ಜಿ. ಅನುರಾಧ
ಭದ್ರಾವತಿ, ಜ. ೧೦ : ಕುವೆಂಪು ವಿಶ್ವ ವಿದ್ಯಾನಿಲಯದ ಕುಲಸಚಿವೆ ಜಿ. ಅನುರಾಧ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಅಧಿಸೂಚನೆ ಹೊರಡಿಸಿದೆ.
ಈ ಹಿಂದೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಕುವೆಂಪು ವಿಶ್ವ ವಿದ್ಯಾನಿಲಯಕ್ಕೆ ವರ್ಗಾವಣೆಗೊಂಡಿದ್ದರು. ಕುಲಸಚಿವೆಯಾಗಿ ಉತ್ತಮವಾಗಿ ಕರ್ತವ ನಿರ್ವಹಿಸುವ ಮೂಲಕ ಸಾಕಷ್ಟು ಸುಧಾರಣೆಗಳನ್ನು ಜಾರಿಗೆ ತಂದಿದ್ದರು. ಇದೀಗ ಏಕಾಏಕಿ ಅವರನ್ನು ವಿಜಯನಗರ ಜಿಲ್ಲೆ ಹೊಸಪೇಟೆ ಖಾಲಿ ಇರುವ ಅಪರ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.
No comments:
Post a Comment