆಸ್ಕಾಂ ಪಾವತಿ ಕೇಂದ್ರ ಸ್ಥಗಿತ ಆದೇಶ ಹಿಂಪಡೆಯಿರಿ


ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗೆ ಮನವಿ

 


ಭದ್ರಾವತಿ ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ ಕಛೇರಿ) ಹಾಗು ಉಂಬ್ಳೆಬೈಲು ರಸ್ತೆ, ಮೆಸ್ಕಾಂ ಘಟಕ-೨ ಕಛೇರಿ ಆವರಣದಲ್ಲಿರುವ ವಿದ್ಯುತ್ ಬಿಲ್ ಪಾವತಿ ಕೇಂದ್ರಗಳನ್ನು ಜ.೧, ೨೦೨೩ರಿಂದ ಸ್ಥಗಿತಗೊಳಿಸಲು ಮೆಸ್ಕಾಂ ಹೊರಡಿಸಿರುವ ಆದೇಶ ರದ್ದುಪಡಿಸಲು ಆಗ್ರಹಿಸಿ ಸೋಮವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಬ್ದುಲ್ ಮುನಾಫ್‌ರವರಿಗೆ ಮನವಿ ಸಲ್ಲಿಸಲಾಯಿತು. 
   ಭದ್ರಾವತಿ, ಡಿ. ೨೬ : ಜನ್ನಾಪುರ ನಗರಸಭೆ ಶಾಖಾ ಕಛೇರಿ(ಎನ್‌ಟಿಬಿ ಕಛೇರಿ) ಹಾಗು ಉಂಬ್ಳೆಬೈಲು ರಸ್ತೆ, ಮೆಸ್ಕಾಂ ಘಟಕ-೨ ಕಛೇರಿ ಆವರಣದಲ್ಲಿರುವ ವಿದ್ಯುತ್ ಬಿಲ್ ಪಾವತಿ ಕೇಂದ್ರಗಳನ್ನು ಜ.೧, ೨೦೨೩ರಿಂದ ಸ್ಥಗಿತಗೊಳಿಸಲು ಮೆಸ್ಕಾಂ ಹೊರಡಿಸಿರುವ ಆದೇಶ ರದ್ದುಪಡಿಸಲು ಆಗ್ರಹಿಸಿ ಸೋಮವಾರ ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಬ್ದುಲ್ ಮುನಾಫ್‌ರವರಿಗೆ ಮನವಿ ಸಲ್ಲಿಸಲಾಯಿತು.
     ಈ ಹಿಂದೆ ಅಂದಿನ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆಯವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದ ಪರಿಣಾಮ ನ್ಯೂಟೌನ್ ಭಾಗದ ಜನ್ನಾಪುರ, ಹುತ್ತಾಕಾಲೋನಿ, ಸಿದ್ದಾಪುರ, ಹೊಸೂರು ತಾಂಡ ಹಾಗು ನ್ಯೂಟೌನ್ ಭಾಗದ ಸ್ಲಂ ನಿವಾಸಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಸುಮಾರು ೪೦ ವರ್ಷಗಳ ಹಿಂದೆ ನಗರಸಭೆ ಜನ್ನಾಪುರ ಎನ್‌ಟಿಬಿ ಕಛೇರಿ ಆವರಣದಲ್ಲಿ ಪಾವತಿ ಕೇಂದ್ರ ಆರಂಭಿಸಲಾಯಿತು. ನಂತರ ದಿನಗಳಲ್ಲಿ ಎನ್‌ಟಿಬಿ ಕಛೇರಿಯಲ್ಲಿ ಉಚಿತವಾಗಿ ಕೊಠಡಿಯನ್ನು ಸಹ ನೀಡಲಾಯಿತು. ಅಲ್ಲದೆ ಸಾರ್ವಜನಿಕರಿಗೆ ಮಳೆ, ಬಿಸಿಲಿನಿಂದ ರಕ್ಷಣೆ ನೀಡುವ ಸಂಬಂಧ ಈ ಹಿಂದೆ ಪೌರಾಯುಕ್ತರಾಗಿದ್ದ ಮನೋಹರ್‌ರವರು ಶೆಲ್ಟರ್ ಸಹ ನಿರ್ಮಿಸಿಕೊಟ್ಟಿದ್ದಾರೆ. ಇದೀಗ ಈ ಕೇಂದ್ರವನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಿರುವುದು ಸರಿಯಲ್ಲ. ಈ ಹಿನ್ನಲೆಯಲ್ಲಿ ತಕ್ಷಣ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿದರು.
     ಪ್ರಮುಖರಾದ ಆರ್. ವೇಣುಗೋಪಾಲ್, ರಮಾವೆಂಕಟೇಶ್, ಶೈಲಜಾರಾಮಕೃಷ್ಣ, ದೇವಿಕಾನಾಗರಾಜ್, ಪಂಕಜಾ ನಟರಾಜ್, ವೇದಾ ಬಸವರಾಜ್, ಗೀತಾ, ಸುಜಾತ, ಲತಾ, ರಾಧಾ, ಇಂದ್ರಾಣಿ, ಶೈಲಜಾಮಹೇಶ್, ಶ್ರೀಲಕ್ಷ್ಮೀ, ಜಯಶ್ರೀ, ಬಿ.ವಿ ಶಶಿಕಲಾ, ಗೋಪಿ ಎಲೆಕ್ಟ್ರಿಕಲ್, ಆರ್. ಮುರುಗೇಶ್, ಎಂ.ವಿ ಚಂದ್ರಶೇಖರ್, ಎ. ವಿಶ್ವೇಶ್ವರರಾವ್, ಬಿ.ಎಸ್ ನವಾದ್, ಎಚ್.ಎನ್ ದಿನೇಶ್, ಜಾನ್ಸನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಡಾನೆಗಳ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಿ : ಮನವಿ

ಭದ್ರಾವತಿ ತಾಲೂಕಿನ ಕಾಡಂಚಿನ ಗ್ರಾಮಗಳಾದ ದೊಡ್ಡೇರಿ, ಬಾಳೇಕಟ್ಟೆ, ಬಿಸಿಲುಮನೆ, ಉಕ್ಕುಂದ ಮತ್ತು ವರವಿನಕೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಿವಾಸಿಗಳು ಸೋಮವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯರವರಿಗೆ ಮನವಿ ಸಲ್ಲಿಸಿದರು.
    ಭದ್ರಾವತಿ, ಡಿ. ೨೬ : ತಾಲೂಕಿನ ಕಾಡಂಚಿನ ಗ್ರಾಮಗಳಾದ ದೊಡ್ಡೇರಿ, ಬಾಳೇಕಟ್ಟೆ, ಬಿಸಿಲುಮನೆ, ಉಕ್ಕುಂದ ಮತ್ತು ವರವಿನಕೆರೆ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಿವಾಸಿಗಳು ಸೋಮವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯರವರಿಗೆ ಮನವಿ ಸಲ್ಲಿಸಿದರು.
    ನಮ್ಮ ಬಳಿ ಇರುವ ಅಲ್ಪಸ್ವಲ್ಪ ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಜೀವನ ಸಾಗಿಸುತ್ತಿದ್ದು, ತೆಂಗು, ಅಡಕೆ, ಭತ್ತ, ರಾಗಿ, ಜೋಳ, ಕಬ್ಬು ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆಯುತ್ತಿದ್ದು, ಇತ್ತೀಚೆಗೆ ಈ ಗ್ರಾಮಗಳ ವ್ಯಾಪ್ತಿಯಲ್ಲಿ ಒಂಟಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವುದು ಅಸಾಧ್ಯವಾಗಿದೆ. ಅಲ್ಲದೆ ಕಾಡಾನೆಗಳಿಂದ ಬೆಳೆ ಹಾನಿಯಾಗುತ್ತಿದ್ದು, ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ಅಳಲು ತೋರ್ಪಡಿಸಿಕೊಂಡರು.
ಕೇವಲ ಜಮೀನುಗಳಿಗೆ ಮಾತ್ರವಲ್ಲದೆ ಮನೆಗಳ ಬಳಿ ಸಹ ಕಾಡಾನೆಗಳು ಬರುತ್ತಿದ್ದು, ಇದರಿಂದಾಗಿ ಮನೆಯಿಂದ ಹೊರಬರಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ವಯೋವೃದ್ಧರು, ಮಕ್ಕಳು ಭಯಭೀತರಾಗಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಬೆಳೆ ಹಾನಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿದರು.
    ಮನವಿ ಸ್ವೀಕರಿಸಿ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶರಣಯ್ಯ, ಕಾಡಾನೆಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಮುಂದಾಗಲಿದೆ ಎಂದು ಭರವಸೆ ನೀಡಿ, ಕಾಡು ಪ್ರಾಣಿಗಳಿಂದ ಉಂಟಾದ ಬೆಳೆ ಹಾನಿಗೆ ಇಲಾಖೆವತಿಯಿಂದ ಪರಿಹಾರ ಸಹ ನೀಡಲಾಗುತ್ತಿದೆ ಎಂದರು.
    ಸಾಮಾಜಿಕ ಹೋರಾಟಗಾರ, ಉಕ್ಕುಂದ ಗ್ರಾಮದ ಶಿವಕುಮಾರ್, ಬಿ.ಎ ಕುಮಾರ್, ಕಾಶಿ, ಚಂದ್ರಶೇಖರ್, ರಘು, ಶಿವಯ್ಯ, ಕೃಷ್ಣಪ್ಪ, ಚಿನ್ನರಾಜು ಮತ್ತು ನಟರಾಜ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿಯ ಶ್ರೀ ಪಾಣಿ ಪೀಠದ ಶಿಲೆ ದರ್ಶನ, ಬೀಳ್ಕೊಡುಗೆ

ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದಲ್ಲಿ ಸುಮಾರು ೭೫ ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿ ಪ್ರತಿಷ್ಠಾಪನೆಗೊಳ್ಳುತ್ತಿದ್ದು,  ಲಿಂಗೋದ್ಭವ ಮೂರ್ತಿಯ ಶಿಲೆಯ ಒಂದು ಭಾಗವಾದ ಕೆಳಗಿನ ಶ್ರೀ ಪಾಣಿ ಪೀಠದ ಶಿಲೆ ಬೆಂಗಳೂರಿನಿಂದ ಆಗಮಿಸಿದ್ದು, ಭದ್ರಾವತಿ ನಗರದ ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಶಿಲೆಗೆ ವಿಶೇಷ ಪೂಜೆ ಸಲ್ಲಿಸಿ ಬೀಳ್ಕೊಡುಗೆ ನೀಡಲಾಯಿತು.
    ಭದ್ರಾವತಿ, ಡಿ. ೨೬: ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದಲ್ಲಿ ಸುಮಾರು ೭೫ ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯ ಮೂರ್ತಿ ಪ್ರತಿಷ್ಠಾಪನೆಗೊಳ್ಳುತ್ತಿದ್ದು,  ಲಿಂಗೋದ್ಭವ ಮೂರ್ತಿಯ ಶಿಲೆಯ ಒಂದು ಭಾಗವಾದ ಕೆಳಗಿನ ಶ್ರೀ ಪಾಣಿ ಪೀಠದ ಶಿಲೆ ಬೆಂಗಳೂರಿನಿಂದ ಆಗಮಿಸಿದ್ದು, ನಗರದ ಬೈಪಾಸ್ ರಸ್ತೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಶಿಲೆಗೆ ವಿಶೇಷ ಪೂಜೆ ಸಲ್ಲಿಸಿ ಬೀಳ್ಕೊಡುಗೆ ನೀಡಲಾಯಿತು.
    ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ತಾಲೂಕು ಅಧ್ಯಕ್ಷ ಜಿ. ಸುರೇಶಯ್ಯ ಹಾಗೂ ಶ್ರೀ ಮರುಳಸಿದ್ದೇಶರ ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ, ಮುಖಂಡರಾದ ರುದ್ರೇಶ್ ಶಾಸ್ತ್ರಿ, ರಾಜಣ್ಣ, ಶಿವಕುಮಾರ್, ಮೂರ್ತಣ್ಣ ಮಂಜುನಾಥ್ ಹಾಗೂ ಸರೋಜಮ್ಮ, ಕವಿತಾ, ಶ್ರೀ ಪೀಠದ ವೀರಶೈವ ಕಲ್ಯಾಣ ಮಂದಿರದ ವ್ಯವಸ್ಥಾಪಕ  ಅಶೋಕ್ ಕುಮಾರ್ ಸೇರಿದಂತೆ ಇನ್ನಿತರರು ಶಿಲೆಯ ದರ್ಶನ ಪಡೆದರು.